AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Champions Trophy 2025: ಭಾರತ ಬರದಿದ್ದರೂ, ನಾವು ಆಡುತ್ತೇವೆ ಅಷ್ಟೇ: ಹಸನ್ ಅಲಿ

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಅದರಂತೆ ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣಸಲಿದೆ. ಇನ್ನು 2025ರ ಚಾಂಪಿಯನ್ಸ್​ ಟ್ರೋಫಿ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಭಾರತ ತಂಡ ಪಾಕ್​ಗೆ ತೆರಳಲಿದೆಯಾ ಎಂಬುದೇ ಈಗ ಪ್ರಶ್ನೆ.

Champions Trophy 2025: ಭಾರತ ಬರದಿದ್ದರೂ, ನಾವು ಆಡುತ್ತೇವೆ ಅಷ್ಟೇ: ಹಸನ್ ಅಲಿ
Hasan Ali
ಝಾಹಿರ್ ಯೂಸುಫ್
|

Updated on: Jul 22, 2024 | 10:55 AM

Share

2025ರಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಟೂರ್ನಿಯ ಆತಿಥ್ಯಕ್ಕೆ ಪಾಕಿಸ್ತಾನ್ ಸಿದ್ಧತೆಗಳನ್ನು ಶುರು ಮಾಡಿಕೊಂಡಿದೆ. ಈಗಾಗಲೇ ಟೂರ್ನಿಯ ಕರಡು ವೇಳಾಪಟ್ಟಿಯನ್ನು ಐಸಿಸಿಗೆ ಕಳುಹಿಸಿದೆ. ಆದರೆ ಇತ್ತ ಭಾರತ ತಂಡವು ಟೂರ್ನಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಇನ್ನೂ ಸಹ ತನ್ನ ನಿಲುವನ್ನು ಸ್ಪಷ್ಟಪಡಿಸಿಲ್ಲ. ಪಾಕ್​ನಲ್ಲಿ ಟೂರ್ನಿ ನಡೆದರೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿಯುವ ಸಾಧ್ಯತೆಗಳಿವೆ ಎಂದು ಈ ಹಿಂದೆ ವರದಿಯಾಗಿತ್ತು. ಅಲ್ಲದೆ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸುವಂತೆ ಐಸಿಸಿಗೆ ಬಿಸಿಸಿಐ ಮನವಿ ಮಾಡಿದೆ ಎಂಬ ಸುದ್ದಿಗಳು ಹರಿದಾಡಿದ್ದವು.

ಆದರೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೈಬ್ರಿಡ್ ಮಾದರಿಯಲ್ಲಿ ಟೂರ್ನಿ ಆಯೋಜಿಸಲು ಒಪ್ಪುವ ಸಾಧ್ಯತೆಯಿಲ್ಲ. ಅಲ್ಲದೆ ಪಂದ್ಯಾವಳಿಯನ್ನು ಪಾಕ್​ನಲ್ಲೇ ಆಯೋಜಿಸುವ ತನ್ನ ನಿಲುವಿನಲ್ಲಿ ದೃಢವಾಗಿ ನಿಂತಿದೆ. ಹೀಗಾಗಿಯೇ ಭಾರತ ತಂಡ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಈ ಪ್ರಶ್ನೆಗೆ ಮಾತನಾಡಿರುವ ಪಾಕ್​ ತಂಡದ ಆಟಗಾರ ಹಸನ್ ಅಲಿ, ನಾವು ಭಾರತದಲ್ಲಿ ಪಂದ್ಯಗಳನ್ನಾಡಲು ಹೋಗುತ್ತಿದ್ದರೆ, ಅವರು ಸಹ ಪಾಕಿಸ್ತಾನಕ್ಕೂ ಬರಬೇಕು. ಕ್ರೀಡೆ ರಾಜಕೀಯದಿಂದ ದೂರವಿರಬೇಕು ಎಂದು ಬಹಳಷ್ಟು ಮಂದಿ ಹಲವು ಬಾರಿ ಹೇಳಿದ್ದಾರೆ. ಅತ್ತ ಭಾರತೀಯ ಆಟಗಾರರು ಕೂಡ ಪಾಕಿಸ್ತಾನದಲ್ಲಿ ಆಡಲು ಬಯಸುವುದಾಗಿ ಈ ಹಿಂದೆ ಸಂದರ್ಶನಗಳಲ್ಲಿ ಹೇಳಿದ್ದಾರೆ.

ಹೀಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಬರಲು ಬಯಸುತ್ತಿಲ್ಲ ಎಂದೇಳುವುದರಲ್ಲಿ ಅರ್ಥವಿಲ್ಲ. ಹೀಗಾಗಿ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತನ್ನ ನಿಲುವಿನಲ್ಲಿ ಗಟ್ಟಿಯಾಗಿ ನಿಲ್ಲುತ್ತಾರೆ ಎಂಬ ವಿಶ್ವಾಸವಿದೆ ಎಂದು ಹಸನ್ ಅಲಿ ಸಮಾ ಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಪಿಸಿಬಿ ಅಧ್ಯಕ್ಷರು ಈಗಾಗಲೇ ಹೇಳಿದಂತೆ, ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಲ್ಲಿ ನಡೆಯುವುದಾದರೆ, ಅದು ಪಾಕಿಸ್ತಾನದಲ್ಲೇ ನಡೆಯಲಿದೆ. ಭಾರತಕ್ಕೆ ಬರಲು ಇಷ್ಟವಿಲ್ಲದಿದ್ದರೆ ಬೇಡ. ನಾವು ಅವರಿಲ್ಲದೆ ಆಡುತ್ತೇವೆ.

ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಬೇಕು ಎಂಬುದಷ್ಟೇ ನಮ್ಮ ನಿಲುವು. ಭಾರತ ತಂಡ ಭಾಗವಹಿಸಲು ಬಯಸದಿದ್ದರೆ, ಕ್ರಿಕೆಟ್ ಮುಗಿದಿದೆ ಎಂದು ಅರ್ಥವಲ್ಲ. ಭಾರತವನ್ನು ಹೊರತುಪಡಿಸಿ ಇನ್ನೂ ಅನೇಕ ತಂಡಗಳಿವೆ. ಆ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ ಎಂದು ಹಸನ್ ಅಲಿ ಹೇಳಿದ್ದಾರೆ.

ಇದೀಗ ಹಸನ್ ಅಲಿ ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಅಲ್ಲದೆ ಭಾರತ ತಂಡವು ಚಾಂಪಿಯನ್ಸ್ ಟ್ರೋಫಿಯಿಂದ ಹಿಂದೆ ಸರಿದರೆ ಏನಾಗಲಿದೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಉತ್ತರ ಇಲ್ಲಿದೆ- ಚಾಂಪಿಯನ್ಸ್​ ಟ್ರೋಫಿಯಿಂದ ಟೀಮ್ ಇಂಡಿಯಾ ಹಿಂದೆ ಸರಿದರೆ, ಯಾವ ತಂಡಕ್ಕೆ ಚಾನ್ಸ್?

ಚಾಂಪಿಯನ್ಸ್​ ಟ್ರೋಫಿಯಲ್ಲಿ ಕಣಕ್ಕಿಳಿಯಲಿರುವ 8 ತಂಡಗಳು:

  1. ಭಾರತ
  2. ಪಾಕಿಸ್ತಾನ್
  3. ಸೌತ್ ಆಫ್ರಿಕಾ
  4. ನ್ಯೂಝಿಲೆಂಡ್
  5. ಅಫ್ಘಾನಿಸ್ತಾನ್
  6. ಇಂಗ್ಲೆಂಡ್
  7. ಬಾಂಗ್ಲಾದೇಶ್
  8. ಆಸ್ಟ್ರೇಲಿಯಾ
Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ