AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WCL 2024: ರಾಬಿನ್ ಉತ್ತಪ್ಪ ಸಿಡಿಲಬ್ಬರ: ಇಂಡಿಯಾ ಚಾಂಪಿಯನ್ಸ್​ಗೆ ಜಯ

World Championship of Legends 2024: ಇಂಗ್ಲೆಂಡ್​ನಲ್ಲಿ ಮಾಜಿ ಕ್ರಿಕೆಟಿಗರ ನಡುವಣ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಇಂಡಿಯಾ, ಇಂಗ್ಲೆಂಡ್, ಪಾಕಿಸ್ತಾನ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಸೇರಿದಂತೆ ಒಟ್ಟು 6 ತಂಡಗಳು ಕಣಕ್ಕಿಳಿಯುತ್ತಿದೆ. ಇಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡವನ್ನು ಯುವರಾಜ್ ಸಿಂಗ್ ಮುನ್ನಡೆಸುತ್ತಿರುವುದು ವಿಶೇಷ.

WCL 2024: ರಾಬಿನ್ ಉತ್ತಪ್ಪ ಸಿಡಿಲಬ್ಬರ: ಇಂಡಿಯಾ ಚಾಂಪಿಯನ್ಸ್​ಗೆ ಜಯ
Robin Uthappa
ಝಾಹಿರ್ ಯೂಸುಫ್
|

Updated on: Jul 04, 2024 | 10:05 AM

Share

ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್  (WCL 2024) ಟೂರ್ನಿಯ ಮೊದಲ ಪಂದ್ಯದಲ್ಲೇ ಇಂಡಿಯಾ ಚಾಂಪಿಯನ್ಸ್ ಜಯಭೇರಿ ಬಾರಿಸಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಇಂಡಿಯಾ ಚಾಂಪಿಯನ್ಸ್ ಮತ್ತು ಇಂಗ್ಲೆಂಡ್ ಚಾಂಪಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಇಂಡಿಯಾ ತಂಡದ ನಾಯಕ ಯುವರಾಜ್ ಸಿಂಗ್ ಬೌಲಿಂಗ್ ಆಯ್ದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಚಾಂಪಿಯನ್ಸ್ ಪರ ಇಯಾನ್ ಬೆಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 44 ಎಸೆತಗಳನ್ನು ಎದುರಿಸಿದ ಬೆಲ್ 9 ಫೋರ್​ಗಳೊಂದಿಗೆ 59 ರನ್ ಬಾರಿಸಿದರು.

ಇನ್ನು ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ ಸಮಿತ್ ಪಟೇಲ್ ಕೇವಲ 25 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 51 ರನ್ ಚಚ್ಚಿದರು. ಈ ಮೂಲಕ ಇಂಗ್ಲೆಂಡ್ ಚಾಂಪಿಯನ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿತು.

166 ರನ್​ಗಳ ಟಾರ್ಗೆಟ್:

ಇಂಗ್ಲೆಂಡ್ ಚಾಂಪಿಯನ್ಸ್ ನೀಡಿದ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಇಂಡಿಯಾ ಚಾಂಪಿಯನ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ಸ್ಪೋಟಕ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಉತ್ತಪ್ಪ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

ಅಲ್ಲದೆ 32 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 50 ರನ್ ಬಾರಿಸಿ ಔಟಾದರು. ಇನ್ನು ಒಮನ್ ಓಜಾ 25 ರನ್ ಬಾರಿಸಿದರೆ, ಗುರುಕೀರತ್ ಸಿಂಗ್ ಮಾನ್ 33 ರನ್​ಗಳ ಕೊಡುಗೆ ನೀಡಿದರು.

ಇನ್ನು ಇರ್ಫಾನ್ ಪಠಾಣ್ 22 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಇಂಡಿಯಾ ಚಾಂಪಿಯನ್ಸ್ ತಂಡವು 19 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್​ ಬಾರಿಸುವ ಮೂಲಕ 3 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

ಇಂಗ್ಲೆಂಡ್ ಚಾಂಪಿಯನ್ಸ್ ಪ್ಲೇಯಿಂಗ್ 11: ಇಯಾನ್ ಬೆಲ್ , ಕೆವಿನ್ ಒ ಬ್ರಿಯಾನ್ , ಕೆವಿನ್ ಪೀಟರ್ಸನ್ (ನಾಯಕ) , ಫಿಲ್ ಮಸ್ಟರ್ಡ್ (ವಿಕೆಟ್ ಕೀಪರ್) , ರವಿ ಬೋಪಾರ , ಸಮಿತ್ ಪಟೇಲ್ , ಓವೈಸ್ ಶಾ , ರಿಯಾನ್ ಜೇ ಸೈಡ್ಬಾಟಮ್ , ಅಜ್ಮಲ್ ಶಹಜಾದ್ , ಕ್ರಿಸ್ ಸ್ಕೋಫೀಲ್ಡ್ , ಡ್ಯಾರೆನ್ ಮ್ಯಾಡಿ , ಸ್ಟುವರ್ಟ್ ಮೀಕರ್.

ಇದನ್ನೂ ಓದಿ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

ಇಂಡಿಯಾ ಚಾಂಪಿಯನ್ಸ್ ಪ್ಲೇಯಿಂಗ್ 11: ರಾಬಿನ್ ಉತ್ತಪ್ಪ , ನಮನ್ ಓಜಾ (ವಿಕೆಟ್ ಕೀಪರ್) , ಸುರೇಶ್ ರೈನಾ , ಯುವರಾಜ್ ಸಿಂಗ್ (ನಾಯಕ) , ಯೂಸುಫ್ ಪಠಾಣ್ , ಇರ್ಫಾನ್ ಪಠಾಣ್ , ಹರ್ಭಜನ್ ಸಿಂಗ್ , ಧವಲ್ ಕುಲಕರ್ಣಿ , ರಾಹುಲ್ ಶುಕ್ಲಾ , ಆರ್​ಪಿ ಸಿಂಗ್ , ವಿನಯ್ ಕುಮಾರ್ , ಗುರುಕೀರತ್ ಸಿಂಗ್ ಮಾನ್.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ