AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಬಿನೂರ

Binura Fernando Catch: 24 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 2 ಫೋರ್​ನೊಂದಿಗೆ 39 ರನ್​ ಬಾರಿಸುವ ಮೂಲಕ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಸ್ಯಾಮ್ಸನ್ 13ನೇ ಓವರ್​ನ ಕೊನೆಯ ಎಸೆತದಲ್ಲಿ ಕ್ಯಾಚ್ ನೀಡಿದ್ದರು.

Video: ಅದ್ಭುತ ಕ್ಯಾಚ್ ಹಿಡಿದು ಎಲ್ಲರನ್ನು ನಿಬ್ಬೆರಗಾಗಿಸಿದ ಬಿನೂರ
Binura Fernando Catch
TV9 Web
| Edited By: |

Updated on: Feb 27, 2022 | 3:28 PM

Share

ಶ್ರೀಲಂಕಾ ವಿರುದ್ದದ (India vs Sri Lanka T20) 2ನೇ ಟಿ20 ಪಂದ್ಯದಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಇದಕ್ಕೂ ಮುನ್ನ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು. ಆದರೆ ಶ್ರೀಲಂಕಾ ಬ್ಯಾಟ್ಸ್​ಮನ್​ಗಳು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭಿಕ ಆಟಗಾರ ಪಾತುಮ್ ನಿಸಂಕ 75 ರನ್ ಬಾರಿಸಿದರೆ, ನಾಯಕ ದುಸನ್ ಶನಕಾ 19 ಎಸೆತಗಳಲ್ಲಿ 47 ರನ್​ ಸಿಡಿಸಿದರು. ಪರಿಣಾಮ 20 ಓವರ್​ಗಳಲ್ಲಿ ಶ್ರೀಲಂಕಾ ತಂಡವು 5 ವಿಕೆಟ್ ನಷ್ಟಕ್ಕೆ 183 ರನ್​ ಕಲೆಹಾಕಿತು.

184 ರನ್​ಗಳ ಟಾರ್ಗೆಟ್ ಪಡೆದ ಟೀಮ್ ಇಂಡಿಯಾದ ಆರಂಭ ಉತ್ತಮವಾಗಿರಲಿಲ್ಲ. ರೋಹಿತ್ ಶರ್ಮಾ 1 ರನ್​ಗಳಿಸಿ ಔಟಾದರೆ, ಇಶಾನ್ ಕಿಶನ್ 16 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಆ ಬಳಿಕ ಬಂದ ಶ್ರೇಯಸ್ ಅಯ್ಯರ್ ಸ್ಪೋಟಕ ಅರ್ಧಶತಕ ಬಾರಿಸಿ ಮಿಂಚಿದರು. ಅಯ್ಯರ್ ಉತ್ತಮ ಸಾಥ್ ನೀಡಿದ ಸಂಜು ಸ್ಯಾಮ್ಸನ್ ಕೂಡ ಅಬ್ಬರಿಸಿದ್ದರು. ಬ್ಯಾಕ್ ಟು ಬ್ಯಾಕ್ ಸಿಕ್ಸ್-ಫೋರ್​ಗಳ ಮೂಲಕ ಗಮನ ಸೆಳೆದ ಸ್ಯಾಮ್ಸನ್ ಅವರು ಔಟಾಗಿದ್ದು ಮಾತ್ರ ಅಧ್ಭುತ ಫೀಲ್ಡಿಂಗ್​ನಿಂದ ಎಂಬುದು ವಿಶೇಷ.

ಹೌದು, 24 ಎಸೆತಗಳಲ್ಲಿ 3 ಸಿಕ್ಸ್​ ಹಾಗೂ 2 ಫೋರ್​ನೊಂದಿಗೆ 39 ರನ್​ ಬಾರಿಸುವ ಮೂಲಕ ಅಪಾಯಕಾರಿಯಾಗುವ ಸೂಚನೆ ನೀಡಿದ್ದ ಸ್ಯಾಮ್ಸನ್ 13ನೇ ಓವರ್​ನ ಕೊನೆಯ ಎಸೆತದಲ್ಲಿ ಕ್ಯಾಚ್ ನೀಡಿದ್ದರು. ಲಹಿರು ಕುಮಾರ ಎಸೆತದ ಫುಲ್ ಆಫ್​ ಸೈಡ್ ಎಸೆತಕ್ಕೆ ಭರ್ಜರಿ ಉತ್ತರ ನೀಡಲು ಮುಂದಾದ ಸ್ಯಾಮ್ಸನ್ ಬ್ಯಾಟ್​ ಸವರಿ ಚೆಂಡು ಫಸ್ಟ್ ಸ್ಲಿಪ್​ನತ್ತ ಚಿಮ್ಮಿತು.

ಆದರೆ ಅಲ್ಲೇ ಫೀಲ್ಡಿಂಗ್​ನಲ್ಲಿದ್ದ ಬಿನೂರ ಫೆರ್ನಾಂಡೋ ಅತ್ಯಾಧ್ಬುತವಾಗಿ ಜಿಗಿಯುವ ಮೂಲಕ ಒಂದು ಕೈಯಿಂದ ಅದ್ಭುತ ಕ್ಯಾಚ್ ಹಿಡಿದರು. ಇತ್ತ ಲಂಕಾ ಫೀಲ್ಡರ್​ನ ಅಧ್ಭುತ ಕ್ಯಾಚ್ ನೋಡಿ ಟೀಮ್ ಇಂಡಿಯಾ ಕ್ರಿಕೆಟ್ ಪ್ರೇಮಿಗಳು ಕೂಡ ಹುಬ್ಬೇರಿಸಿದ್ದರು. ಇದೀಗ ಬಿನೂರ ಹಿಡಿದ ಈ ಅಧ್ಬುತ ಕ್ಯಾಚ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಅಂತಿಮವಾಗಿ ಶ್ರೇಯಸ್ ಅಯ್ಯರ್ 44 ಎಸೆತಗಳಲ್ಲಿ 74 ರನ್​ಗಳಿಸಿದರೆ, ರವೀಂದ್ರ ಜಡೇಜಾ 18 ಎಸೆತಗಳಲ್ಲಿ 44 ರನ್ ಬಾರಿಸಿದರು. ಅದರಂತೆ 17.1 ಓವರ್​ನಲ್ಲಿ ಟೀಮ್ ಇಂಡಿಯಾ ಗುರಿಮುಟ್ಟಿತು. ಈ ಮೂಲಕ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ 2-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿದೆ.

ಇದನ್ನೂ ಓದಿ: IPL 2022 format explained: 2 ಗುಂಪು, 70 ಪಂದ್ಯಗಳು: ಹೇಗಿರಲಿದೆ IPL 2022 ಟೂರ್ನಿ

ಇದನ್ನೂ ಓದಿ: ಐಪಿಎಲ್ ಆರಂಭಿಕ ಪಂದ್ಯಗಳಿಗೆ ಈ ಆಟಗಾರರು ಅಲಭ್ಯ

ಇದನ್ನೂ ಓದಿ: IPL 2022: ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಶೇನ್ ವಾಟ್ಸನ್ ಎಂಟ್ರಿ..!

(Watch: Sri Lanka’s Binura Fernando Takes Sensational Catch)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ