Virat Kohli: ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯಲಿದ್ದಾರಾ ವಿರಾಟ್ ಕೊಹ್ಲಿ?

Rohit Sharma: ರೋಹಿತ್ ಅವರ ಪ್ರದರ್ಶನ ಕೆಟ್ಟದಾಗಿದ್ದರೆ, ಅವರು ಕೆಟ್ಟ ಬ್ಯಾಟ್ಸ್‌ಮನ್ ಎಂದು ಅರ್ಥವಲ್ಲ. ಫಾರ್ಮ್​ ಕಳೆದುಕೊಂಡಿದ್ದಾರೆ ಅಷ್ಟೇ.

Virat Kohli: ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯಲಿದ್ದಾರಾ ವಿರಾಟ್ ಕೊಹ್ಲಿ?
Virat kohli
Follow us
| Updated By: ಝಾಹಿರ್ ಯೂಸುಫ್

Updated on: Jun 06, 2022 | 2:59 PM

ಟೀಮ್ ಇಂಡಿಯಾದ (Team India) ದಿಗ್ಗಜ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಬಹಳ ದಿನಗಳಿಂದ ಫಾರ್ಮ್ ಕಳೆದುಕೊಂಡಿದ್ದಾರೆ. ಕೊಹ್ಲಿಯನ್ನು ಪ್ರಸ್ತುತ ಯುಗದ ಅತ್ಯುತ್ತಮ ಆಟಗಾರರೆಂದು ಪರಿಗಣಿಸಲಾಗಿದೆ. ಏಕೆಂದರೆ ಕೊಹ್ಲಿ ಈಗಾಗಲೇ 70 ಅಂತರಾಷ್ಟ್ರೀಯ ಶತಕಗಳನ್ನು ಸಿಡಿಸಿದ್ದಾರೆ. ಒಂದು ಕಾಲದಲ್ಲಿ ಸಚಿನ್ ಅವರ 100 ಶತಕಗಳ ದಾಖಲೆಯನ್ನು ಕೊಹ್ಲಿ ಸುಲಭವಾಗಿ ಮುರಿಯಲಿದ್ದಾರೆ ಎನ್ನಲಾಗಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ವಿರಾಟ್​ ಕೊಹ್ಲಿ ಅಬ್ಬರಿಸುವುದನ್ನು ನಿಲ್ಲಿಸಿದ್ದಾರೆ. ಹೀಗಾಗಿಯೇ ವಿರಾಟ್ ಕೊಹ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಮುರಿಯಲಿದ್ದಾರಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಬಗ್ಗೆ ಇದೇ ಮೊದಲ ಬಾರಿಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್ ಮಾತನಾಡಿದ್ದಾರೆ.

ವಿರಾಟ್​ ಕೊಹ್ಲಿ ವಿಶ್ವದ ಅತ್ಯುತ್ತಮ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಸುನಿಲ್ ಗವಾಸ್ಕರ್ ಮತ್ತು ವಿವ್ ರಿಚರ್ಡ್ಸ್ ಅವರಂತಹ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳು ಸಹ ಕಳಪೆ ಫಾರ್ಮ್‌ನ ಅವಧಿಗಳನ್ನು ಕಂಡಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿಯ ಫಾರ್ಮ್​ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಅಲ್ಲದೆ ಸಚಿನ್ ತೆಂಡೂಲ್ಕರ್ ಅವರ 100 ಶತಕಗಳ ದಾಖಲೆಯನ್ನು ಕೊಹ್ಲಿ ಮುರಿಯಲಿ ಎಂದು ಬಯಸುತ್ತೇನೆ ದಿನೇಶ್ ಲಾಡ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ಅವರ ಕೊನೆಯ ಅಂತರರಾಷ್ಟ್ರೀಯ ಶತಕವು ನವೆಂಬರ್ 2019 ರಲ್ಲಿ ಮೂಡಿಬಂದಿತ್ತು. ಅಂದರೆ ಕೊಹ್ಲಿ ಶತಕ ಬಾರಿಸಿ 2 ವರ್ಷಗಳೇ ಕಳೆದಿವೆ. ಕೊಹ್ಲಿಯ 71ನೇ ಶತಕಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಬಾರಿಯ ಐಪಿಎಲ್ ನಲ್ಲೂ ಕೊಹ್ಲಿ ಅಭಿಮಾನಿಗಳು ನಿರಾಸೆ ಮೂಡಿಸಿದ್ದಾರೆ. ಇದಾಗ್ಯೂ ಮುಂಬರುವ ಸರಣಿಗಳ ಮೂಲಕ ವಿರಾಟ್ ಕೊಹ್ಲಿ ಶತಕದ ಬರವನ್ನು ನೀಗಿಸಲಿದ್ದಾರೆ ಎಂಬ ನಿರೀಕ್ಷೆಯಿದೆ.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ರೋಹಿತ್ ಶರ್ಮಾ ಫಾರ್ಮ್ ಬಗ್ಗೆ ಕೋಚ್ ಹೇಳಿದ್ದೇನು? ಸಂವಾದದಲ್ಲಿ ಮಾತನಾಡಿದ ರೋಹಿತ್ ಶರ್ಮಾ ಅವರ ಬಾಲ್ಯದ ಕೋಚ್ ದಿನೇಶ್ ಲಾಡ್, ರೋಹಿತ್ ಅವರ ಪ್ರದರ್ಶನ ಕೆಟ್ಟದಾಗಿದ್ದರೆ, ಅವರು ಕೆಟ್ಟ ಬ್ಯಾಟ್ಸ್‌ಮನ್ ಎಂದು ಅರ್ಥವಲ್ಲ. ಫಾರ್ಮ್​ ಕಳೆದುಕೊಂಡಿದ್ದಾರೆ ಅಷ್ಟೇ. ಇದು ಎಲ್ಲಾ ಆಟಗಾರರಲ್ಲೂ ಕಂಡು ಬರುತ್ತದೆ. ಹೀಗಾಗಿ ರೋಹಿತ್ ಶರ್ಮಾ ಕೂಡ ಅತ್ಯುತ್ತಮವಾಗಿ ಕಂಬ್ಯಾಕ್ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದಿದ್ದಾರೆ. ಇನ್ನು ಹಿಟ್​ಮ್ಯಾನ್ ರಜೆ ಮೇಲೆ ತೆರಳಿರುವ ನಿರ್ಧಾರವನ್ನು ಸಮರ್ಥಿಸಿಕೊಂಡ ದಿನೇಶ್ ಲಾಡ್, ಇಷ್ಟು ಕ್ರಿಕೆಟ್ ಆಡಿದ ನಂತರ ಕುಟುಂಬದೊಂದಿಗೆ ವಿಶ್ರಾಂತಿ ಪಡೆಯಬೇಕು ಎಂದು ಕೋಚ್ ಹೇಳಿದ್ದಾರೆ. ಏಕೆಂದರೆ ರೋಹಿತ್ ಶರ್ಮಾ ವಿಶ್ವ ದರ್ಜೆಯ ಆಟಗಾರ. ವಿಶ್ರಾಂತಿಯ ಬಳಿಕ ಅವರು ಕಂಬ್ಯಾಕ್ ಮಾಡುತ್ತಾರೆ ಎಂಬ ನಂಬಿಕೆ ನನಗಿದೆ ಎಂದು ತಿಳಿಸಿದ್ದಾರೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ