AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಜಸ್ಟ್​ ಮಿಸ್..ಐಪಿಎಲ್​ನಲ್ಲಿ ತಪ್ಪಿದ ದೊಡ್ಡ ಅನಾಹುತ..!

IPL 2022: ರಾಜಸ್ಥಾನ್ ರಾಯಲ್ಸ್‌ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಪ್ರಿಲ್ 10 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಲಿದೆ.

Viral Video: ಜಸ್ಟ್​ ಮಿಸ್..ಐಪಿಎಲ್​ನಲ್ಲಿ ತಪ್ಪಿದ ದೊಡ್ಡ ಅನಾಹುತ..!
Viral Video
TV9 Web
| Edited By: |

Updated on: Apr 09, 2022 | 5:14 PM

Share

ಐಪಿಎಲ್ ವಿಶ್ವ ಪ್ರಸಿದ್ಧ ಲೀಗ್ ಎಂಬುದರಲ್ಲಿ ಅನುಮಾನವೇ ಇಲ್ಲ. ಅತ್ಯುತ್ತಮ ಆಟಗಾರರು ಈ ಲೀಗ್​ನಲ್ಲಿ ಭಾಗವಹಿಸುತ್ತಿರುವುದರಿಂದ ಉತ್ತಮ ಕ್ರಿಕೆಟ್ ಅನ್ನು ಎದುರು ನೋಡಬಹುದು. ಅನುಭವಿ ಆಟಗಾರರೇ ಹೆಚ್ಚು ಕಾಣಿಸಿಕೊಳ್ಳುತ್ತಿರುವ ಕಾರಣ ಕಳೆದ 14 ಸೀಸನ್​ಗಳಲ್ಲಿ ಅಂತಹ ಯಾವುದೇ ಅನಾಹುತಗಳು ಕೂಡ ಕಂಡುಬಂದಿಲ್ಲ. ಆದರೆ ಈ ಬಾರಿ ಅಂತಹದೊಂದು ಅವಘಡ ಸಂಭವಿಸುವ ಸಾಧ್ಯತೆಯಿತ್ತು. ಅದೃಷ್ಟವಶಾತ್ ರಾಜಸ್ಥಾನ್ ರಾಯಲ್ಸ್ ತಂಡದ ಆಟಗಾರ ಜಿಮ್ಮಿ ನೀಶಮ್ ಅವರ ಸಮಯಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಟಿ20 ಕ್ರಿಕೆಟ್‌ನಲ್ಲಿ ಬೌಲಿಂಗ್​ಗಳು ಎಷ್ಟು ಅಪಾಯಕಾರಿಯೋ ಬ್ಯಾಟರ್‌ಗಳು ಕೂಡ ಬಾರಿಸುವ ಹೊಡೆತಗಳು ಕೂಡ ಡೇಂಜರಸ್ ಆಗಿರುತ್ತದೆ. ಹೀಗಾಗಿ ಪ್ರತಿ ಕ್ಷಣಗಳಲ್ಲೂ ಎಚ್ಚರಿಕೆಯಿಂದ ಇರಬೇಕಾಗುತ್ತದೆ. ಹೀಗೆ ರಾಜಸ್ಥಾನ್ ರಾಯಲ್ಸ್ ತಂಡದ ಅಭ್ಯಾಸದ ವೇಳೆ ಜಿಮ್ಮಿ ನೀಶಮ್ ಎಚ್ಚರಿಕೆವಹಿಸಿದ ಪರಿಣಾಮ ಬಚಾವಾಗಿದ್ದಾರೆ.

ನೆಟ್ಸ್​ನಲ್ಲಿ ಯುವ ಆಟಗಾರ ರಿಯಾನ್ ಪರಾಗ್​ಗೆ ಜಿಮ್ಮಿ ನೀಶಮ್ ಬೌಲಿಂಗ್ ಮಾಡುತ್ತಿದ್ದರು. ಈ ವೇಳೆ ಪರಾಗ್ ಬಾರಿಸಿದ ಶಾಟ್ ಜಿಮ್ಮಿ ನೀಶಮ್​ ಮುಖಕ್ಕೆ ನೇರವಾಗಿ ಬಂದಿತ್ತು. ತಕ್ಷಣ ತಲೆ ಸರಿಸಿದ ಪರಿಣಾಮ ಜಿಮ್ಮಿ ನೀಶಮ್ ದೊಡ್ಡ ಅವಘಡವನ್ನು ತಪ್ಪಿಸಿಕೊಂಡರು. ಈ ಅಪಾಯಕಾರಿ ವಿಡಿಯೋಯನ್ನು ಜಿಮ್ಮಿ ನೀಶಮ್ ಅವರು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ.

ಅಲ್ಲದೆ “ನಾನು ಈ ಮೂಲಕ ನೆಟ್ಸ್​ನಲ್ಲಿ ರಿಯಾನ್ ಪರಾಗ್​ಗೆ ಬೌಲಿಂಗ್ ಮಾಡುವುದರಿಂದ ನಿವೃತ್ತಿಯನ್ನು ಘೋಷಿಸಲು ಬಯಸುತ್ತೇನೆ… ” ಎಂದು ಜಿಮ್ಮಿ ನೀಶಮ್ ಬರೆದುಕೊಂಡಿದ್ದಾರೆ. ಒಟ್ಟಿನಲ್ಲಿ ಜಿಮ್ಮಿ ನೀಶಮ್ ಅವರ ಸಮಯಪ್ರಜ್ಞೆಯಿಂದ ಐಪಿಎಲ್​ನಲ್ಲಿ ದೊಡ್ಡ ಅನಾಹುತವೊಂದು ತಪ್ಪಿದೆ.

ರಾಜಸ್ಥಾನ್ ರಾಯಲ್ಸ್‌ನ ಮುಂದಿನ ಪಂದ್ಯವನ್ನು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಏಪ್ರಿಲ್ 10 ರಂದು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಆಡಲಿದೆ. RR ಮೂರು ಪಂದ್ಯಗಳಲ್ಲಿ ಎರಡನ್ನು ಗೆದ್ದುಕೊಂಡಿದೆ. ಆದರೆ ಈ ಮೂರು ಪಂದ್ಯಗಳಲ್ಲಿ ಜಿಮ್ಮಿ ನೀಶಮ್​ಗೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಮುಂದಿನ ಪಂದ್ಯದಲ್ಲಿ ನೀಶಮ್ ಕಣಕ್ಕಿಳಿಯಲಿದ್ದಾರಾ ಕಾದು ನೋಡಬೇಕಿದೆ.

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!