AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಕ್ರಿಕೆಟ್ ಮಂಡಳಿಯಿಂದ ಮತ್ತಿಬ್ಬರು ಅನುಭವಿಗಳಿಗೆ ಗೇಟ್​ಪಾಸ್

PCB: 2023ರ ಏಕದಿನ ವಿಶ್ವಕಪ್‌ನಿಂದ ಪಾಕಿಸ್ತಾನ ತಂಡ ಮತ್ತು ಮಂಡಳಿಯ ನಡುವೆ ಗಲಾಟೆ ನಡೆಯುತ್ತಿದೆ. ಈ ಪಂದ್ಯಾವಳಿಯ ನಂತರ, ತಂಡದ ಕೋಚ್, ನಾಯಕ ಮತ್ತು ಆಯ್ಕೆಗಾರರನ್ನೂ ಸಹ ಬದಲಾಯಿಸಲಾಯಿತು. ಇದಲ್ಲದೇ ಕಳೆದ 4 ವರ್ಷಗಳಲ್ಲಿ 6 ಮಂದಿ ಆಯ್ಕೆಗಾರರನ್ನು ಬದಲಾಯಿಸಲಾಗಿದೆ.

ಪಾಕ್ ಕ್ರಿಕೆಟ್ ಮಂಡಳಿಯಿಂದ ಮತ್ತಿಬ್ಬರು ಅನುಭವಿಗಳಿಗೆ ಗೇಟ್​ಪಾಸ್
ಪಾಕಿಸ್ತಾನ ಕ್ರಿಕೆಟ್ ಮಂಡಳಿ
ಪೃಥ್ವಿಶಂಕರ
|

Updated on:Jul 10, 2024 | 7:21 PM

Share

ಕಳಪೆ ಪ್ರದರ್ಶನ ನೀಡಿದಾಗಲೆಲ್ಲ ಪಾಕ್ ಕ್ರಿಕೆಟ್ ಮಂಡಳಿಯಲ್ಲಿ ಶುರುವಾಗ ಬದಲಾವಣೆಯ ಪರ್ವ ಇದೀಗ ಟಿ20 ವಿಶ್ವಕಪ್ ಮುಗಿದ ಬಳಿಕವೂ ಮುಂದುವರೆದಿದೆ. 2024 ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡದ ಪ್ರದರ್ಶನ ತೀರಾ ಕಳಪೆಯಾಗಿತ್ತು. ಬಾಬರ್ ಆಝಂ ನಾಯಕತ್ವದಲ್ಲಿ ತಂಡಕ್ಕೆ ಸೂಪರ್-8 ತಲುಪಲು ಸಾಧ್ಯವಾಗಲಿಲ್ಲ. ಇದಲ್ಲದೇ ಅಮೆರಿಕದಂತಹ ದುರ್ಬಲ ತಂಡದ ವಿರುದ್ಧ ಪಾಕ್ ತಂಡ ಸೋತ ರೀತಿ ತಂಡವನ್ನು ನಗೆಪಾಟಲಿಗೀಡುಮಾಡಿದೆ. ಹೀಗಾಗಿ ಇದೀಗ ಮತ್ತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ವಿಶ್ವಕಪ್‌ನಲ್ಲಿ ತಂಡದ ಕಳಪೆ ಪ್ರದರ್ಶನದ ನಂತರ ಮಂಡಳಿಯಲ್ಲಿ ಇಬ್ಬರು ಅನುಭವಿಗಳಿಗೆ ತಲೆದಂಡವಾಗಿದೆ.

ಇಬ್ಬರು ಅನುಭವಿಗಳಿಗೆ ಕೋಕ್

ಟಿ20 ವಿಶ್ವಕಪ್‌ನಲ್ಲಿ ತಂಡದ ನಿರಾಶಾದಾಯಕ ಪ್ರದರ್ಶನದ ನಂತರ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಪ್ರಮುಖ ಬದಲಾವಣೆಯನ್ನು ಮಾಡಿದೆ. ಪಾಕಿಸ್ತಾನ ತಂಡದ ಆಯ್ಕೆಗಾರರ ​​ಹುದ್ದೆಯಿಂದ ವಹಾಬ್ ರಿಯಾಜ್ ಮತ್ತು ಅಬ್ದುಲ್ ರಜಾಕ್ ಅವರನ್ನು ಪಿಸಿಬಿ ವಜಾಗೊಳಿಸಿದೆ. ಇಲ್ಲಿಯವರೆಗೆ ಪುರುಷರ ತಂಡ ಹಾಗೂ ಮಹಿಳಾ ತಂಡಗಳ ಆಯ್ಕೆಗಾರರಾಗಿದ್ದ ಅಬ್ದುಲ್ ರಜಾಕ್ ಇದೀಗ ಉಭಯ ತಂಡಗಳ ಈ ಜವಾಬ್ದಾರಿಯಿಂದ ವಿಮುಕ್ತರಾಗಿದ್ದಾರೆ.

ವಹಾಬ್ ಪಯಣ ಅಂತ್ಯ

ಇಎಸ್‌ಪಿಎನ್ ವರದಿಯ ಪ್ರಕಾರ, 2024 ರ ಟಿ 20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡದ ಕಳಪೆ ಪ್ರದರ್ಶನದಿಂದಾಗಿ ಬಾಬರ್ ಸೇನೆಯು ಪಂದ್ಯಾವಳಿಯಿಂದ ಹೊರಗುಳಿದ ತಕ್ಷಣ, ವಹಾಬ್ ರಿಯಾಜ್ ಸ್ಥಾನಕ್ಕೆ ಕುತ್ತು ಎದುರಾಗಿತ್ತು. 2024ರಲ್ಲಿಯೇ ದೊಡ್ಡ ಜವಾಬ್ದಾರಿ ಪಡೆದುಕೊಂಡಿದ್ದ ವಹಾಬ್‌ ಇದೀಗ ಬಹುಬೇಗನೇ ತಮ್ಮ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಇದೀಗ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು 7 ಸದಸ್ಯರ ಆಯ್ಕೆಗಾರರ ​​ತಂಡದಲ್ಲಿ ಬದಲಾವಣೆಗಳನ್ನು ಮಾಡಲಿದೆ.

ನಿರಂತರ ಸಂಘರ್ಷ

2023ರ ಏಕದಿನ ವಿಶ್ವಕಪ್‌ನಿಂದ ಪಾಕಿಸ್ತಾನ ತಂಡ ಮತ್ತು ಮಂಡಳಿಯ ನಡುವೆ ಗಲಾಟೆ ನಡೆಯುತ್ತಿದೆ. ಈ ಪಂದ್ಯಾವಳಿಯ ನಂತರ, ತಂಡದ ಕೋಚ್, ನಾಯಕ ಮತ್ತು ಆಯ್ಕೆಗಾರರನ್ನೂ ಸಹ ಬದಲಾಯಿಸಲಾಯಿತು. ಇದಲ್ಲದೇ ಕಳೆದ 4 ವರ್ಷಗಳಲ್ಲಿ 6 ಮಂದಿ ಆಯ್ಕೆಗಾರರನ್ನು ಬದಲಾಯಿಸಲಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 pm, Wed, 10 July 24

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ