AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs West Indies: ಭಾರತ-ವೆಸ್ಟ್ ಇಂಡೀಸ್ ಸರಣಿ ಆರಂಭಕ್ಕೂ ಮುನ್ನ ಅಭಿಮಾನಿಗಳಿಗೆ ಸಿಕ್ತು ಬಂಪರ್ ಸುದ್ದಿ: ಏನದು?

ವೆಸ್ಟ್ ಬೆಂಗಾಲ್ ಸರ್ಕಾರ (West Bengal government) ಭಾರತ ಹಾಗೂ ವೆಸ್ಟ್ ಇಂಡೀಸ್ ಟಿ20 ಸರಣಿ ವೀಕ್ಷಿಸಲು ಶೇ. 72 ರಷ್ಟು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಟ್ಟಿದೆ. ಫೆಬ್ರವರಿ 16 ರಂದು ಮೊದಲ ಟಿ20 ಪಂದ್ಯ ನಡೆಯಲಿದೆ.

India vs West Indies: ಭಾರತ-ವೆಸ್ಟ್ ಇಂಡೀಸ್ ಸರಣಿ ಆರಂಭಕ್ಕೂ ಮುನ್ನ ಅಭಿಮಾನಿಗಳಿಗೆ ಸಿಕ್ತು ಬಂಪರ್ ಸುದ್ದಿ: ಏನದು?
India vs West Indies
TV9 Web
| Edited By: |

Updated on: Feb 01, 2022 | 11:26 AM

Share

ಬಹುನಿರೀಕ್ಷಿತ ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವಣ ಸರಣಿ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಫೆಬ್ರವರಿ 6 ರಂದು ಮೊದಲ ಏಕದಿನ ಪಂದ್ಯ ನಡೆಯುವ ಮೂಲಕ ಸರಣಿಗೆ ಚಾಲನೆ ಸಿಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿ ಬಳಿಕ ಟಿ20 ಸರಣಿ ನಡೆಯಲಿದೆ. ಇದಕ್ಕೂ ಮುನ್ನ ಅಭಿಮಾನಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದೆ. ಕೋಲ್ಕತ್ತಾದಲ್ಲಿ ಆಯೋಜನೆ ಮಾಡಿರುವ ಮೂರು ಪಂದ್ಯಗಳ ಟಿ20 ಸರಣಿಗೆ ಪ್ರೇಕ್ಷಕರಿಗೆ ಅನುಮತಿ ನೀಡಲಾಗಿದೆ. ವೆಸ್ಟ್ ಬೆಂಗಾಲ್ ಸರ್ಕಾರ (West Bengal government) ಇಂಡೋ-ವಿಂಡೀಸ್ ಟಿ20 ಸರಣಿ ವೀಕ್ಷಿಸಲು ಶೇ. 72 ರಷ್ಟು ಪ್ರೇಕ್ಷಕರಿಗೆ ಅವಕಾಶ ಮಾಡಿಕೊಟ್ಟಿದೆ. ಫೆಬ್ರವರಿ 16 ರಂದು ಮೊದಲ ಟಿ20 ಪಂದ್ಯ ನಡೆಯಲಿದೆ. ಸೋಮವಾರ ಈ ಬಗ್ಗೆ ಮಾಹಿತಿ ನೀಡಿರುವ ಸರ್ಕಾರ, “ಎಲ್ಲಾ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾ ಚಟುವಟಿಕೆಗಳ ಸ್ಥಳದ ಸಾಮರ್ಥ್ಯವನ್ನು ಶೇಕಡಾ 75 ರಷ್ಟು ಏರಿಸಲಾಗಿದೆ,” ಎಂದು ಹೇಳಿದೆ.

ಸದ್ಯ ಏಕದಿನ ಸರಣಿಗಾಗಿ ಭಾರತೀಯ ಆಟಗಾರರು ಅಹ್ಮದಾಬಾದ್​ಗೆ ತಲುಪಿದ್ದಾರೆ. ಇಲ್ಲಿ ಮೊದಲಿಗೆ ಮೂರು ದಿನಗಳ ಕ್ವಾರಂಟೈನ್ ಪೂರೈಸಲಿದ್ದಾರೆ. ಅದಾದ ಬಳಿಕ ಬಯೋಬಬಲ್‌ಗೆ ಸೇರ್ಪಡೆಯಾಗಲಿದ್ದಾರೆ. ನಂತರ ಅಭ್ಯಾಸ ಆರಂಭಿಸಲಿದ್ದಾರೆ. ಇತ್ತ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ರೋಚಕ ಗೆಲುವು ಸಾಧಿಸಿ ಸರಣಿ ವಶಪಡಿಸಿಕೊಂಡ ಬೆನ್ನಲ್ಲೇ ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡ ಇದೀಗ ಭಾರತಕ್ಕೆ ಪ್ರಯಾಣ ಬೆಳೆಸಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಆಟಗಾರರು ಭಾರತದ ಫ್ಲೈಟ್ ಏರುತ್ತಿರುವ ಫೋಟೋವನ್ನು ಹಂಚಿಕೊಂಡಿದೆ.

ಭಾರತ ಹಾಗೂ ವೆಸ್ಟ್ ಇಂಡೀಸ್ ತಂಡಗಳ ನಡುವಣ ಈ ಸರಣಿಯ ಮೂರು ಏಕದಿನ ಪಂದ್ಯಗಳನ್ನು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೊಟೇರಾದ ಸರ್ದಾರ್‌ ಪಟೇಲ್‌ ಕ್ರೀಡಾಂಗಣ ನರೇಂದ್ರ ಮೋದಿ ಸ್ಟೇಡಿಯಂ ಆಗಿ ಹೊಸ ವಿನ್ಯಾಸ ಪಡೆದ ಬಳಿಕ ಇದೇ ಮೊದಲ ಬಾರಿ ಏಕದಿನ ಕ್ರಿಕೆಟ್‌ ಸರಣಿಗೆ ಆತಿಥ್ಯ ವಹಿಸುತ್ತಿರುವುದು ವಿಶೇಷವಾಗಿದೆ. ಇದಾದ ಬಳಿಕ ಟಿ20 ಸರಣಿಯ 3 ಪಂದ್ಯಗಳು ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಆಯೋಜನೆಯಾಗಲಿದೆ.

ಐಪಿಎಲ್​ಗೆ ಶೇ. 25 ರಷ್ಟು ಪ್ರೇಕ್ಷಕರಿಗೆ ಅನುಮತಿ?:

ಮಿಲಿಯನ್ ಡಾಲರ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ 15ನೇ ಆವೃತ್ತಿ ವೀಕ್ಷಣೆಗೆ ಶೇ. 25 ರಷ್ಟು ಪ್ರೇಕ್ಷಕರಿಗೆ ಅನುಮತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಐಪಿಎಲ್​ನ ಎಲ್ಲ ಲೀಗ್ ಪಂದ್ಯಗಳು ಮಹಾರಾಷ್ಟ್ರದಲ್ಲಿ ನಡೆದರೆ ಪ್ಲೇ ಆಫ್ ಪಂದ್ಯಗಳು ಅಹ್ಮದಾಬಾದ್​ನಲ್ಲಿ ಜರುಗಲಿದೆ. ಸದ್ಯ ಮಹರಾರಾಷ್ಟ್ರ ಸರ್ಕಾರದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಐಪಿಎಲ್ ವೇಳೆ ಕೊರೊನಾ  ಸಂಖ್ಯೆ ಇಳಿಮುಖವಾಗಿದ್ದರೆ ಶೇ. 25 ರಷ್ಟು ಜನರಿಗೆ ಪಂದ್ಯ ವೀಕ್ಷಿಸಲು ಅನಮತಿ ನೀಡುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೆ ಮುಂಬೈ ಕ್ರೀಡಾಂಗಣದ ಆಸುಪಾಸಿನಲ್ಲೇ ಆಟಗಾರರಿಗೆ ಕ್ವಾರಂಟೈನ್ ಆಗಲು ಫೈವ್ ಸ್ಟಾರ್ ಹೊಟೇಲ್​ಗಳು ಕೂಡ ವ್ಯವಸ್ಥೆ ಆಗಲಿದೆ. ಹೀಗಾಗಿ ಐಪಿಎಲ್ 2022ರ ಎಲ್ಲ ಲೀಗ್ ಪಂದ್ಯಗಳು ಮುಂಬೈನಲ್ಲೇ ನಡೆಯಲಿದೆಯಂತೆ. ಫೆಬ್ರವರಿಯಲ್ಲಿ ನಡೆಯಲಿರುವ ಮೆಗಾ ಹರಾಜಿನ ಬಳಿಕ ಬಿಸಿಸಿಐ ಈ ಮಾಹಿತಿಯನ್ನು ಅಧಿಕೃತವಾಗಿ ಘೋಷಿಸಲಿದೆ ಎಂದು ವರದಿಯಾಗಿದೆ.

Ranji Trophy 2021-22: ರಣಜಿ ಟ್ರೋಫಿ 2022: ಫೆ. 16 ರಿಂದ ಮಾ. 5 ರವರೆಗೆ 9 ತಾಣಗಳಲ್ಲಿ ಪಂದ್ಯ ಆಯೋಜನೆ

Jason Holder: ಭಾರತವನ್ನು ಅವರ ನೆಲದಲ್ಲೇ ಸೋಲಿಸುತ್ತೇವೆ: ಭಾರತದ ಫ್ಲೈಟ್ ಏರುವ ಮುನ್ನ ವಿಂಡೀಸ್ ಆಟಗಾರನ ಮಾತು

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು