AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾಕಪ್, ವಿಶ್ವಕಪ್​ನಿಂದ ಔಟ್: ಇದೀಗ ನಾಯಕನಾಗಿ ಎಂಟ್ರಿ..!

Wanindu Hasaranga: ಈ ಬಾರಿಯ ಐಪಿಎಲ್ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ವನಿಂದು ಹಸರಂಗ ಅವರನ್ನು ರಿಲೀಸ್ ಮಾಡಿತ್ತು. ಅದರಂತೆ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಲಂಕಾ ಸ್ಪಿನ್ನರ್ ಅನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿದೆ.

ಏಷ್ಯಾಕಪ್, ವಿಶ್ವಕಪ್​ನಿಂದ ಔಟ್: ಇದೀಗ ನಾಯಕನಾಗಿ ಎಂಟ್ರಿ..!
Sri Lanka Team
TV9 Web
| Edited By: |

Updated on:Dec 30, 2023 | 3:01 PM

Share

ಶ್ರೀಲಂಕಾ ಟಿ20 ತಂಡದ ನೂತನ ನಾಯಕನಾಗಿ ವನಿಂದು ಹಸರಂಗ (Wanindu Hasaranga) ಕಾಣಿಸಿಕೊಳ್ಳಲಿದ್ದಾರೆ. ಈ ಹಿಂದೆ ನಾಯಕರಾಗಿದ್ದ ದಸುನ್ ಶಾನಕ ಅವರನ್ನು ಕಪ್ತಾನನ ಸ್ಥಾನದಿಂದ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಕೆಳಗಿಳಿಸಿದೆ. ಅಲ್ಲದೆ ಹೊಸ ನಾಯಕನಾಗಿ​ ಹಸರಂಗ ಅವರನ್ನು ಆಯ್ಕೆ ಮಾಡಲಾಗಿದೆ.

ಅಚ್ಚರಿ ಎಂದರೆ ವನಿಂದು ಹಸರಂಗ ಕಳೆದ ಆಗಸ್ಟ್​ನಿಂದ ಶ್ರೀಲಂಕಾ ಪರ ಯಾವುದೇ ಪಂದ್ಯವಾಡಿಲ್ಲ. ಲಂಕಾ ಪ್ರೀಮಿಯರ್ ಲೀಗ್ ವೇಳೆ ಗಾಯಗೊಂಡಿದ್ದ ಹಸರಂಗ ಏಷ್ಯಾಕಪ್ ಹಾಗೂ ಏಕದಿನ ವಿಶ್ವಕಪ್​ನಿಂದ ಹೊರಗುಳಿದಿದ್ದರು. ಇದೀಗ ನಾಯಕನಾಗಿ ತಂಡಕ್ಕೆ ಕಂಬ್ಯಾಕ್ ಮಾಡಲು ವನಿಂದು ಹಸರಂಗ ಸಜ್ಜಾಗಿದ್ದಾರೆ.

ಅದರಂತೆ ಜನವರಿಯಲ್ಲಿ ಝಿಂಬಾಬ್ವೆ ವಿರುದ್ಧದ ಟಿ20 ಸರಣಿಯ ಮೂಲಕ ವನಿಂದು ಹಸರಂಗ ಶ್ರೀಲಂಕಾ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಲಿದ್ದಾರೆ. ಈ ಸರಣಿಯಲ್ಲಿ ಶೀಲಂಕಾ 3 ಟಿ20 ಪಂದ್ಯಗಳನ್ನಾಡಲಿದೆ. ಇತ್ತ ಜೂನ್ 4 ರಿಂದ ಟಿ20 ವಿಶ್ವಕಪ್ ಕೂಡ ಶುರುವಾಗಲಿದೆ. ಹೀಗಾಗಿ ಟಿ20 ವಿಶ್ವಕಪ್​ನಲ್ಲೂ ಶ್ರೀಲಂಕಾ ತಂಡವನ್ನು ಆಲ್​ರೌಂಡರ್ ವನಿಂದು ಹಸರಂಗ ಅವರೇ ಮುನ್ನಡೆಸುವ ಸಾಧ್ಯತೆ ಹೆಚ್ಚಿದೆ.

ವನಿಂದು ಹಸರಂಗ

SRH ಪಾಲಾದ RCB ಆಟಗಾರ:

ಈ ಬಾರಿಯ ಐಪಿಎಲ್ ಮಿನಿ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ವನಿಂದು ಹಸರಂಗ ಅವರನ್ನು ರಿಲೀಸ್ ಮಾಡಿತ್ತು. ಅದರಂತೆ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಲಂಕಾ ಸ್ಪಿನ್ನರ್ ಅನ್ನು ಸನ್​ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಖರೀದಿಸಿದೆ. ಅದು ಕೂಡ 1.5 ಕೋಟಿ ರೂ. ಮೂಲ ಬೆಲೆಗೆ ಎಂಬುದು ವಿಶೇಷ.

ಇದನ್ನೂ ಓದಿ: IPL 2024: ಒಂದು ಎಸೆತದ ಬೆಲೆ ಬರೋಬ್ಬರಿ 7.40 ಲಕ್ಷ ರೂ..!

ಅಂದರೆ ಈ ಹಿಂದೆ ಹಸರಂಗಗೆ ಆರ್​ಸಿಬಿ ಫ್ರಾಂಚೈಸಿ ನೀಡಿದ್ದ ಮೊತ್ತ ಬರೋಬ್ಬರಿ 10.75 ಕೋಟಿ ರೂ. ಇದೀಗ ಕೇವಲ 1.5 ಕೋಟಿ ರೂ.ಗೆ ಶ್ರೀಲಂಕಾ ಸ್ಪಿನ್ ಆಲ್​ರೌಂಡರ್​ನನ್ನು ಎಸ್​ಆರ್​ಹೆಚ್ ಫ್ರಾಂಚೈಸಿ ಖರೀದಿಸಿದೆ.

ಶ್ರೀಲಂಕಾ ತಂಡದ ಹೊಸ ನಾಯಕರುಗಳು:

  • ಏಕದಿನ ತಂಡದ ನಾಯಕ: ಕುಸಾಲ್ ಮೆಂಡಿಸ್
  • ಏಕದಿನ ತಂಡದ ಉಪನಾಯಕ: ಚರಿತ್ ಅಸಲಂಕಾ
  • ಟಿ20 ತಂಡದ ನಾಯಕ: ವನಿಂದು ಹಸರಂಗ
  • ಟಿ20 ತಂಡದ ಉಪನಾಯಕ: ಚರಿತ್ ಅಸಲಂಕಾ

Published On - 1:47 pm, Sat, 30 December 23

ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​
ಐದೇ ನಿಮಿಷ, ಪಕ್ಕಾ ಪ್ಲ್ಯಾನ್​​: ಕೆಜಿಗಟ್ಟಲೆ ಚಿನ್ನ ಕದ್ದು ಎಸ್ಕೇಪ್​