AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ದಿಗ್ಗಜನಿಗೆ ಕೊಟ್ಟ ಮಾತು ಉಳಿಸಿದ ಅಫ್ಘಾನ್ ಪಡೆ

T20 World Cup 2024: ಟಿ20 ವಿಶ್ವಕಪ್​ನ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶ್ ತಂಡವನ್ನು ಬಗ್ಗು ಬಡಿದು ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದೆ. ಜೂನ್ 26 ರಂದು ಟ್ರಿನಿಡಾಡ್- ಟೊಬಾಗೊದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಸೌತ್ ಆಫ್ರಿಕಾವನ್ನು ಎದುರಿಸಲಿದೆ.

ಕ್ರಿಕೆಟ್ ದಿಗ್ಗಜನಿಗೆ ಕೊಟ್ಟ ಮಾತು ಉಳಿಸಿದ ಅಫ್ಘಾನ್ ಪಡೆ
Brian Lara-Afghanistan
ಝಾಹಿರ್ ಯೂಸುಫ್
|

Updated on: Jun 25, 2024 | 8:54 PM

Share

T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ ಹಲವು ಅಚ್ಚರಿಯ ಫಲಿತಾಂಶಕ್ಕೆ ಸಾಕ್ಷಿಯಾಗಿದೆ. ಈ ಅಚ್ಚರಿಗಳ ನಡುವೆ ಬಲಿಷ್ಠರನ್ನೇ ಬಗ್ಗು ಬಡಿದು ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಪ್ರವೇಶಿಸಿದೆ. ಆದರೆ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನವೇ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೇರಲಿದೆ  ಎಂದು ಕ್ರಿಕೆಟ್ ದಿಗ್ಗಜ ಬ್ರಿಯಾನ್ ಲಾರಾ ಭವಿಷ್ಯ ನುಡಿದಿದ್ದರು ಎಂಬುದು ವಿಶೇಷ. ಹಲವು ಮಾಜಿ ಕ್ರಿಕೆಟಿಗರು ಸೆಮಿಫೈನಲ್​ಗೆ ಪ್ರವೇಶಿಸುವ 4 ತಂಡಗಳ ಪಟ್ಟಿಯಲ್ಲಿ ಬಲಿಷ್ಠ ಪಡೆಗಳನ್ನೇ ಹೆಸರಿಸಿದ್ದರು.  ಆದರೆ ಬ್ರಿಯಾನ್ ಲಾರಾ ಹೆಸರಿಸಿದ ನಾಲ್ಕು ತಂಡಗಳಲ್ಲಿ ಅಫ್ಘಾನಿಸ್ತಾನ್ ಕೂಡ ಇತ್ತು. ಅಂದು ಅವರ ಆಯ್ಕೆ ಬಗ್ಗೆ ಅನೇಕರು ಅಚ್ಚರಿಯನ್ನು ಸಹ ವ್ಯಕ್ತಪಡಿಸಿದ್ದರು.

ಆದರೀಗ ಬ್ರಿಯಾನ್ ಲಾರಾ ಅವರ ಭವಿಷ್ಯ ನಿಜವಾಗಿದೆ. ಎಲ್ಲರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್ ಹಂತಕ್ಕೇರಿದೆ. ಈ ಮೂಲಕ ಕ್ರಿಕೆಟ್ ದಿಗ್ಗಜನ ಊಹೆಯನ್ನು ನಿಜವಾಗಿಸಿದ್ದಾರೆ.

ಕೊಟ್ಟ ಮಾತು ಉಳಿಸಿದ ಅಫ್ಘಾನ್ ಪಡೆ:

ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಅಫ್ಘಾನಿಸ್ತಾನ್ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಬ್ರಿಯಾನ್ ಲಾರಾ ನೀಡಿದ ಹೇಳಿಕೆಯನ್ನು ಅಫ್ಘಾನ್ ಆಟಗಾರರು ಕೂಡ ಗಮನಿಸಿದ್ದರು. ಅಲ್ಲದೆ ವಿಶ್ವಕಪ್ ಸಮಾರಂಭದಲ್ಲಿ ಲಾರಾ ಅವರನ್ನು ಭೇಟಿಯಾಗಿದ್ದ ಅಫ್ಘಾನ್ ತಂಡದ ನಾಯಕ ರಶೀದ್ ಖಾನ್ ನಿಮ್ಮ ಆಯ್ಕೆ ಸರಿ ಇದೆ ಎಂಬುದನ್ನು ನಾವು ನಿರೂಪಿಸುತ್ತೇವೆ ಎಂದು ಮಾತು ಕೊಟ್ಟಿದ್ದರು.

ಈ ಬಗ್ಗೆ ಮಾತನಾಡಿರುವ ರಶೀದ್ ಖಾನ್, ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್​ಗೆ ಎಂಟ್ರಿ ಕೊಡಲಿದೆ ಎಂದು ಹೇಳಿದ ಏಕೈಕ ವ್ಯಕ್ತಿ ಬ್ರಿಯಾನ್ ಲಾರಾ. ನಾವು ಅವರನ್ನು ಸ್ವಾಗತ ಸಮಾರಂಭದಲ್ಲಿ ಭೇಟಿಯಾದಾಗ, ನಾವು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ ಎಂದು ಅವರಿಗೆ ಹೇಳಿದ್ದೆ. ಇದೀಗ ನಾವು ಹೇಳಿದಂತೆ ನಿರೂಪಿಸಿದ್ದೇವೆ. ಕ್ರಿಕೆಟ್ ದಿಗ್ಗಜನ ಹೇಳಿಕೆಯನ್ನು ಸಾಬೀತುಪಡಿಸಿದ್ದೇವೆ ಎಂದು ರಶೀದ್ ಖಾನ್ ಹೇಳಿದ್ದಾರೆ.

ಒಬ್ಬ ಲೆಜೆಂಡ್ ಆಟಗಾರನಿಂದ ಒಂದು ತಂಡವು ಶ್ರೇಷ್ಠವಾಗಿದೆ. ಅವರು ಸೆಮಿಫೈನಲ್ ಪ್ರವೇಶಿಸುತ್ತದೆ ಎಂಬ ಹೇಳಿಕೆ ಕೇಳಿದಾಗ, ಅದು ನಮಗೆ ಸಾಕಷ್ಟು ಶಕ್ತಿಯನ್ನು ನೀಡುತ್ತದೆ ಎಂದು ನಾನು ಭಾವಿಸುತ್ತೇನೆ. ಅಲ್ಲದೆ ಅದಕ್ಕೆ ನಾವು ಸಮರ್ಥರಾಗಿದ್ದೇವೆ ಎಂಬ ನಂಬಿಕೆ ಮೂಡುತ್ತದೆ. ಅದರಂತೆ ಬ್ರಿಯಾನ್ ಲಾರಾ ಅವರ ಹೇಳಿಕೆಯು ನಮ್ಮಲ್ಲಿ ಹೊಸ ವಿಶ್ವಾಸ ಮೂಡಿಸಿತ್ತು. ಇದೀಗ ಅವರ ಹೇಳಿಕೆಯಂತೆ ನಾವು ಸೆಮಿಫೈನಲ್​ಗೆ ಪ್ರವೇಶಿಸಿದ್ದೇವೆ ಎಂದು ರಶೀದ್ ಖಾನ್ ಹರ್ಷ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: IND vs ENG: ಇಂಗ್ಲೆಂಡ್ ತಂಡದ ಚಿಂತೆ ಹೆಚ್ಚಿಸಿದ 4 ಗಂಟೆ 16 ನಿಮಿಷಗಳು..!

ಅಫ್ಘಾನ್ ಪಡೆಗೆ ರೋಚಕ ಜಯ:

ಬಾಂಗ್ಲಾದೇಶ್ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವು ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 20 ಓವರ್​ಗಳಲ್ಲಿ 115 ರನ್ ಕಲೆಹಾಕಿತು. ಮಳೆಯ ಕಾರಣ 19 ಓವರ್​ಗಳಿಗೆ ಸೀಮಿತವಾಗಿದ್ದ ಈ ಪಂದ್ಯದಲ್ಲಿ 114 ರನ್​ಗಳ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು 105 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡವು ಡಕ್​ವರ್ತ್ ಲೂಯಿಸ್ ನಿಯಮದ ಪ್ರಕಾರ 8 ರನ್​ಗಳ ರೋಚಕ ಜಯ ಸಾಧಿಸಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!