AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್ ಮಾಡ್ತಾರೆ ನನಗೆ ಕೋಚ್ ಹುದ್ದೆ ಬೇಡ! ಸೋಶಿಯಲ್ ಮೀಡಿಯಾಗೆ ಹೆದರಿದ ಪಾಕ್ ಮಾಜಿ ನಾಯಕ ವಾಸೀಂ ಅಕ್ರಮ್

ತಂಡದ ಸೋಲಿಗೆ ಸೋಶಿಯಲ್ ಮೀಡಿಯಾದಲ್ಲಿ ತರಬೇತುದಾರರನ್ನು ಅವಮಾನಿಸುವುದನ್ನು ಸಹಿಸಲಾಗದ ಕಾರಣ ತಾನು ಎಂದಿಗೂ ರಾಷ್ಟ್ರೀಯ ತಂಡದ ಕೋಚ್ ಸ್ಥಾನವನ್ನು ಶಾಶ್ವತ ಆಧಾರದ ಮೇಲೆ ಸ್ವೀಕರಿಸಿಲ್ಲ ಎಂದು ವಸೀಮ್ ಅಕ್ರಂ ಹೇಳಿದ್ದಾರೆ.

ಟ್ರೋಲ್ ಮಾಡ್ತಾರೆ ನನಗೆ ಕೋಚ್ ಹುದ್ದೆ ಬೇಡ! ಸೋಶಿಯಲ್ ಮೀಡಿಯಾಗೆ ಹೆದರಿದ ಪಾಕ್ ಮಾಜಿ ನಾಯಕ ವಾಸೀಂ ಅಕ್ರಮ್
ವಾಸೀಂ ಅಕ್ರಮ್
TV9 Web
| Edited By: |

Updated on: Oct 06, 2021 | 9:32 PM

Share

ಇಂದಿನ ಜಗತ್ತಿನಲ್ಲಿ ಸೋಶಿಯಲ್ ಮೀಡಿಯಾದ ಪ್ರಭಾವ ದೊಡ್ಡದು. ಜನರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸೋಶಿಯಲ್ ಮೀಡಿಯಾವನ್ನು ಬಳಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ, ಸೋಶಿಯಲ್ ಮೀಡಿಯಾದಲ್ಲಿ ಟ್ರೋಲಿಂಗ್ ಕೂಡ ಅನೇಕ ಬಾರಿ ನಡೆಯುತ್ತದೆ, ಇದು ಇಂದಿನ ಕಾಲದಲ್ಲಿ ಬಹಳ ಸಾಮಾನ್ಯವಾದ ವಿಷಯವಾಗಿದೆ. ರಾಜಕೀಯವಾಗಿರಲಿ ಅಥವಾ ಕ್ರಿಕೆಟ್ ಆಗಿರಲಿ, ಸೋಶಿಯಲ್ ಮೀಡಿಯಾದಲ್ಲಿ ಯಾರಾದರೂ ಟ್ರೋಲ್ ಆದರೆ ಅದು ತಕ್ಷಣವೇ ಎಲ್ಲೆಡೆ ಫುಲ್ ವೈರಲ್ ಆಗಿ ಬಿಡುತ್ತದೆ. ಅದು ಒಂದು ತಂಡವಾಗಿರಲಿ ಅಥವಾ ಆಟಗಾರನಾಗಿರಲಿ. ಪಾಕಿಸ್ತಾನದ ಮಾಜಿ ನಾಯಕ ವಾಸೀಂ ಅಕ್ರಮ್ ತನ್ನ ರಾಷ್ಟ್ರೀಯ ತಂಡಕ್ಕೆ ಕೋಚ್ ಆಗದಿರಲು ಇದು ಕಾರಣವಾಗಿದೆ ಎಂಬುದು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ತಂಡದ ಸೋಲಿಗೆ ಸೋಶಿಯಲ್ ಮೀಡಿಯಾದಲ್ಲಿ ತರಬೇತುದಾರರನ್ನು ಅವಮಾನಿಸುವುದನ್ನು ಸಹಿಸಲಾಗದ ಕಾರಣ ತಾನು ಎಂದಿಗೂ ರಾಷ್ಟ್ರೀಯ ತಂಡದ ಕೋಚ್ ಸ್ಥಾನವನ್ನು ಶಾಶ್ವತ ಆಧಾರದ ಮೇಲೆ ಸ್ವೀಕರಿಸಿಲ್ಲ ಎಂದು ವಸೀಮ್ ಅಕ್ರಂ ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಸೋಲಿನ ನಂತರ ನಡೆಯುವ ನಡವಳಿಕೆಯು ಇತರ ದೇಶಗಳಲ್ಲಿ ನಡೆಯುವುದಿಲ್ಲ ಎಂದು ಅಕ್ರಮ್ ಹೇಳಿದ್ದಾರೆ. ಕ್ರಿಕೆಟ್ ಪಾಕಿಸ್ತಾನ್ ಡಾಟ್ ಕಾಮ್.ಪಿಕೆ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಅಕ್ರಮ್, ನಾನು ಯಾರ ಕೆಟ್ಟ ನಡವಳಿಕೆಯನ್ನು ಸಹಿಸುವುದಿಲ್ಲ. ನಾನು ಮೂರ್ಖನಲ್ಲ, ತಂಡವು ಕಳಪೆಯಾಗಿ ಆಡುವಾಗ ಜನರು ಕೋಚ್‌ಗಳು ಮತ್ತು ಹಿರಿಯ ಆಟಗಾರರೊಂದಿಗೆ ಹೇಗೆ ಅನುಚಿತವಾಗಿ ವರ್ತಿಸುತ್ತಾರೆ ಎಂಬುದನ್ನು ನಾನು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದು ರವಿ ಶಾಸ್ತ್ರಿಗೂ ಸಂಭವಿಸಿದೆ ಕ್ರಿಕೆಟ್ ಪ್ರೇಮಿಗಳ ಉತ್ಸಾಹ ನನಗೂ ಅರ್ಥವಾಗುತ್ತದೆ. ಆದರೆ ಸೋಶಿಯಲ್ ಮೀಡಿಯಾದಲ್ಲಿ ಬಳಸುವ ಕೆಟ್ಟ ಭಾಷೆ ಮತ್ತು ಅವಹೇಳನಗಳು ನನಗೆ ಇಷ್ಟವಾಗುವುದಿಲ್ಲ ಎಂದು ಅವರು ಹೇಳಿದರು. ನಾವು ಸೋಶಿಯಲ್ ಮೀಡಿಯಾದಲ್ಲಿ ಏನು ಬರೆಯುತ್ತೇವೆಯೋ ಅದು ನಾವು ಹೇಗಿದ್ದೇವೆ ಎಂಬುದನ್ನು ಹೇಳಬೇಕು. ಕೆಲವೊಮ್ಮೆ ನೀವು ಚೆನ್ನಾಗಿ ಕೆಲಸ ಮಾಡುತ್ತೀರಿ ಮತ್ತು ಕೆಲವೊಮ್ಮೆ ನೀವು ಸೋಲುತ್ತೀರಿ ಆದರೆ ಈ ರೀತಿಯ ಕಠಿಣ ಪ್ರತಿಕ್ರಿಯೆ ಅಥವಾ ಕೆಟ್ಟ ನಡವಳಿಕೆ ಬೇರೆ ದೇಶಗಳಲ್ಲಿ ಆಗುವುದಿಲ್ಲ ಎಂದಿದ್ದಾರೆ.

ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಕರಾಚಿ ಕಿಂಗ್ಸ್ ತಂಡದೊಂದಿಗೆ, ಹೆಚ್ಚಿನ ಆಟಗಾರರೊಂದಿಗೆ ಕೆಲಸ ಮಾಡುವ ಅವಕಾಶ ಸಿಕ್ಕಿತು ಎಂದು ಅಕ್ರಮ್ ಹೇಳಿದರು. ನಾನು ಆಟಗಾರರಿಂದ ಸಂಪೂರ್ಣವಾಗಿ ಹೊರಗುಳಿದಿಲ್ಲ. ಅವರು ನನ್ನನ್ನು ಸಲಹೆಗಾಗಿ ಕರೆಯುತ್ತಾರೆ ಮತ್ತು ನಾನು ಪಾಕಿಸ್ತಾನ ಕ್ರಿಕೆಟ್ಗೆ ಕೊಡುಗೆ ನೀಡಲು ಇಷ್ಟಪಡುತ್ತೇನೆ ಎಂದಿದ್ದಾರೆ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ