AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೋಂಟ್ ವರಿ, ನಮಗೆ IPL​ ಇದೆ ಎಂದ ಸೂರ್ಯಕುಮಾರ್ ಯಾದವ್

India vs South Africa: ಸೌತ್ ಆಫ್ರಿಕಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗಳಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ವಿಶ್ರಾಂತಿಯ ಕಾರಣ ಈ ಇಬ್ಬರು ಆಟಗಾರರು ಸೀಮಿತ ಓವರ್​ಗಳ ಸರಣಿಗಳಿಂದ ಹೊರಗುಳಿದಿದ್ದು, ಇದಾಗ್ಯೂ ಟೆಸ್ಟ್ ಸರಣಿ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಡೋಂಟ್ ವರಿ, ನಮಗೆ IPL​ ಇದೆ ಎಂದ ಸೂರ್ಯಕುಮಾರ್ ಯಾದವ್
Suryakumar Yadav
TV9 Web
| Edited By: |

Updated on: Dec 10, 2023 | 3:27 PM

Share

ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ (Team India) ಮುಂದಿರುವುದು ಕೇವಲ 6 ಟಿ20 ಪಂದ್ಯಗಳು ಮಾತ್ರ. ಸೌತ್ ಆಫ್ರಿಕಾ ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿರುವ ಭಾರತ ತಂಡವು ಇದಾದ ಬಳಿಕ ಏಕದಿನ ಹಾಗೂ ಟೆಸ್ಟ್ ಸರಣಿ ಆಡಲಿದೆ. ಇನ್ನು ಜನವರಿಯಲ್ಲಿ ಅಫ್ಘಾನಿಸ್ತಾನ್ ವಿರುದ್ಧ 3 ಟಿ20 ಪಂದ್ಯಗಳನ್ನಾಡಲಿದೆ. ಇದಾದ ಬಳಿಕ ಭಾರತ ತಂಡವು ಟಿ20 ಪಂದ್ಯಗಳನ್ನಾಡಲಿರುವುದು ಟಿ20 ವಿಶ್ವಕಪ್​ನಲ್ಲಿ ಎಂಬುದು ವಿಶೇಷ.

ಆದರೆ ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ ಮುಂದೆ ಕೇವಲ 6 ಪಂದ್ಯಗಳಿರುವುದು ನಮಗೆ ಯಾವುದೇ ಸಮಸ್ಯೆಯನ್ನುಂಟು ಮಾಡುವುದಿಲ್ಲ ಎಂದಿದ್ದಾರೆ ಭಾರತ ತಂಡದ ಹಂಗಾಮಿ ನಾಯಕ ಸೂರ್ಯಕುಮಾರ್ ಯಾದವ್.

ಸೌತ್ ಆಫ್ರಿಕಾ ವಿರುದ್ಧದ ಟಿ20 ಸರಣಿಗೂ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾಣಿಸಿಕೊಂಡ ಸೂರ್ಯಕುಮಾರ್, ವಿಶ್ವಕಪ್​ಗೂ ಮುನ್ನ ಟಿ20 ಪಂದ್ಯಗಳ ಕೊರತೆಯು ಭಾರತ ತಂಡವನ್ನು ಬಾಧಿಸುವುದಿಲ್ಲ. ಏಕೆಂದರೆ ನಮ್ಮ ಮುಂದೆ ಐಪಿಎಲ್ ಇದೆ.

ನಾವು ವಿಶ್ವಕಪ್​ಗೂ ಮುನ್ನ ಸೀಮಿತ ಪಂದ್ಯಗಳನ್ನು ಹೊಂದಿದ್ದೇವೆ ನಿಜ. ಆದರೆ ಐಪಿಎಲ್​ನ 14 ಪಂದ್ಯಗಳ ಮೂಲಕ ನಾವು ಟಿ20 ವಿಶ್ವಕಪ್​ಗೆ ತಯಾರಿ ನಡೆಸಬಹುದು. ಈ ಮೂಲಕ ಟಿ20 ವಿಶ್ವಕಪ್​ ಟೂರ್ನಿಗೆ ಸಜ್ಜಾಗಲು ನಮ್ಮ ಆಟಗಾರರಿಗೆ ಉತ್ತಮ ಆಯ್ಕೆಯಿದೆ. ಹೀಗಾಗಿ ಕೇವಲ 6 ಪಂದ್ಯಗಳಿರುವುದು ಭಾರತೀಯ ಆಟಗಾರರಿಗೆ ಸಮಸ್ಯೆಯಾಗುವುದಿಲ್ಲ ಎಂದು ಸೂರ್ಯಕುಮಾರ್ ಯಾದವ್ ತಿಳಿಸಿದ್ದಾರೆ.

ಅದರಂತೆ ಟಿ20 ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾ ಆಡಲಿರುವ 6 ಪಂದ್ಯಗಳ ಮೊದಲ ಮ್ಯಾಚ್ ಇಂದು (ಡಿ.10) ಡರ್ಬನ್​ನಲ್ಲಿ ನಡೆಯಲಿದೆ. ಸೌತ್ ಆಫ್ರಿಕಾ ವಿರುದ್ಧದ ಈ ಸರಣಿಯ ಮೂಲಕ ಟೀಮ್ ಇಂಡಿಯಾ ಟಿ20 ವಿಶ್ವಕಪ್​ಗಾಗಿ ತಯಾರಿಗಳನ್ನು ಆರಂಭಿಸಲಿದೆ ಎನ್ನಬಹುದು. ಹೀಗಾಗಿ ಈ ಸರಣಿಯು ಭಾರತದ ಪಾಲಿಗೆ ತುಂಬಾ ಮಹತ್ವದ ಸರಣಿಯಾಗಿ ಮಾರ್ಪಟ್ಟಿದೆ.

ಕೊಹ್ಲಿ-ರೋಹಿತ್ ಇಲ್ಲ:

ಸೌತ್ ಆಫ್ರಿಕಾ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಗಳಿಂದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ವಿಶ್ರಾಂತಿಯ ಕಾರಣ ಈ ಇಬ್ಬರು ಆಟಗಾರರು ಸೀಮಿತ ಓವರ್​ಗಳ ಸರಣಿಗಳಿಂದ ಹೊರಗುಳಿದಿದ್ದು, ಇದಾಗ್ಯೂ ಟೆಸ್ಟ್ ಸರಣಿ ವೇಳೆ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಟಿ20 ವಿಶ್ವಕಪ್ ಯಾವಾಗ?

ವೆಸ್ಟ್ ಇಂಡೀಸ್-ಯುಎಸ್​ಎ ಆತಿಥ್ಯವಹಿಸಲಿರುವ ಟಿ20 ವಿಶ್ವಕಪ್ ಜೂನ್ 4 ರಿಂದ ಶುರುವಾಗಲಿದೆ. ಅಂದರೆ ಐಪಿಎಲ್ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ.

ಭಾರತ-ಸೌತ್ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ:

  1. ಡಿಸೆಂಬರ್ 10- ಮೊದಲ ಟಿ20 ಪಂದ್ಯ (ಡರ್ಬನ್)
  2. ಡಿಸೆಂಬರ್ 12- ಎರಡನೇ ಟಿ20 ಪಂದ್ಯ (ಗೆಬರ್ಹ)
  3. ಡಿಸೆಂಬರ್ 14- ಮೂರನೇ ಟಿ20 ಪಂದ್ಯ (ಜೋಹಾನ್ಸ್​ಬರ್ಗ್​)

ಇದನ್ನೂ ಓದಿ: ಸಿಕ್ಸ್ ಸಿಡಿಸಿಯೇ ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಭಾರತ ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್ , ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ