AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಳ್ಳೆ ಸ್ಪಿನ್ನರ್​ನಂತೆ ಬೌಲಿಂಗ್ ಮಾಡ್ತಿದ್ದೀಯ… ಆಟಗಾರರ ನಡುವೆ ಮಾತಿನ ಚಕಮಕಿ

Ranji Trophy Final 2026: ರಣಜಿ ಟ್ರೋಫಿ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದು ಮುಂಬೈ ತಂಡ. ಮುಂಬೈ 42 ಬಾರಿ ಕಿರೀಟ ಮುಡಿಗೇರಿಸಿಕೊಂಡಿದೆ. ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಕರ್ನಾಟಕ. ಕರುನಾಡ ಪಡೆ ಈವರೆಗೆ 8 ಬಾರಿ ಚಾಂಪಿಯನ್ ಪಟ್ಟಕ್ಕೇರಿದೆ. ಆದರೆ 9ನೇ ಬಾರಿ ಟ್ರೋಫಿ ಎತ್ತಿ ಹಿಡಿಯುವ ಕನಸು ಬಹುತೇಕ ಕಮರಿದೆ.

ಒಳ್ಳೆ ಸ್ಪಿನ್ನರ್​ನಂತೆ ಬೌಲಿಂಗ್ ಮಾಡ್ತಿದ್ದೀಯ... ಆಟಗಾರರ ನಡುವೆ ಮಾತಿನ ಚಕಮಕಿ
Vyshak And Qamran
ಝಾಹಿರ್ ಯೂಸುಫ್
|

Updated on: Feb 28, 2026 | 9:53 AM

Share

ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ ಆಟಗಾರರ ನಡುವೆ ಮಾತಿನ ಚಕಮಕಿ ಮುಂದುವರೆದಿದೆ. ಈ ಪಂದ್ಯದ ಮೊದಲ ಇನಿಂಗ್ಸ್​ ವೇಳೆ ಪರಸ್ ಡೋಗ್ರಾ ಹಾಗೂ ಕೆವಿ ಅನೀಶ್ ಮೈದಾನದಲ್ಲೇ ಕಿತ್ತಾಡಿಕೊಂಡಿದ್ದರು. ಇದೀಗ ಕರ್ನಾಟಕ ವೇಗಿ ವೈಶಾಕ್ ವಿಜಯಕುಮಾರ್ ಹಾಗೂ ಜಮ್ಮು-ಕಾಶ್ಮೀರ ತಂಡದ ಆರಂಭಿಕ ದಾಂಡಿಗ ಖಮ್ರಾನ್ ಇಕ್ಬಾಲ್ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ.

ನಾಲ್ಕನೇ ದಿನದಾಟದಲ್ಲಿ ಜಮ್ಮು ಮತ್ತು ಕಾಶ್ಮೀರದ ಎರಡನೇ ಇನ್ನಿಂಗ್ಸ್‌ನ 49ನೇ ಓವರ್‌ನಲ್ಲಿ ವೈಶಾಕ್ ವಿಜಯಕುಮಾರ್ ಎಸೆದ ಬೌನ್ಸರ್ ಎಸೆದಿದ್ದರು. ಈ ಎಸೆತಕ್ಕೆ ಪ್ರತ್ಯುತ್ತರ ನೀಡಲು ಖಮ್ರಾನ್​ಗೆ ಸಾಧ್ಯವಾಗಿರಲಿಲ್ಲ. ಈ ವೇಳೆ ವೈಶಾಕ್ ಸ್ಟ್ರೈಕರ್​ನತ್ತ ಗುರಾಯಿಸುವ ಮೂಲಕ ಕೆಣಕಿದ್ದರು.

ಈ ವೇಳೆ ಖಮ್ರಾನ್ ಇಕ್ಬಾಲ್  “ಹೋಗಿ ಬೌಲಿಂಗ್ ಮಾಡು” ಎಂದು ಪ್ರತ್ಯುತ್ತರ ನೀಡಿದ್ದಾರೆ. ಇದಾಗ್ಯೂ ವೈಶಾಕ್ ವಿಜಯಕುಮಾರ್ ಗುರಾಯಿಸುವಿಕೆ ಮುಂದುವರೆಸಿದ್ದರು. ಈ ವೇಳೆ ಖಮ್ರಾನ್ ಇಕ್ಬಾಲ್, ನೀನು ಒಳ್ಳೆ ಸ್ಪಿನ್ನರ್​ನಂತೆ ಬೌಲಿಂಗ್ ಮಾಡ್ತಿದ್ದೀಯ, ಅಷ್ಟೊಂದು ನಿಧಾನವಾಗಿದೆ ಎಂದು ಲೇವಡಿ ಮಾಡಿದ್ದಾರೆ.

ಇದರಿಂದ ಕುಪಿತಗೊಂಡ ವೈಶಾಕ್ ಮತ್ತಷ್ಟು ವೇಗದಲ್ಲಿ ಚೆಂಡೆಸೆದರು ಆದರೆ ಈ ಎಸೆತದಲ್ಲಿ ಇಕ್ಬಾಲ್ ಅದ್ಭುತವಾಗಿ ಸಿಕ್ಸರ್‌ಗೆ ಅಟ್ಟುವ ಮೂಲಕ ತಿರುಗೇಟು ನೀಡಿದರು.

ಇದಾದ ಬಳಿಕ ಕೂಡ ಇಬ್ಬರ ನಡುವೆ ಮಾತಿನ ಚಕಮಕಿ ಮುಂದುವರೆಯಿತು. ಈ ವೇಳೆ ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ತಡೆಯಲು ಅಂಪೈರ್ ರೋಹನ್ ಪಂಡಿತ್ ಅವರು ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನಪಡಿಸಿದರು.

ಇನ್ನು ಈ ಪಂದ್ಯದಲ್ಲಿ ಜಮ್ಮು-ಕಾಶ್ಮೀರ ತಂಡವು ಗೆಲುವಿನತ್ತ ದಾಪುಗಾಲಿಟ್ಟಿದೆ. ಮೊದಲ ಇನಿಂಗ್ಸ್​ನಲ್ಲಿ 584 ರನ್​ ಪೇರಿಸಿದ್ದ ಕಾಶ್ಮೀರಿ ಪಡೆ ಕರ್ನಾಟಕ ತಂಡವನ್ನು ಕೇವಲ 293 ರನ್​ಗಳಿಗೆ ಆಲೌಟ್ ಮಾಡಿದ್ದರು. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 291 ರನ್​ಗಳ ಮುನ್ನಡೆ ಪಡೆದುಕೊಂಡಿದೆ.

ಇದಾಗ್ಯೂ ಫಾಲೋ ಆನ್ ಹೇರದೆ ಜಮ್ಮು-ಕಾಶ್ಮೀರ ತಂಡವು ದ್ವಿತೀಯ ಇನಿಂಗ್ಸ್ ಆರಂಭಿಸಿದ್ದು, ನಾಲ್ಕನೇ ದಿನದಾಟದ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 186 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಖಮ್ರಾನ್ ಇಕ್ಬಾಲ್ ಹಾಗೂ ಸಾಹಿಲ್ ಲೋಟ್ರ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಇದನ್ನೂ ಓದಿ: 12.4, 13.2, 13.5: ಹೀಗಿದೆ ಪಾಕಿಸ್ತಾನ್ ತಂಡದ ಸೆಮಿಫೈನಲ್ ಲೆಕ್ಕಾಚಾರ

ಇದೀಗ ಐದನೇ ದಿನದಾಟವು ನಡೆಯುತ್ತಿರುವುದರಿಂದ ಈ ಮ್ಯಾಚ್​ ಡ್ರಾನಲ್ಲಿ ಕೊನೆಗೊಳ್ಳುವುದು ಖಚಿತ. ಹೀಗಾಗಿ ಮೊದಲ ಇನಿಂಗ್ಸ್ ಆಧಾರದ ಮೇಲೆ ಇದೇ ಮೊದಲ ಬಾರಿಗೆ ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಲಿದೆ.

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ