WCL 2024: ರಾಬಿನ್ ಉತ್ತಪ್ಪ ಸಿಡಿಲಬ್ಬರ: ಇಂಡಿಯಾ ಚಾಂಪಿಯನ್ಸ್​ಗೆ ಜಯ

World Championship of Legends 2024: ಇಂಗ್ಲೆಂಡ್​ನಲ್ಲಿ ಮಾಜಿ ಕ್ರಿಕೆಟಿಗರ ನಡುವಣ ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ ಟೂರ್ನಿ ನಡೆಯುತ್ತಿದೆ. ಈ ಟೂರ್ನಿಯಲ್ಲಿ ಇಂಡಿಯಾ, ಇಂಗ್ಲೆಂಡ್, ಪಾಕಿಸ್ತಾನ್, ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ ಸೇರಿದಂತೆ ಒಟ್ಟು 6 ತಂಡಗಳು ಕಣಕ್ಕಿಳಿಯುತ್ತಿದೆ. ಇಲ್ಲಿ ಇಂಡಿಯಾ ಚಾಂಪಿಯನ್ಸ್ ತಂಡವನ್ನು ಯುವರಾಜ್ ಸಿಂಗ್ ಮುನ್ನಡೆಸುತ್ತಿರುವುದು ವಿಶೇಷ.

WCL 2024: ರಾಬಿನ್ ಉತ್ತಪ್ಪ ಸಿಡಿಲಬ್ಬರ: ಇಂಡಿಯಾ ಚಾಂಪಿಯನ್ಸ್​ಗೆ ಜಯ
Robin Uthappa
Follow us
|

Updated on: Jul 04, 2024 | 10:05 AM

ವರ್ಲ್ಡ್ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್  (WCL 2024) ಟೂರ್ನಿಯ ಮೊದಲ ಪಂದ್ಯದಲ್ಲೇ ಇಂಡಿಯಾ ಚಾಂಪಿಯನ್ಸ್ ಜಯಭೇರಿ ಬಾರಿಸಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆದ ಈ ಪಂದ್ಯದಲ್ಲಿ ಇಂಡಿಯಾ ಚಾಂಪಿಯನ್ಸ್ ಮತ್ತು ಇಂಗ್ಲೆಂಡ್ ಚಾಂಪಿಯನ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದ ಇಂಡಿಯಾ ತಂಡದ ನಾಯಕ ಯುವರಾಜ್ ಸಿಂಗ್ ಬೌಲಿಂಗ್ ಆಯ್ದುಕೊಂಡರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಚಾಂಪಿಯನ್ಸ್ ಪರ ಇಯಾನ್ ಬೆಲ್ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. 44 ಎಸೆತಗಳನ್ನು ಎದುರಿಸಿದ ಬೆಲ್ 9 ಫೋರ್​ಗಳೊಂದಿಗೆ 59 ರನ್ ಬಾರಿಸಿದರು.

ಇನ್ನು ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ ಸಮಿತ್ ಪಟೇಲ್ ಕೇವಲ 25 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 51 ರನ್ ಚಚ್ಚಿದರು. ಈ ಮೂಲಕ ಇಂಗ್ಲೆಂಡ್ ಚಾಂಪಿಯನ್ಸ್ ತಂಡವು 20 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿತು.

166 ರನ್​ಗಳ ಟಾರ್ಗೆಟ್:

ಇಂಗ್ಲೆಂಡ್ ಚಾಂಪಿಯನ್ಸ್ ನೀಡಿದ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಇಂಡಿಯಾ ಚಾಂಪಿಯನ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ಸ್ಪೋಟಕ ಆರಂಭ ಒದಗಿಸಿದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಉತ್ತಪ್ಪ ಸಿಕ್ಸ್​-ಫೋರ್​ಗಳ ಸುರಿಮಳೆಗೈದರು.

ಅಲ್ಲದೆ 32 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 50 ರನ್ ಬಾರಿಸಿ ಔಟಾದರು. ಇನ್ನು ಒಮನ್ ಓಜಾ 25 ರನ್ ಬಾರಿಸಿದರೆ, ಗುರುಕೀರತ್ ಸಿಂಗ್ ಮಾನ್ 33 ರನ್​ಗಳ ಕೊಡುಗೆ ನೀಡಿದರು.

ಇನ್ನು ಇರ್ಫಾನ್ ಪಠಾಣ್ 22 ರನ್​ಗಳ ಕೊಡುಗೆ ನೀಡಿದರು. ಈ ಮೂಲಕ ಇಂಡಿಯಾ ಚಾಂಪಿಯನ್ಸ್ ತಂಡವು 19 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 166 ರನ್​ ಬಾರಿಸುವ ಮೂಲಕ 3 ವಿಕೆಟ್​ಗಳ ರೋಚಕ ಜಯ ಸಾಧಿಸಿತು.

ಇಂಗ್ಲೆಂಡ್ ಚಾಂಪಿಯನ್ಸ್ ಪ್ಲೇಯಿಂಗ್ 11: ಇಯಾನ್ ಬೆಲ್ , ಕೆವಿನ್ ಒ ಬ್ರಿಯಾನ್ , ಕೆವಿನ್ ಪೀಟರ್ಸನ್ (ನಾಯಕ) , ಫಿಲ್ ಮಸ್ಟರ್ಡ್ (ವಿಕೆಟ್ ಕೀಪರ್) , ರವಿ ಬೋಪಾರ , ಸಮಿತ್ ಪಟೇಲ್ , ಓವೈಸ್ ಶಾ , ರಿಯಾನ್ ಜೇ ಸೈಡ್ಬಾಟಮ್ , ಅಜ್ಮಲ್ ಶಹಜಾದ್ , ಕ್ರಿಸ್ ಸ್ಕೋಫೀಲ್ಡ್ , ಡ್ಯಾರೆನ್ ಮ್ಯಾಡಿ , ಸ್ಟುವರ್ಟ್ ಮೀಕರ್.

ಇದನ್ನೂ ಓದಿ: ಟಿ20 ವಿಶ್ವಕಪ್ ಮುಕ್ತಾಯದ ಬೆನ್ನಲ್ಲೇ ನಿವೃತ್ತಿ ಘೋಷಿಸಿದ ಐವರು ಆಟಗಾರರು..!

ಇಂಡಿಯಾ ಚಾಂಪಿಯನ್ಸ್ ಪ್ಲೇಯಿಂಗ್ 11: ರಾಬಿನ್ ಉತ್ತಪ್ಪ , ನಮನ್ ಓಜಾ (ವಿಕೆಟ್ ಕೀಪರ್) , ಸುರೇಶ್ ರೈನಾ , ಯುವರಾಜ್ ಸಿಂಗ್ (ನಾಯಕ) , ಯೂಸುಫ್ ಪಠಾಣ್ , ಇರ್ಫಾನ್ ಪಠಾಣ್ , ಹರ್ಭಜನ್ ಸಿಂಗ್ , ಧವಲ್ ಕುಲಕರ್ಣಿ , ರಾಹುಲ್ ಶುಕ್ಲಾ , ಆರ್​ಪಿ ಸಿಂಗ್ , ವಿನಯ್ ಕುಮಾರ್ , ಗುರುಕೀರತ್ ಸಿಂಗ್ ಮಾನ್.

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ