AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪಂದ್ಯ ನಡೆಯುವಾಗ ಪಿಚ್​ಗೆ ಸ್ಕೂಟರ್​ನಲ್ಲಿ ಬಂದ ಯುವಕ..!

ವಿಶೇಷ ಎಂದರೆ ಈ ಹಿಂದೆ ಭಾರತದಲ್ಲೂ ಈ ಘಟನೆ ನಡೆದಿತ್ತು. ಕೆಲವು ವರ್ಷಗಳ ಹಿಂದೆ, 2017 ರಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶ ನಡುವಿನ ರಣಜಿ ಟ್ರೋಫಿ ಪಂದ್ಯದ ವೇಳೆ ವ್ಯಕ್ತಿಯೊಬ್ಬರು ಮೈದಾನದ ಮಧ್ಯದಲ್ಲಿ ತಮ್ಮ ಕಾರನ್ನು ಓಡಿಸಿದರು.

Viral Video: ಪಂದ್ಯ ನಡೆಯುವಾಗ ಪಿಚ್​ಗೆ ಸ್ಕೂಟರ್​ನಲ್ಲಿ ಬಂದ ಯುವಕ..!
man on scooter
TV9 Web
| Edited By: |

Updated on:May 10, 2022 | 6:05 PM

Share

ಕ್ರಿಕೆಟ್ ಮ್ಯಾಚ್ ನಡೆಯುವಾಗ ಮೈದಾನಕ್ಕೆ ಅಭಿಮಾನಿಗಳು ನುಗ್ಗಿರುವುದನ್ನು ನೀವು ನೋಡುತ್ತೀರಿ. ಇನ್ನು ಕೆಲವೊಮ್ಮೆ ನಾಯಿಗಳು, ಪಕ್ಷಿಗಳು ಕೂಡ ಮೈದಾನದಲ್ಲಿ ಕಾಣಿಸಿಕೊಂಡು ಪಂದ್ಯಕ್ಕೆ ಅಡಚಣೆ ಉಂಟು ಮಾಡಿರುವುದನ್ನು ನೀಡು ಕಂಡಿರುತ್ತೀರಿ. ಆದರೆ ಪಂದ್ಯ ನಡೆಯುವಾಗ ಪಿಚ್‌ನ ಮಧ್ಯದಲ್ಲಿ ಹೋವರ್ ಸ್ಕೂಟರ್ ಜೊತೆ ಬಂದರೆ ಹೇಗಿರಬಹುದು?..ಅಂತಹದೊಂದು ಘಟನೆ ಇಂಗ್ಲೆಂಡ್​ನಲ್ಲಿ ನಡೆದಿದೆ. ಕ್ಲಬ್ ಕ್ರಿಕೆಟ್ ಪಂದ್ಯದ ವೇಳೆ ಹೋವರ್ ಸ್ಕೂಟರ್​ನಲ್ಲಿ ಯುವಕನೊಬ್ಬ ಮೈದಾನಕ್ಕೆ ಆಗಮಿಸಿ ಎಲ್ಲರಿಗೂ ಶಾಕ್ ನೀಡಿದ್ದಾರೆ. ಅದು ಕೂಡ ಪಿಚ್​ ಮಧ್ಯೆದಲ್ಲೇ ಎಂಬುದು ವಿಶೇಷ.

ಸೋಟನ್ ಯೂನಿವರ್ಸಿಟಿ ಕ್ರಿಕೆಟ್‌ನ ಟ್ವಿಟರ್ ಹ್ಯಾಂಡಲ್ ಈ ವಿಡಿಯೋವನ್ನು ಹಂಚಿಕೊಂಡಿದ್ದು, ಇದೀಗ ಈ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಕ್ರಿಕೆಟ್​ನಲ್ಲಿ ಈ ಹಿಂದೆ ಹಲವು ರೀತಿಯ ಅಡಚಣೆಗಳಿಗೆ ಸಾಕ್ಷಿಯಾಗಿದೆ. ಮಳೆ, ದೃಶ್ಯ ಪರದೆ ಸಮಸ್ಯೆಗಳು, ಮೈದಾನಕ್ಕೆ ಓಡುವ ಪ್ರಾಣಿಗಳು ಮತ್ತು ಒದ್ದೆಯಾದ ಔಟ್‌ಫೀಲ್ಡ್ ಕೆಲವು ಹಂತದಲ್ಲಿ ಆಟವನ್ನು ನಿಲ್ಲಿಸಿವೆ. ಆದರೆ ಪಂದ್ಯ ನಡೆಯುವಾಗ ಇಂಗ್ಲೆಂಡ್​ನಲ್ಲಿ ಇಂತಹದೊಂದು ಅಡಚಣೆ ಕಂಡು ಬಂದಿರುವುದು ಇದೇ ಮೊದಲು ಎನ್ನಲಾಗಿದೆ.

ವಿಶೇಷ ಎಂದರೆ ಈ ಹಿಂದೆ ಭಾರತದಲ್ಲೂ ಈ ಘಟನೆ ನಡೆದಿತ್ತು. ಕೆಲವು ವರ್ಷಗಳ ಹಿಂದೆ, 2017 ರಲ್ಲಿ ದೆಹಲಿ ಮತ್ತು ಉತ್ತರ ಪ್ರದೇಶ ನಡುವಿನ ರಣಜಿ ಟ್ರೋಫಿ ಪಂದ್ಯದ ವೇಳೆ ವ್ಯಕ್ತಿಯೊಬ್ಬರು ಮೈದಾನದ ಮಧ್ಯದಲ್ಲಿ ತಮ್ಮ ಕಾರನ್ನು ಓಡಿಸಿದರು. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಮಾಜಿ ಆಟಗಾರರಾದ ಗೌತಮ್ ಗಂಭೀರ್, ಸುರೇಶ್ ರೈನಾ ಮತ್ತು ಇಶಾಂತ್ ಶರ್ಮಾ ಪಾಲ್ಗೊಂಡಿದ್ದರು.

ರಣಜಿ ಟ್ರೋಫಿ ಪಂದ್ಯದ 3 ನೇ ದಿನದಂದು, ಒಬ್ಬ ವ್ಯಕ್ತಿ ತನ್ನ ವ್ಯಾಗನ್ ಆರ್ ಕಾರನ್ನು ಆಟದ ಮೈದಾನಕ್ಕೆ ತಂದು ನೇರವಾಗಿ ಪಿಚ್​ನತ್ತ ನುಗ್ಗಿಸಿದರು. ಈ ಘಟನೆಯ ನಂತರ, ಮ್ಯಾಚ್ ರೆಫರಿ ಪಿಚ್ ಮತ್ತು ಔಟ್‌ಫೀಲ್ಡ್ ಅನ್ನು ಪರಿಶೀಲಿಸಿ ಯಾವುದೇ ಹಾನಿಯಾಗದ ಕಾರಣ ಪಂದ್ಯವನ್ನು ಮುಂದುವರೆಸಿದ್ದರು.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 6:00 pm, Tue, 10 May 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?