AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಆಟಗಾರರಿಗೆ ಗಂಭೀರ್ ಖಡಕ್ ಸೂಚನೆ

T20 World Cup 2026: ಬಹುನಿರೀಕ್ಷಿತ ಟಿ20 ವಿಶ್ವಕಪ್​​ಗೆ ಫೆಬ್ರವರಿ 7 ರಿಂದ ಶುರುವಾಗಲಿದ್ದು, ಮೊದಲ ಪಂದ್ಯಕ್ಕೆ ಅಹಮದಾಬಾದ್​​ನ ನರೇಂದ್ರ ಮೋದಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಫೈನಲ್ ಪಂದ್ಯವು ಮಾರ್ಚ್ 8 ರಂದು ನಡೆಯಲಿದೆ ಎಂದು ತಿಳಿದು ಬಂದಿದೆ. ಅದಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಸಂಪೂರ್ಣವಾಗಿ ಸದೃಢರಾಗಬೇಕೆಂದು ಭಾರತ ತಂಡ ಕೋಚ್ ಗೌತಮ್ ಗಂಭೀರ್ ಆಗ್ರಹಿಸಿದ್ದಾರೆ.

ಟೀಮ್ ಇಂಡಿಯಾ ಆಟಗಾರರಿಗೆ ಗಂಭೀರ್ ಖಡಕ್ ಸೂಚನೆ
Team India - Gautam Gambhir
ಝಾಹಿರ್ ಯೂಸುಫ್
|

Updated on: Nov 11, 2025 | 9:56 AM

Share

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯನ್ನು ಸೋತಿದ್ದ ಟೀಮ್ ಇಂಡಿಯಾ ಟಿ20 ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದೆ. ಈ ಪ್ರದರ್ಶನೊಂದಿಗೆ ಭಾರತ ತಂಡ ಟಿ20 ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿ ಗೆಲುವಿನ ಹೊರತಾಗಿಯೂ ಟೀಮ್ ಇಂಡಿಯಾ 2026ರ ಟಿ20 ವಿಶ್ವಕಪ್​ಗೆ ಸದೃಢವಾಗಿಲ್ಲ ಎಂದು ಕೋಚ್ ಗೌತಮ್ ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಗೌತಮ್ ಗಂಭೀರ್, ಟಿ20 ವಿಶ್ವಕಪ್​ಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿವೆ. ಇದಾಗ್ಯೂ ನಮ್ಮ ತಂಡವು ಫಿಟ್‌ನೆಸ್ ವಿಷಯದಲ್ಲಿ ‘ನಾವು ಬಯಸುವ ಸ್ಥಾನದಲ್ಲಿ’ ಇಲ್ಲ ಎಂದಿದ್ದಾರೆ. ಐಸಿಸಿಯಂತಹ ದೊಡ್ಡ ಟೂರ್ನಿಗಳನ್ನು ಆಡುವಾಗ ಹೆಚ್ಚಿನ ಒತ್ತಡವಿರುತ್ತದೆ. ಇಂತಹ ಸಂದರ್ಭಗಳಲ್ಲಿ ದೈಹಿಕ ಸದೃಢತೆ ಮುಖ್ಯ,

ದೈಹಿಕ ಸದೃಢತೆಯು ಆಟಗಾರರ ಮಾನಸಿಕ ಬಲದ ಮೇಲೆ ನೇರವಾಗಿ ಹೇಗೆ ಪರಿಣಾಮ ಬೀರುತ್ತದೆ. ಈ ಬಗ್ಗೆ ನಾನು ಟೀಮ್ ಇಂಡಿಯಾ ಆಟಗಾರರೊಂದಿಗೆ ಸಹ ಚರ್ಚಿಸಿತ್ತೇನೆ. ಅಲ್ಲದೆ ದೈಹಿಕವಾಗಿ ಮತ್ತಷ್ಟು ಫಿಟ್​ ಆಗಿರಬೇಕೆಂದು ಸೂಚಿಸಿರುವುದಾಗಿ ಗೌತಮ್ ಗಂಭೀರ್ ಹೇಳಿದ್ದಾರೆ.

ಇದೇ ವೇಳೆ ಮುಂಬರುವ ಟೆಸ್ಟ್ ಸರಣಿ ಬಗ್ಗೆ ಕೂಡ ಮಾತನಾಡಿದ ಗಂಭೀರ್, ಸೌತ್ ಆಫ್ರಿಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳ ಮೇಲೆ ಪ್ರಾಥಮಿಕ ಗಮನ ಹರಿಸಿದ್ದೇವೆ. ಏಕೆಂದರೆ ಈ ಪಂದ್ಯಗಳು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಸರಣಿಯ ಭಾಗವಾಗಿದೆ.

ಅದರಲ್ಲೂ ಟೆಸ್ಟ್ ಚಾಂಪಿಯನ್ ಪಟ್ಟ ಅಲಂಕರಿಸಿರುವ ಸೌತ್ ಆಫ್ರಿಕಾ ನಿಸ್ಸಂಶಯವಾಗಿ ಉತ್ತಮ ಕ್ರಿಕೆಟ್ ಆಡುತ್ತಿದ್ದಾರೆ. ಹೀಗಾಗಿ ಅವರೊಂದಿಗೆ ಗೆಲ್ಲುವುದು ಬಹಳ ಮುಖ್ಯ. ಅದರಲ್ಲೂ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ ಸರಣಿಯ ಭಾಗವಾಗಿರುವುರಿಂದ ಈ ಎರಡು ಪಂದ್ಯಗಳು ಎಷ್ಟು ಮುಖ್ಯ ಎಂದು ನಮಗೆ ತಿಳಿದಿದೆ ಎಂದು ಗಂಭೀರ್ ಹೇಳಿದ್ದಾರೆ.

ಈ ಟೆಸ್ಟ್ ಸರಣಿಯ ಬಳಿಕ ನಮ್ಮ ಗಮನವು ಟಿ20 ವಿಶ್ವಕಪ್ ಆಗಿರುತ್ತದೆ. ತವರಿನಲ್ಲಿ ವಿಶ್ವಕಪ್ ನಡೆಯುತ್ತಿರುವುದರಿಂದ ಈ ಟೂರ್ನಿ ಕೂಡ ನಮಗೆ ಬಹಳ ಮುಖ್ಯ. ಪ್ರಸ್ತುತ ಸನ್ನಿವೇಶದ ಬಗ್ಗೆ ಹೇಳುವುದಾದರೆ, ಫಿಟ್ನೆಸ್ ದೃಷ್ಟಿಕೋನದಿಂದ, ನಾವು ಇನ್ನೂ ಟಿ20 ವಿಶ್ವಕಪ್‌ಗಾಗಿ ಸಂಪೂರ್ಣ ಸಿದ್ಧವಾಗಿಲ್ಲ.

ಇದನ್ನೂ ಓದಿ: IPL 2026: ಲೈಂಗಿನ ದೌರ್ಜನ್ಯ ಪ್ರಕರಣ: RCB ಆಟಗಾರ ಕಿಕ್ ಔಟ್ ಖಚಿತ

ನಾವು ಟೀಮ್ ಇಂಡಿಯಾ ಮತ್ತಷ್ಟು ಚುರುಕಾಗಿರಲು ಮತ್ತು ಫಿಟ್ ಆಗಿರಲು ಬಯಸುತ್ತೇವೆ. ಫಿಟ್ ಆಗಿದ್ದಷ್ಟೂ, ಮಾನಸಿಕವಾಗಿ ಹೆಚ್ಚು ಬಲಶಾಲಿಯಾಗುತ್ತೇವೆ. ಇನ್ನುಳಿದಿರುವುದು ಕೇವಲ ಮೂರು ತಿಂಗಳುಗಳು ಮಾತ್ರ. ಅದಕ್ಕೂ ಮುನ್ನ ಎಲ್ಲರೂ ತಮ್ಮ ಫಿಟ್​ನೆಸ್ ಕಡೆಗೆ ಹೆಚ್ಚಿನ ಗಮನ ಹರಿಸಬೇಕೆಂದು ಗೌತಮ್ ಗಂಭೀರ್ ಟೀಮ್ ಇಂಡಿಯಾ ಆಟಗಾರರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ