AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಸ್ಟ್​ ಮಿಸ್..ಐಪಿಎಲ್​ನಲ್ಲಿ ತಪ್ಪಿದ ದೊಡ್ಡ ಅನಾಹುತ..!

IPL 2022: ರಾಜಸ್ಥಾನ್ ರಾಯಲ್ಸ್‌ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಪ್ರಿಲ್ 10 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಲಿದೆ.

Viral Video: ಜಸ್ಟ್​ ಮಿಸ್..ಐಪಿಎಲ್​ನಲ್ಲಿ ತಪ್ಪಿದ ದೊಡ್ಡ ಅನಾಹುತ..!
Viral Video
TV9 Web
| Edited By: |

Updated on: Apr 09, 2022 | 5:14 PM

Share

ಐಪಿಎಲ್ ವಿಶ್ವ ಪ್ರಸಿದ್ಧ ಲೀಗ್ ಎಂಬುದರಲ್ಲಿ ಅನುಮಾನವೇ ಇಲ್ಲ. ಅತ್ಯುತ್ತಮ ಆಟಗಾರರು ಈ ಲೀಗ್​ನಲ್ಲಿ ಭಾಗವಹಿಸುತ್ತಿರುವುದರಿಂದ ಉತ್ತಮ ಕ್ರಿಕೆಟ್ ಅನ್ನು ಎದುರು ನೋಡಬಹುದು. ಅನುಭವಿ ಆಟಗಾರರೇ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಕಾರಣ ಕಳೆದ 14 ಸೀಸನ್​ಗಳಲ್ಲಿ ಅಂತಹ ಯಾವುದೇ ಅನಾಹುತಗಳು ಕೂಡ ಕಂಡುಬಂದಿಲ್ಲ. ಆದರೆ ಈ ಬಾರಿ ಅಂತಹದೊಂದು ಅವಘಡ ಸಂಭವಿಸುವ ಸಾಧ್ಯತೆಯಿತ್ತು. ಅದೃಷ್ಟವಶಾತ್ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಜಿಮ್ಮಿ ನೀಶಮ್ ಅವರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಟಿ20 ಕ್ರಿಕೆಟ್‌ನಲ್ಲಿ ಬೌಲಿಂಗ್​ಗಳು ಎಷ್ಟು ಅಪಾಯಕಾರಿಯೋ ಬ್ಯಾಟರ್‌ಗಳು ಕೂಡ ಬಾರಿಸುವ ಹೊಡೆತಗಳು ಕೂಡ ಡೇಂಜರಸ್ ಆಗಿರುತ್ತದೆ. ಹೀಗಾಗಿ ಪ್ರತಿ ಕ್ಷಣಗಳಲ್ಲೂ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಹೀಗೆ ರಾಜಸ್ಥಾನ್ ರಾಯಲ್ಸ್ ತಂಡದ ಅಭ್ಯಾಸದ ವೇಳೆ ಜಿಮ್ಮಿ ನೀಶಮ್ ಎಚ್ಚರಿಕೆವಹಿಸಿದ ಪರಿಣಾಮ ಬಚಾವಾಗಿದ್ದಾರೆ.

ನೆಟ್ಸ್​ನಲ್ಲಿ ಯುವ ಆಟಗಾರ ರಿಯಾನ್ ಪರಾಗ್​ಗೆ ಜಿಮ್ಮಿ ನೀಶಮ್ ಬೌಲಿಂಗ್ ಮಾಡುತ್ತಿದ್ದರು. ಈ ವೇಳೆ ಪರಾಗ್ ಬಾರಿಸಿದ ಶಾಟ್ ಜಿಮ್ಮಿ ನೀಶಮ್​ ಮುಖಕ್ಕೆ ನೇರವಾಗಿ ಬಂದಿತ್ತು. ತಕ್ಷಣ ತಲೆ ಸರಿಸಿದ ಪರಿಣಾಮ ಜಿಮ್ಮಿ ನೀಶಮ್ ದೊಡ್ಡ ಅವಘಡವನ್ನು ತಪ್ಪಿಸಿಕೊಂಡರು. ಈ ಅಪಾಯಕಾರಿ ವಿಡಿಯೋಯನ್ನು ಜಿಮ್ಮಿ ನೀಶಮ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೆ “ನಾನು ಈ ಮೂಲಕ ನೆಟ್ಸ್​ನಲ್ಲಿ ರಿಯಾನ್ ಪರಾಗ್​ಗೆ ಬೌಲಿಂಗ್ ಮಾಡುವುದರಿಂದ ನಿವೃತ್ತಿಯನ್ನು ಘೋಷಿಸಲು ಬಯಸುತ್ತೇನೆ… ” ಎಂದು ಜಿಮ್ಮಿ ನೀಶಮ್ ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಜಿಮ್ಮಿ ನೀಶಮ್ ಅವರ ಸಮಯಪ್ರಜ್ಞೆಯಿಂದ ಐಪಿಎಲ್​ನಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ.

ರಾಜಸ್ಥಾನ್ ರಾಯಲ್ಸ್‌ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಪ್ರಿಲ್ 10 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಲಿದೆ. RR ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದುಕೊಂಡಿದೆ. ಆದರೆ ಈ ಮೂರು ಪಂದ್ಯಗಳಲ್ಲಿ ಜಿಮ್ಮಿ ನೀಶಮ್​ಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಮುಂದಿನ ಪಂದ್ಯದಲ್ಲಿ ನೀಶಮ್ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ