AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್, ವಿಶ್ವಕಪ್​ನಿಂದ ಔಟ್: ಇದೀಗ ನಾಯಕನಾಗಿ ಎಂಟ್ರಿ..!

Wanindu Hasaranga: ಈ ಬಾರಿಯ ಐಪಿಎಲ್ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ವನಿಂದು ಹಸರಂಗ ಅವರನ್ನು ರಿಲೀಸ್ ಮಾಡಿತ್ತು. ಅದರಂತೆ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಲಂಕಾ ಸ್ಪಿನ್ನರ್ ಅನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿದೆ.

ಏಷ್ಯಾಕಪ್, ವಿಶ್ವಕಪ್​ನಿಂದ ಔಟ್: ಇದೀಗ ನಾಯಕನಾಗಿ ಎಂಟ್ರಿ..!
Sri Lanka Team
TV9 Web
| Edited By: |

Updated on:Dec 30, 2023 | 3:01 PM

Share

ಶ್ರೀಲಂಕಾ ಟಿ20 ತಂಡದ ನೂತನ ನಾಯಕನಾಗಿ ವನಿಂದು ಹಸರಂಗ (Wanindu Hasaranga) ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ನಾಯಕರಾಗಿದ್ದ ದಸುನ್ ಶಾನಕ ಅವರನ್ನು ಕಪ್ತಾನನ ಸ್ಥಾನದಿಂದ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಕೆಳಗಿಳಿಸಿದೆ. ಅಲ್ಲದೆ ಹೊಸ ನಾಯಕನಾಗಿ​ ಹಸರಂಗ ಅವರನ್ನು ಆಯ್ಕೆ ಮಾಡಲಾಗಿದೆ.

ಅಚ್ಚರಿ ಎಂದರೆ ವನಿಂದು ಹಸರಂಗ ಕಳೆದ ಆಗಸ್ಟ್​ನಿಂದ ಶ್ರೀಲಂಕಾ ಪರ ಯಾವುದೇ ಪಂದ್ಯವಾಡಿಲ್ಲ. ಲಂಕಾ ಪ್ರೀಮಿಯರ್ ಲೀಗ್ ವೇಳೆ ಗಾಯಗೊಂಡಿದ್ದ ಹಸರಂಗ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಿಂದ ಹೊರಗುಳಿದಿದ್ದರು. ಇದೀಗ ನಾಯಕನಾಗಿ ತಂಡಕ್ಕೆ ಕಂಬ್ಯಾಕ್ ಮಾಡಲು ವನಿಂದು ಹಸರಂಗ ಸಜ್ಜಾಗಿದ್ದಾರೆ.

ಅದರಂತೆ ಜನವರಿಯಲ್ಲಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಮೂಲಕ ವನಿಂದು ಹಸರಂಗ ಶ್ರೀಲಂಕಾ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಲಿದ್ದಾರೆ. ಈ ಸರಣಿಯಲ್ಲಿ ಶೀಲಂಕಾ 3 ಟಿ20 ಪಂದ್ಯಗಳನ್ನಾಡಲಿದೆ. ಇತ್ತ ಜೂನ್ 4 ರಿಂದ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಶ್ರೀಲಂಕಾ ತಂಡವನ್ನು ಆಲ್​ರೌಂಡರ್ ವನಿಂದು ಹಸರಂಗ ಅವರೇ ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ.

ವನಿಂದು ಹಸರಂಗ

SRH ಪಾಲಾದ RCB ಆಟಗಾರ:

ಈ ಬಾರಿಯ ಐಪಿಎಲ್ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ವನಿಂದು ಹಸರಂಗ ಅವರನ್ನು ರಿಲೀಸ್ ಮಾಡಿತ್ತು. ಅದರಂತೆ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಲಂಕಾ ಸ್ಪಿನ್ನರ್ ಅನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿದೆ. ಅದು ಕೂಡ 1.5 ಕೋಟಿ ರೂ. ಮೂಲ ಬೆಲೆಗೆ ಎಂಬುದು ವಿಶೇಷ.

ಇದನ್ನೂ ಓದಿ: IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!

ಅಂದರೆ ಈ ಹಿಂದೆ ಹಸರಂಗಗೆ ಆರ್​ಸಿಬಿ ಫ್ರಾಂಚೈಸಿ ನೀಡಿದ್ದ ಮೊತ್ತ ಬರೋಬ್ಬರಿ 10.75 ಕೋಟಿ ರೂ. ಇದೀಗ ಕೇವಲ 1.5 ಕೋಟಿ ರೂ.ಗೆ ಶ್ರೀಲಂಕಾ ಸ್ಪಿನ್ ಆಲ್​ರೌಂಡರ್​ನನ್ನು ಎಸ್​ಆರ್​ಹೆಚ್ ಫ್ರಾಂಚೈಸಿ ಖರೀದಿಸಿದೆ.

ಶ್ರೀಲಂಕಾ ತಂಡದ ಹೊಸ ನಾಯಕರುಗಳು:

  • ಏಕದಿನ ತಂಡದ ನಾಯಕ: ಕುಸಾಲ್ ಮೆಂಡಿಸ್
  • ಏಕದಿನ ತಂಡದ ಉಪನಾಯಕ: ಚರಿತ್ ಅಸಲಂಕಾ
  • ಟಿ20 ತಂಡದ ನಾಯಕ: ವನಿಂದು ಹಸರಂಗ
  • ಟಿ20 ತಂಡದ ಉಪನಾಯಕ: ಚರಿತ್ ಅಸಲಂಕಾ

Published On - 1:47 pm, Sat, 30 December 23

Follow Us
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ