AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಭಾರತವನ್ನು ಸೋಲಿಸಿದ್ದೇವೆ: ಪಾಕ್ ಆಟಗಾರನ ತಿರುಗೇಟು!

India vs Pakistan: ಭಾರತ ಮತ್ತು ಪಾಕಿಸ್ತಾನ್ ತಂಡಗಳು ಟಿ20 ವಿಶ್ವಕಪ್​ನಲ್ಲಿ ಈವರೆಗೆ 9 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 8 ಬಾರಿ ಗೆಲುವು ದಾಖಲಿಸಿದೆ. ಇನ್ನು ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ. ಈ ಗೆಲುವನ್ನೇ ಮುಂದಿಟ್ಟುಕೊಂಡು ಶಾದಾಬ್ ಖಾನ್ ಪಾಕಿಸ್ತಾನ್ ಮಾಜಿ ಆಟಗಾರರಿಗೆ ತಿರುಗೇಟು ನೀಡಿದ್ದಾರೆ.

ನಾವು ಭಾರತವನ್ನು ಸೋಲಿಸಿದ್ದೇವೆ: ಪಾಕ್ ಆಟಗಾರನ ತಿರುಗೇಟು!
Shadab Khan
ಝಾಹಿರ್ ಯೂಸುಫ್
|

Updated on: Feb 19, 2026 | 3:24 PM

Share

T20 World Cup 2026: ಟಿ20 ವಿಶ್ವಕಪ್​ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡದ ಪರಾಜಯ ಮುಂದುವರೆದಿದೆ. ಈ ಪರಾಜಯದ ಬೆನ್ನಲ್ಲೇ ಪಾಕ್ ತಂಡದ ಪ್ರದರ್ಶನದ ಬಗ್ಗೆ ಭಾರೀ ಟೀಕೆಗಳು ವ್ಯಕ್ತವಾಗಿದ್ದವು. ಅದರಲ್ಲೂ ಬಾಸಿತ್ ಅಲಿ, ಶಾಹಿದ್ ಅಫ್ರಿದಿ, ಮೊಹಮ್ಮದ್ ಯೂಸುಫ್ ಸೇರಿದಂತೆ ಕೆಲ ಮಾಜಿ ಆಟಗಾರರು ಹಿರಿಯ ಆಟಗಾರರನ್ನು ಗುರಿಯಾಗಿಸಿ ಹೇಳಿಕೆ ನೀಡಿದ್ದರು. ಇದೀಗ ಈ ಹೇಳಿಕೆಗಳಿಗೆ ಪಾಕ್ ಆಲ್​ರೌಂಡರ್ ಶಾದಾಬ್ ಖಾನ್ ತಿರುಗೇಟು ನೀಡಿದ್ದಾರೆ.

ನಮೀಬಿಯ ವಿರುದ್ಧದ ಪಂದ್ಯದ ಬಳಿಕ ಸುದ್ದಿಗೋಷ್ಠಿ ಮಾತನಾಡಿದ ಶಾದಾಬ್ ಖಾನ್, ನೀವು ಶ್ರೇಷ್ಠ ಆಟಗಾರರೇ ಇರಬಹುದು. ಆದರೆ ನಿಮ್ಮ ಕಾಲದಲ್ಲಿ ವಿಶ್ವಕಪ್‌ನಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಗಿರಲಿಲ್ಲ ಎಂಬುದು ನೆನಪಿರಲಿ. ಆದರೆ ನಾವು ಭಾರತ ತಂಡವನ್ನು ಸೋಲಿಸಿದ್ದೇವೆ. ಈ ವಿಷಯ ಕೂಡ ನಿಮಗೆ ನೆನಪಲ್ಲಿರಬೇಕು ಎಂದಿದ್ದಾರೆ.

2021ರ ಟಿ20 ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಪಾಕಿಸ್ತಾನ್ ತಂಡ 10 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಇದು ವಿಶ್ವಕಪ್ ಇತಿಹಾಸದಲ್ಲಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಸಿಕ್ಕ ಏಕೈಕ ಜಯವಾಗಿದೆ. ಈ ವೇಳೆ ಶಾದಾಬ್ ಖಾನ್ ಕೂಡ ಪಾಕ್ ತಂಡದಲ್ಲಿದ್ದರು. ಇದನ್ನೇ ಪ್ರಸ್ತಾಪಿಸಿ ಇದೀಗ ಪಾಕ್ ಆಲ್​ರೌಂಡರ್ ಟೀಕಿಸಿದ ಮಾಜಿ ಆಟಗಾರರಿಗೆ ತಿರುಗೇಟು ನೀಡಿದ್ದಾರೆ.

ಶಾದಾಬ್ ಹೇಳಿಕೆಗೆ ಆಕ್ರೋಶ:

ಶಾದಾಬ್ ಖಾನ್ ಅವರ ಈ ಹೇಳಿಕೆಗೆ ಮಾಜಿ ಕ್ರಿಕೆಟಿಗ ಬಾಸಿತ್ ಅಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾದಾಬ್  ಅವರ ಈ ಹೇಳಿಕೆಯು ಅವರ ಮಾವನಿಗೆ ಮಾಡಿದ ಅವಮಾನ. ಏಕೆಂದರೆ ಅವರು ಮಾವ ಪಾಕಿಸ್ತಾನ್ ತಂಡದ ದಂತಕಥೆ. ಇದೀಗ ನಿಮ್ಮಿಂದ ಆಗದಿರುವುದನ್ನು ನಾವು ಮಾಡಿ ತೋರಿಸಿದ್ದೇವೆ ಅಂದಿರುವುದು ಸಕ್ಲೇನ್​ ಮುಷ್ತಾಕ್​ಗೆ ಮಾಡಿದ ಅವಮಾನವೆಂದು ಪರಿಗಣಿಸಬಹುದು ಎಂದು ಬಾಸಿತ್ ಅಲಿ ಹೇಳಿದ್ದಾರೆ.

ಪಾಕಿಸ್ತಾನದ ಮಾಜಿ ಸ್ಪಿನ್ ಲೆಜೆಂಡ್ ಸಕ್ಲೇನ್ ಮುಷ್ತಾಕ್ ಅವರ ಪುತ್ರಿಯನ್ನು ಶಾದಾಬ್ ಖಾನ್ ಮದುವೆಯಾಗಿದ್ದಾರೆ. ಇದೀಗ ವಿಶ್ವಕಪ್​ನಲ್ಲಿ ನಾವು ಮಾತ್ರ ಭಾರತದ ವಿರುದ್ಧ ಗೆದ್ದಿರುವುದು ಅಂದಿರುವುದು ಶಾದಾಬ್ ಮಾವನಿಗೆ ಮಾಡಿದಂತಹ ಅತೀ ದೊಡ್ಡ ಅವಮಾನ.

ಇದನ್ನೂ ಓದಿ: T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

ಶಾದಾಬ್ ಹೇಳಿಕೆಯನ್ನು ತೆಗೆದುಕೊಂಡರೆ, ಸಕ್ಲೇನ್ ಮ್ಯಾಚ್ ವಿನ್ನರ್ ಆಗಿರಲಿಲ್ಲವೇ? ಶಾದಾಬ್ ಖಾನ್​ನಂತ 10 ಬೌಲರ್​ಗಳಿಗೆ ಒಬ್ಬ ಸಕ್ಲೇನ್ ಸಮ. ಇದಾಗ್ಯೂ ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಈ ರೀತಿಯ ಹೇಳಿಕೆಗಳ ಬದಲಿಗೆ ಮೈದಾನದಲ್ಲಿ ನಿಮ್ಮ ಪ್ರದರ್ಶನ ತೋರಿಸಿ ಎಂದು ಬಾಸಿತ್ ಅಲಿ ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಯೋಗಿ, ದಿಗಂತ್, ಸತೀಶ್: ವೇದಿಕೆ ಮೇಲೆ ಮೂವರು ಗೆಳೆಯರ ಮಾತುಗಳು
ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ
ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026': ಮೋದಿ ಭಾಷಣ ಕನ್ನಡದಲ್ಲಿ ಕೇಳಿ
ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್
ಮೊದಲ ಬಾರಿಗೆ ಮಗಳ ಪರಿಚಯಿಸಿದ ನೀನಾಸಂ ಸತೀಶ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐನಿಂದಾಗುವ ಅಪಾಯಗಳ ತಗ್ಗಿಸುವ ಉಪಾಯ ಕಂಡುಕೊಳ್ಳಬೇಕು: ಅಶ್ವಿನಿ ವೈಷ್ಣವ್
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಎಐ ಇಂಪ್ಯಾಕ್ಟ್​ ಶೃಂಗಸಭೆ: ವಿಶ್ವನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು
ಬೆಂಗಳೂರಿನಲ್ಲಿ ಕಸದ ಸಮಸ್ಯೆ: ನಿಂತಲ್ಲೇ ನಿಂತ ತ್ಯಾಜ್ಯ ಸಂಗ್ರಹಣೆ ವಾಹನಗಳು