IND vs SL: ಭಾರತದ ವಿರುದ್ಧದ ಸರಣಿಯಿಂದ ವನಿಂದು ಹಸರಂಗ ಔಟ್

India vs Sri Lanka: ಭಾರತ ಮತ್ತು ಶ್ರೀಲಂಕಾ ನಡುವಣ ಮೊದಲ ಏಕದಿನ ಪಂದ್ಯವು ಟೈ ಆಗಿದೆ. ಇದೀಗ ಉಭಯ ತಂಡಗಳು 2ನೇ ಏಕದಿನ ಪಂದ್ಯಕ್ಕಾಗಿ ಸಜ್ಜಾಗಿದೆ. ಭಾನುವಾರ ಕೊಲಂಬೊದ ಆರ್​ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸರಣಿಯಲ್ಲಿ ಮುನ್ನಡೆ ಸಾಧಿಸುವ ವಿಶ್ವಾಸದಲ್ಲಿದೆ.

IND vs SL: ಭಾರತದ ವಿರುದ್ಧದ ಸರಣಿಯಿಂದ ವನಿಂದು ಹಸರಂಗ ಔಟ್
Wanindu Hasaranga
Follow us
|

Updated on:Aug 04, 2024 | 9:14 AM

ಭಾರತದ ವಿರುದ್ಧದ ಏಕದಿನ ಸರಣಿಯಿಂದ ಶ್ರೀಲಂಕಾ ತಂಡದ ಆಲ್​ರೌಂಡರ್ ವನಿಂದು ಹಸರಂಗ ಹೊರಬಿದ್ದಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹಸರಂಗ ಇದೀಗ ಮಂಡಿರಜ್ಜು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಹೀಗಾಗಿ ಉಳಿದೆರಡು ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ಶ್ರೀಲಂಕಾ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹಸರಂಗ 24 ರನ್​ಗಳ ಕೊಡುಗೆ ನೀಡಿದ್ದರು. ಹಾಗೆಯೇ 3 ವಿಕೆಟ್ ಕಬಳಿಸಿ ಮಿಂಚಿದ್ದರು. ಇದೀಗ ಗಾಯದ ಕಾರಣ ಎರಡನೇ ಮತ್ತು ಮೂರನೇ ಏಕದಿನ ಪಂದ್ಯಗಳಿಂದ ಹಸರಂಗ ಹೊರಗುಳಿಯಲು ನಿರ್ಧರಿಸಿದ್ದಾರೆ. ಇನ್ನು ಹಸರಂಗ ಅವರ ಬದಲಿಯಾಗಿ ಜೆಫ್ರಿ ವಾಂಡರ್ಸೆ ತಂಡಕ್ಕೆ ಆಯ್ಕೆಯಾಗಿದ್ದಾರೆ.

5 ಆಟಗಾರರು ಅಲಭ್ಯ:

ಭಾರತದ ವಿರುದ್ಧದ ಏಕದಿನ ಸರಣಿಯಿಂದ ಈವರೆಗೆ ಒಟ್ಟು 5 ಆಟಗಾರರು ಹೊರಗುಳಿದಿದ್ದಾರೆ. ಮಂಡಿರಜ್ಜು ಗಾಯದ ಸಮಸ್ಯೆಯ ಕಾರಣ ದಿಲ್ಶಾನ್ ಮಧುಶಂಕ ಈ ಸರಣಿಯಿಂದ ಹೊರಗುಳಿದಿದ್ದರು. ಇದರ ಬೆನ್ನಲ್ಲೇ ಭುಜದ ನೋವಿನ ಕಾರಣ ಮಥೀಶ ಪತಿರಾಣ ಕೂಡ ಏಕದಿನ ಸರಣಿಯಿಂದ ಹಿಂದೆ ಸರಿದಿದ್ದರು.

ಇದಕ್ಕೂ ಮುನ್ನ ಉಸಿರಾಟದ ಸೋಂಕಿನ ಕಾರಣ ದುಷ್ಮಂತ ಚಮೀರ ಹೊರಗುಳಿದರೆ, ನುವಾನ್ ತುಷಾರ ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿ ಏಕದಿನ ಸರಣಿಯಿಂದ ಹೊರಗುಳಿದಿದ್ದರು. ಇದೀಗ ವನಿಂದು ಹಸರಂಗ ಕೂಡ ಗಾಯದ ಕಾರಣ ಕೊನೆಯ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಶ್ರೀಲಂಕಾ ತಂಡ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಾಲ್ ಮೆಂಡಿಸ್ (ವಿಕೆಟ್ ಕೀಪರ್), ಸದೀರ ಸಮರವಿಕ್ರಮ, ಚರಿತ್ ಅಸಲಂಕಾ (ನಾಯಕ), ಜನಿತ್ ಲಿಯಾನಗೆ, ದುನಿತ್ ವೆಲ್ಲಲಾಗೆ, ಅಕಿಲ ದನಂಜಯ, ಮೊಹಮ್ಮದ್ ಶಿರಾಝ್, ಅಸಿತ ಫೆರ್ನಾಂಡೋ, ಜೆಫ್ರಿ ವಾಂಡರ್ಸೆ, ಚಮಿಕ ಕರುಣಾರತ್ನೆ, ಕಮಿಂದು ಮೆಂಡಿಸ್, ನಿಶಾನ್ ಮದುಷ್ಕ, ಮಹೀಶ್ ತೀಕ್ಷಣ, ಈಶಾನ್ ಮಾಲಿಂಗ.

ಇದನ್ನೂ ಓದಿ: IPL 2025: RCB ತಂಡದಿಂದ ಗ್ಲೆನ್ ಮ್ಯಾಕ್ಸ್​ವೆಲ್ ಔಟ್?

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್ , ಖಲೀಲ್ ಅಹ್ಮದ್, ಹರ್ಷಿತ್ ರಾಣ.

Published On - 9:00 am, Sun, 4 August 24

ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?