Wanindu Hasaranga: ಕಂಬ್ಯಾಕ್ ಬೆನ್ನಲ್ಲೇ ಅಮಾನತುಗೊಂಡ ವನಿಂದು ಹಸರಂಗ

Wanindu Hasaranga: ಶ್ರೀಲಂಕಾ ಪರ 48 ಏಕದಿನ ಪಂದ್ಯಗಳನ್ನಾಡಿರುವ 67 ವಿಕೆಟ್ ಕಬಳಿಸಿದ್ದಾರೆ. ಹಾಗೆಯೇ 58 ಟಿ20 ಪಂದ್ಯಗಳಿಂದ 91 ವಿಕೆಟ್ ಪಡೆದು ಮಿಂಚಿದ್ದಾರೆ.’ಇತ್ತ ಸೀಮಿತ ಓವರ್ ಕ್ರಿಕೆಟ್​ನತ್ತ ಗಮನ ಕೇಂದ್ರೀಕರಿಸಲು ಮುಂದಾಗಿದ್ದ ವನಿಂದು ಹಸರಂಗ ಇದೀಗ ಟೆಸ್ಟ್ ಕ್ರಿಕೆಟ್​ಗೆ ಕಂಬ್ಯಾಕ್ ಮಾಡಲು ಸಜ್ಜಾಗಿ ನಿಂತಿದ್ದಾರೆ.

Wanindu Hasaranga: ಕಂಬ್ಯಾಕ್ ಬೆನ್ನಲ್ಲೇ ಅಮಾನತುಗೊಂಡ ವನಿಂದು ಹಸರಂಗ
Wanindu Hasaranga
Follow us
| Updated By: ಝಾಹಿರ್ ಯೂಸುಫ್

Updated on: Mar 20, 2024 | 2:04 PM

ಆಗಸ್ಟ್, 2023 ರಲ್ಲಿ ಟೆಸ್ಟ್ ಕ್ರಿಕೆ್​ಗೆ ವಿದಾಯ ಹೇಳಿದ್ದ ಶ್ರೀಲಂಕಾ ತಂಡದ ಆಲ್​ರೌಂಡರ್ ವನಿಂದು ಹಸರಂಗ (Wanindu Hasaranga) ಇದೀಗ ಯೂಟರ್ನ್​ ಹೊಡೆದಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿ ಮೂಲಕ ಹಸರಂಗ ಕಂಬ್ಯಾಕ್ ಮಾಡಲು ನಿರ್ಧರಿಸಿದ್ದು, ಇದರ ಬೆನ್ನಲ್ಲೇ ಐಸಿಸಿ ಕಡೆಯಿಂದ ಅಮಾನತುಗೊಂಡಿದ್ದಾರೆ. ಶ್ರೀಲಂಕಾ ಮತ್ತು ಬಾಂಗ್ಲಾದೇಶ ತಂಡಗಳು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಮೊದಲ ಪಂದ್ಯ ಮಾರ್ಚ್ 22 ರಂದು ಸಿಲ್ಹೆಟ್‌ನಲ್ಲಿರುವ ಸಿಲ್ಹೆಟ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಈ ಪಂದ್ಯದ ಮೂಲಕ ಟೆಸ್ಟ್ ಕ್ರಿಕೆಟ್​ಗೆ ಮರಳಲು ಸಿದ್ದರಾಗಿದ್ದ ಹಸರಂಗಗೆ ಇದೀಗ ಐಸಿಸಿ ಬಿಗ್ ಶಾಕ್ ನೀಡಿದೆ.

ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ನಡೆದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಅಂಪೈರ್ ತೀರ್ಪಿನ ವಿರುದ್ಧ ಹಸರಂಗ ಮೈದಾನದಲ್ಲೇ ಅಸಮಾಧಾನ ಹೊರಹಾಕಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಮ್ಯಾಚ್ ರೆಫರಿ, ವನಿಂದು ಹಸರಂಗ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

ವನಿಂದು ಹಸರಂಗ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.8 ಅನ್ನು ಅವರು ಉಲ್ಲಂಘಿಸಿದ್ದಾರೆ. ಹೀಗಾಗಿ ಅವರಿಗೆ ಪಂದ್ಯದ ಶುಲ್ಕದ 50% ದಂಡ ವಿಧಿಸಲಾಗಿದೆ. ಹಾಗೆಯೇ ಮೂರು ಡಿಮೆರಿಟ್ ಅಂಕಗಳನ್ನು ನೀಡಲಾಗಿದೆ.

ಇದಕ್ಕೂ ಮುನ್ನ ದಂಬುಲ್ಲಾದಲ್ಲಿ ನಡೆದ ಅಫ್ಘಾನಿಸ್ತಾನ್​ ವಿರುದ್ಧದ ಟಿ20 ಸರಣಿಯಲ್ಲಿ ಮತ್ತು ಬಾಂಗ್ಲಾ ವಿರುದ್ಧದ ಟಿ20 ಸರಣಿಗಳಲ್ಲಿ ಐಸಿಸಿ ನಿಯಮ ಉಲ್ಲಂಘಿಸಿದ್ದಕ್ಕಾಗಿ 5 ಡಿಮೆರಿಟ್ ಅಂಕಗಳನ್ನು ನೀಡಲಾಗಿತ್ತು. ಅದರಂತೆ ಇದೀಗ ಅವರ ಡಿಮೆರಿಟ್ ಅಂಕಗಳ ಸಂಖ್ಯೆ ಗರಿಷ್ಠತೆಯನ್ನು ಮೀರಿದ್ದು, ಹೀಗಾಗಿ ಹಸರಂಗ ಅವರ ಮೇಲೆ 2 ಟೆಸ್ಟ್ ಪಂದ್ಯಗಳ ನಿಷೇಧ ಹೇರಲಾಗಿದೆ.

ಐಸಿಸಿ ನಿಯಮದಂತೆ 8 ಡಿಮೆರಿಟ್ ಅಂಕ ಪಡೆದ ಆಟಗಾರರಿಗೆ 4 ಏಕದಿನ ಅಥವಾ 4 ಟಿ20 ಅಥವಾ 2 ಟೆಸ್ಟ್ ಪಂದ್ಯಗಳಲ್ಲಿ ನಿಷೇಧ ಹೇರಲಾಗುತ್ತದೆ. ಅದರಂತೆ ಇದೀಗ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಯಿಂದ ವನಿಂದು ಹಸರಂಗ ಹೊರಬಿದ್ದಿದ್ದಾರೆ.

ಇದನ್ನೂ ಓದಿ: Wanindu Hasaranga: ಲಸಿತ್ ಮಾಲಿಂಗ ದಾಖಲೆ ಮುರಿದ ವನಿಂದು ಹಸರಂಗ

ಅಂದಹಾಗೆ ವನಿಂದು ಹಸರಂಗ ಶ್ರೀಲಂಕಾ ಪರ ಇದುವರೆಗೆ ಕೇವಲ 4 ಟೆಸ್ಟ್ ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ ವೇಳೆ ಕೇವಲ 4 ವಿಕೆಟ್ ಪಡೆಯುವಲ್ಲಿ ಮಾತ್ರ ಯಶಸ್ವಿಯಾಗಿದ್ದರು. ಇನ್ನು 2021 ರ ಬಳಿಕ ಅವರು ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಕಂಬ್ಯಾಕ್ ಮಾಡಲು ಸಜ್ಜಾದ ಆಟಗಾರ ಅಮಾನತಿನ ಶಿಕ್ಷೆಗೊಳಗಾಗಿರುವುದು ವಿಪರ್ಯಾಸ.

‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ