AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಂದ್ಯ ನಡೆಯುವಾಗ ಪಿಚ್​ಗೆ ಸ್ಕೂಟರ್​ನಲ್ಲಿ ಬಂದ ಯುವಕ..!

ವಿಶೇಷ ಎಂದರೆ ಈ ಹಿಂದೆ ಭಾರತದಲ್ಲೂ ಈ ಘಟನೆ ನಡೆದಿತ್ತು. ಕೆಲವು ವರ್ಷಗಳ ಹಿಂದೆ, 2017 ರಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶ ನಡುವಿನ ರಣಜಿ ಟ್ರೋಫಿ ಪಂದ್ಯದ ವೇಳೆ ವ್ಯಕ್ತಿಯೊಬ್ಬರು ಮೈದಾನದ ಮಧ್ಯದಲ್ಲಿ ತಮ್ಮ ಕಾರನ್ನು ಓಡಿಸಿದರು.

Viral Video: ಪಂದ್ಯ ನಡೆಯುವಾಗ ಪಿಚ್​ಗೆ ಸ್ಕೂಟರ್​ನಲ್ಲಿ ಬಂದ ಯುವಕ..!
man on scooter
TV9 Web
| Updated By: ಝಾಹಿರ್ ಯೂಸುಫ್|

Updated on:May 10, 2022 | 6:05 PM

Share

ಕ್ರಿಕೆಟ್ ಮ್ಯಾಚ್ ನಡೆಯುವಾಗ ಮೈದಾನಕ್ಕೆ ಅಭಿಮಾನಿಗಳು ನುಗ್ಗಿರುವುದನ್ನು ನೀವು ನೋಡುತ್ತೀರಿ. ಇನ್ನು ಕೆಲವೊಮ್ಮೆ ನಾಯಿಗಳು, ಪಕ್ಷಿಗಳು ಕೂಡ ಮೈದಾನದಲ್ಲಿ ಕಾಣಿಸಿಕೊಂಡು ಪಂದ್ಯಕ್ಕೆ ಅಡಚಣೆ ಉಂಟು ಮಾಡಿರುವುದನ್ನು ನೀಡು ಕಂಡಿರುತ್ತೀರಿ. ಆದರೆ ಪಂದ್ಯ ನಡೆಯುವಾಗ ಪಿಚ್‌ನ ಮಧ್ಯದಲ್ಲಿ ಹೋವರ್ ಸ್ಕೂಟರ್ ಜೊತೆ ಬಂದರೆ ಹೇಗಿರಬಹುದು?..ಅಂತಹದೊಂದು ಘಟನೆ ಇಂಗ್ಲೆಂಡ್​ನಲ್ಲಿ ನಡೆದಿದೆ. ಕ್ಲಬ್ ಕ್ರಿಕೆಟ್ ಪಂದ್ಯದ ವೇಳೆ ಹೋವರ್ ಸ್ಕೂಟರ್​ನಲ್ಲಿ ಯುವಕನೊಬ್ಬ ಮೈದಾನಕ್ಕೆ ಆಗಮಿಸಿ ಎಲ್ಲರಿಗೂ ಶಾಕ್ ನೀಡಿದ್ದಾರೆ. ಅದು ಕೂಡ ಪಿಚ್​ ಮಧ್ಯೆದಲ್ಲೇ ಎಂಬುದು ವಿಶೇಷ.

ಸೋಟನ್ ಯೂನಿವರ್ಸಿಟಿ ಕ್ರಿಕೆಟ್‌ನ ಟ್ವಿಟರ್ ಹ್ಯಾಂಡಲ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಇದೀಗ ಈ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕ್ರಿಕೆಟ್​ನಲ್ಲಿ ಈ ಹಿಂದೆ ಹಲವು ರೀತಿಯ ಅಡಚಣೆಗಳಿಗೆ ಸಾಕ್ಷಿಯಾಗಿದೆ. ಮಳೆ, ದೃಶ್ಯ ಪರದೆ ಸಮಸ್ಯೆಗಳು, ಮೈದಾನಕ್ಕೆ ಓಡುವ ಪ್ರಾಣಿಗಳು ಮತ್ತು ಒದ್ದೆಯಾದ ಔಟ್‌ಫೀಲ್ಡ್ ಕೆಲವು ಹಂತದಲ್ಲಿ ಆಟವನ್ನು ನಿಲ್ಲಿಸಿವೆ. ಆದರೆ ಪಂದ್ಯ ನಡೆಯುವಾಗ ಇಂಗ್ಲೆಂಡ್​ನಲ್ಲಿ ಇಂತಹದೊಂದು ಅಡಚಣೆ ಕಂಡು ಬಂದಿರುವುದು ಇದೇ ಮೊದಲು ಎನ್ನಲಾಗಿದೆ.

ವಿಶೇಷ ಎಂದರೆ ಈ ಹಿಂದೆ ಭಾರತದಲ್ಲೂ ಈ ಘಟನೆ ನಡೆದಿತ್ತು. ಕೆಲವು ವರ್ಷಗಳ ಹಿಂದೆ, 2017 ರಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶ ನಡುವಿನ ರಣಜಿ ಟ್ರೋಫಿ ಪಂದ್ಯದ ವೇಳೆ ವ್ಯಕ್ತಿಯೊಬ್ಬರು ಮೈದಾನದ ಮಧ್ಯದಲ್ಲಿ ತಮ್ಮ ಕಾರನ್ನು ಓಡಿಸಿದರು. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಗೌತಮ್ ಗಂಭೀರ್, ಸುರೇಶ್ ರೈನಾ ಮತ್ತು ಇಶಾಂತ್ ಶರ್ಮಾ ಪಾಲ್ಗೊಂಡಿದ್ದರು.

ರಣಜಿ ಟ್ರೋಫಿ ಪಂದ್ಯದ 3 ನೇ ದಿನದಂದು, ಒಬ್ಬ ವ್ಯಕ್ತಿ ತನ್ನ ವ್ಯಾಗನ್ ಆರ್ ಕಾರನ್ನು ಆಟದ ಮೈದಾನಕ್ಕೆ ತಂದು ನೇರವಾಗಿ ಪಿಚ್​ನತ್ತ ನುಗ್ಗಿಸಿದರು. ಈ ಘಟನೆಯ ನಂತರ, ಮ್ಯಾಚ್ ರೆಫರಿ ಪಿಚ್ ಮತ್ತು ಔಟ್‌ಫೀಲ್ಡ್ ಅನ್ನು ಪರಿಶೀಲಿಸಿ ಯಾವುದೇ ಹಾನಿಯಾಗದ ಕಾರಣ ಪಂದ್ಯವನ್ನು ಮುಂದುವರೆಸಿದ್ದರು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:00 pm, Tue, 10 May 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ