AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಟೀಮ್ ಇಂಡಿಯಾ ಸೋಲಿಗೆ ಯಾರು ಕಾರಣ? ರೋಹಿತ್ ಶರ್ಮಾ ಹೇಳಿದ್ದೇನು?

India vs Australia: ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಮೊದಲು ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಸ್ಪೋಟಕ ಆರಂಭ ಒದಗಿಸಿದ್ದರು.

Rohit Sharma: ಟೀಮ್ ಇಂಡಿಯಾ ಸೋಲಿಗೆ ಯಾರು ಕಾರಣ? ರೋಹಿತ್ ಶರ್ಮಾ ಹೇಳಿದ್ದೇನು?
Rohit sharma
TV9 Web
| Updated By: ಝಾಹಿರ್ ಯೂಸುಫ್|

Updated on: Sep 21, 2022 | 11:55 AM

Share

India vs Australia 1st T20: ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಹೀನಾಯವಾಗಿ ಸೋತಿದೆ. 209 ರನ್​ಗಳ ಬೃಹತ್ ಟಾರ್ಗೆಟ್ ನೀಡಿದರೂ ಈ ಮೊತ್ತವನ್ನು ಆಸ್ಟ್ರೇಲಿಯಾ ತಂಡವು ಸುಲಭವಾಗಿ ಚೇಸ್ ಮಾಡಿತು. ಈ ಸೋಲಿನ ಬಳಿಕ ಮಾತನಾಡಿದ ನಾಯಕ ರೋಹಿತ್ ಶರ್ಮಾ, ತಂಡದ ಹೀನಾಯ ಸೋಲಿಗೆ ಬೌಲರ್​ಗಳೇ ಕಾರಣ ಎಂದರು. ನಮ್ಮ ಬೌಲಿಂಗ್ ತುಂಬಾ ಕೆಟ್ಟದ್ದಾಗಿತ್ತು. ಅಲ್ಲದೆ ಮೈದಾನದಲ್ಲಿ ಸಿಕ್ಕ ಕೆಲ ಅವಕಾಶಗಳನ್ನೂ ಕೂಡ ನಾವು ಬಳಸಿಕೊಂಡಿಲ್ಲ. ಇದರ ಸಂಪೂರ್ಣ ಲಾಭ ಪಡೆದ ಆಸ್ಟ್ರೇಲಿಯಾ ತಂಡವು ಸುಲಭವಾಗಿ ಜಯ ಸಾಧಿಸಿದೆ ಎಂದು ರೋಹಿತ್ ಶರ್ಮಾ ಹೇಳಿದರು.

ಇನ್ನು ತಂಡದ ಕಳಪೆ ಪ್ರದರ್ಶನಕ್ಕೆ ಬೌಲರ್​ಗಳನ್ನೇ ದೂರಿದ ಹಿಟ್​ಮ್ಯಾನ್ ನಾವು ಅಷ್ಟು ಚೆನ್ನಾಗಿ ಬೌಲಿಂಗ್ ಮಾಡಿದ್ದೇವೆ ಎಂದು ನಾನು ಭಾವಿಸುವುದಿಲ್ಲ. 200 ಸ್ಕೋರ್ ಡಿಫೆಂಡ್ ಮಾಡಲು ಸಾಧ್ಯವಾಗಿಲ್ಲ ಎಂದರೆ ಅದು ಅತ್ಯಂತ ಕೆಟ್ಟ ಬೌಲಿಂಗ್ ಪ್ರದರ್ಶನವಾಗಿರುತ್ತದೆ. ಏಕೆಂದರೆ ನಾವು ಉತ್ತಮವಾಗಿ ಬ್ಯಾಟಿಂಗ್ ಮಾಡಿದ್ದೇವೆ. ನಾವು ಎಲ್ಲಿ ತಪ್ಪು ಮಾಡಿದ್ದೇವೆ ಎಂಬುದನ್ನು ತಿಳಿಯಲು ಇದು ಉತ್ತಮ ವೇದಿಕೆಯಾಗಿತ್ತು. ಹೀಗಾಗಿ ಮುಂಬರುವ ಪಂದ್ಯದಲ್ಲಿ ತಪ್ಪನ್ನು ಸರಿಪಡಿಸಿ ಕಂಬ್ಯಾಕ್ ಮಾಡಲಿದ್ದೇವೆ ಎಂದು ರೋಹಿತ್ ಶರ್ಮಾ ವಿಶ್ವಾಸ ವ್ಯಕ್ತಪಡಿಸಿದರು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಆರೋನ್ ಫಿಂಚ್ ಮೊದಲು ಬೌಲಿಂಗ್ ಆಯ್ದುಕೊಂಡರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾಗೆ ನಾಯಕ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಸ್ಪೋಟಕ ಆರಂಭ ಒದಗಿಸಿದ್ದರು. ಆದರೆ 11 ರನ್​ಗಳಿಸಿದ್ದ ವೇಳೆ ಹಿಟ್​ಮ್ಯಾನ್ ಕ್ಯಾಚ್ ನೀಡಿ ಹೊರನಡೆಯಬೇಕಾಯಿತು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (2) ಕೂಡ ವಿಕೆಟ್ ಒಪ್ಪಿಸಿದರು. ಆದರೆ ಮತ್ತೊಂದೆಡೆ ಸಿಡಿಲಬ್ಬರದ ಪ್ರದರ್ಶಿಸಿದ ಟೀಮ್ ಇಂಡಿಯಾ ಉಪನಾಯಕ ಕೆಎಲ್ ರಾಹುಲ್ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದರು. ಪರಿಣಾಮ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಕೆಎಲ್ ರಾಹುಲ್​ಗೆ ಉತ್ತಮ ಸಾಥ್ ನೀಡಿದ ಸೂರ್ಯ ಕುಮಾರ್ ಯಾದವ್ ಕೂಡ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

ಇದನ್ನೂ ಓದಿ
Image
Team India New Jersey: 25 ಕ್ಕೂ ಹೆಚ್ಚು ಬಾರಿ ಜೆರ್ಸಿ ಬದಲಿಸಿದ ಟೀಮ್ ಇಂಡಿಯಾ: ಇಲ್ಲಿದೆ ಫೋಟೋಸ್
Image
RCB ತಂಡದ ಮೊದಲ ಪ್ಲೇಯಿಂಗ್ ಇಲೆವೆನ್​ನಲ್ಲಿ ಯಾರೆಲ್ಲಾ ಇದ್ದರು ಗೊತ್ತಾ?
Image
Sanju Samson: ಧೋನಿ, ದ್ರಾವಿಡ್​ಗೂ ಸಾಧ್ಯವಾಗದ ದಾಖಲೆ ನಿರ್ಮಿಸಿದ ಸಂಜು ಸ್ಯಾಮ್ಸನ್
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ಆದರೆ ಅರ್ಧಶತಕದ ಬೆನ್ನಲ್ಲೇ ಕೆಎಲ್ ರಾಹುಲ್ (55) ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿದರು. 35 ಎಸೆತಗಳನ್ನು ಎದುರಿಸಿದ್ದ ರಾಹುಲ್ 3 ಸಿಕ್ಸ್ ಹಾಗೂ 4 ಫೋರ್​ ಬಾರಿಸಿ ಗಮನ ಸೆಳೆದರು. ಇದಾಗ್ಯೂ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ್ದ ಸೂರ್ಯಕುಮಾರ್ ಯಾದವ್ 4 ಸಿಕ್ಸ್​ನೊಂದಿಗೆ 25 ಎಸೆತಗಳಲ್ಲಿ 45 ರನ್​ ಬಾರಿಸಿದರು. ಆದರೆ ಹಾಫ್ ಸೆಂಚುರಿ ಹೊಸ್ತಿಲ್ಲಲಿ ಕೀಪರ್​ಗೆ ಕ್ಯಾಚ್ ನೀಡಿದರು.

5ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಹಾರ್ದಿಕ್ ಪಾಂಡ್ಯ ಅಕ್ಷರಶಃ ಅಬ್ಬರಿಸಿದರು. ಆಸೀಸ್ ಬೌಲರ್​ಗಳ ಬೆಂಡೆತ್ತಿದ ಪಾಂಡ್ಯ ಕೇವಲ 25 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರು. ಅಷ್ಟೇ ಅಲ್ಲದೆ 5 ಸಿಕ್ಸ್ ಹಾಗೂ 7 ಫೋರ್​ನೊಂದಿಗೆ ಕೇವಲ 30 ಎಸೆತಗಳಲ್ಲಿ ಅಜೇಯ 71 ರನ್ ಬಾರಿಸುವ ಮೂಲಕ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ ಟೀಮ್ ಇಂಡಿಯಾ ಮೊತ್ತವನ್ನು 208 ಕ್ಕೆ ತಂದು ನಿಲ್ಲಿಸಿದರು.

ಆದರೆ ಟೀಮ್ ಇಂಡಿಯಾ ಪರ ಅಕ್ಷರ್ ಪಟೇಲ್ 4 ಓವರ್​ಗಳಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ್ದು ಬಿಟ್ಟರೆ ಉಳಿದ ಬೌಲರ್​ಗಳಿಂದ ಉತ್ತಮ ಪ್ರದರ್ಶನ ಮೂಡಿಬಂದಿರಲಿಲ್ಲ. ವೇಗಿ ಭುವನೇಶ್ವರ್ ಕುಮಾರ್ ಯಾವುದೇ ವಿಕೆಟ್ ಪಡೆಯದೇ 4 ಓವರ್​ಗಳಲ್ಲಿ 52 ರನ್​ ನೀಡಿದರು. ಮತ್ತೊಂದೆಡೆ ಹರ್ಷಲ್ ಪಟೇಲ್ ಕೂಡ 4 ಓವರ್​ಗಳಲ್ಲಿ 49 ರನ್​ ಬಿಟ್ಟುಕೊಟ್ಟರು. ಹಾಗೆಯೇ ಚಹಾಲ್ 3.2 ಓವರ್​ಗಳಲ್ಲಿ 42 ರನ್​ ನೀಡಿದರು. ಇನ್ನು ಉಮೇಶ್ ಯಾದವ್ 2 ವಿಕೆಟ್ ಪಡೆದರೂ 2 ಓವರ್​ಗಳಲ್ಲಿ 27 ರನ್ ಚಚ್ಚಿಸಿಕೊಂಡಿದ್ದರು. ಪರಿಣಾಮ 19.2 ಓವರ್​ಗಳಲ್ಲಿ ಆಸ್ಟ್ರೇಲಿಯಾ ತಂಡವು 6 ವಿಕೆಟ್ ನಷ್ಟಕ್ಕೆ 211 ರನ್​ ಬಾರಿಸಿ 4 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ