AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

34 ವರ್ಷಗಳ ಕಾಯುವಿಕೆ ಅಂತ್ಯ: ಪಾಕ್ ಪಡೆಯನ್ನು ಮಕಾಡೆ ಮಲಗಿಸಿದ ವೆಸ್ಟ್ ಇಂಡೀಸ್

Pakistan vs West Indies Test: ಪಾಕಿಸ್ತಾನ್ ಮತ್ತು ವೆಸ್ಟ್ ಇಂಡೀಸ್ ನಡುವಣ 2 ಪಂದ್ಯಗಳ ಟೆಸ್ಟ್ ಸರಣಿ ಮುಕ್ತಾಯಗೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ತಂಡ 127 ರನ್​ಗಳ ಜಯ ಸಾಧಿಸಿದರೆ, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ 120 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಸರಣಿಯನ್ನು ಡ್ರಾ ಮಾಡಿಕೊಳ್ಳುವಲ್ಲಿ ವಿಂಡೀಸ್ ಪಡೆ ಯಶಸ್ವಿಯಾಗಿದೆ.

34 ವರ್ಷಗಳ ಕಾಯುವಿಕೆ ಅಂತ್ಯ: ಪಾಕ್ ಪಡೆಯನ್ನು ಮಕಾಡೆ ಮಲಗಿಸಿದ ವೆಸ್ಟ್ ಇಂಡೀಸ್
West Indies
ಝಾಹಿರ್ ಯೂಸುಫ್
|

Updated on: Jan 27, 2025 | 11:59 AM

Share

ಬರೋಬ್ಬರಿ 34 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿ ವೆಸ್ಟ್ ಇಂಡೀಸ್ ತಂಡ ಟೆಸ್ಟ್ ಪಂದ್ಯ ಗೆದ್ದುಕೊಂಡಿದೆ. ಕೊನೆಯ ಬಾರಿ ಪಾಕ್​ನಲ್ಲಿ ವಿಂಡೀಸ್ ಪಡೆ ಟೆಸ್ಟ್ ಗೆದ್ದಿದ್ದು 1990 ರಲ್ಲಿ. ಇದಾದ ಬಳಿಕ ಪಾಕಿಸ್ತಾನ್ ​ ಪಿಚ್​ನಲ್ಲಿ ವೆಸ್ಟ್ ಇಂಡೀಸ್ ಪಾಲಿಗೆ ಗೆಲುವು ಮರೀಚಿಕೆಯಾಗಿತ್ತು. ಇದೀಗ ಮೂರು ದಶಕಗಳ ಬಳಿಕ ಗೆಲುವು ದಾಖಲಿಸುವಲ್ಲಿ ಕೆರಿಬಿಯನ್​ ಪಡೆ ಯಶಸ್ವಿಯಾಗಿದೆ.

ಮುಲ್ತಾನ್​​ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಕ್ರೈಗ್ ಬ್ರಾಥ್‌ವೈಟ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ವಿಂಡೀಸ್ ನಿರೀಕ್ಷಿತ ಆರಂಭ ಪಡೆಯಲಿಲ್ಲ. ಅಲ್ಲದೆ ಕೇವಲ 58 ರನ್​ಗಳಿಗೆ 8 ವಿಕೆಟ್​ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಗೆ ಒಳಗಾಗಿತ್ತು.

ಈ ಹಂತದಲ್ಲಿ ಕಣಕ್ಕಿಳಿದ ಗುಡಾಕೇಶ್ ಮೋಟಿ (55) ಅರ್ಧಶತಕ ಬಾರಿಸಿ ಮಿಂಚಿದರು. ಇನ್ನು ಜೋಮೆಲ್ ವಾರಿಕನ್ 36 ರನ್​ಗಳ ಕೊಡುಗೆ ನೀಡಿದರು. ಬೌಲರ್​ಗಳ ಈ ಉಪಯುಕ್ತ ಕಾಣಿಕೆಯೊಂದಿಗೆ ವೆಸ್ಟ್ ಇಂಡೀಸ್ ತಂಡವು ಮೊದಲ ಇನಿಂಗ್ಸ್​ನಲ್ಲಿ 163 ರನ್ ಕಲೆಹಾಕಿತು. ಪಾಕಿಸ್ತಾನ್ ಪರ ನೊಮಾನ್ ಅಲಿ 41 ರನ್ ನೀಡಿ 6 ವಿಕೆಟ್ ಪಡೆದರೆ, ಸಾಜಿದ್ ಖಾನ್ 2 ವಿಕೆಟ್ ಕಬಳಿಸಿ ಮಿಂಚಿದರು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಪಾಕಿಸ್ತಾನ್ ತಂಡ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ. ಸ್ಪಿನ್ ಸ್ನೇಹಿ ಪಿಚ್​ನಲ್ಲಿ ರನ್​ಗಳಿಸಲು ಪರದಾಡಿದ ಪಾಕ್ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು. ಇದರ ನಡುವೆ ವಿಕೆಟ್ ಕೀಪರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ 49 ರನ್ ಬಾರಿಸಿದ್ದು ಗರಿಷ್ಠ ಸ್ಕೋರ್.

ಇತ್ತ ಸ್ಪಿನ್ ಮೋಡಿ ಮಾಡಿದ ಗುಡಾಕೇಶ್ ಮೋಟಿ 3 ವಿಕೆಟ್ ಪಡೆದರೆ, ಜೋಮೆಲ್ ವಾರಿಕನ್ 4 ವಿಕೆಟ್ ಕಬಳಿಸಿದರು. ಪರಿಣಾಮ ಪಾಕಿಸ್ತಾನ್ ತಂಡವು ಮೊದಲ ಇನಿಂಗ್ಸ್​ನಲ್ಲಿ 154 ರನ್​ಗಳಿಗೆ ಆಲೌಟ್ ಆಯಿತು.

ದ್ವಿತೀಯ ಇನಿಂಗ್ಸ್​:

ಪ್ರಥಮ ಇನಿಂಗ್ಸ್​ನಲ್ಲಿನ 9 ರನ್​​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್ ಪರ ನಾಯಕ ಕ್ರೈಗ್ ಬ್ರಾಥ್‌ವೈಟ್ (54) ಅರ್ಧಶತಕ ಬಾರಿಸಿ ಮಿಂಚಿದರು.

ಇನ್ನು ಅಮೀರ್ ಜಾಂಗೂ 30 ರನ್​ಗಳ ಕೊಡುಗೆ ನೀಡಿದರೆ, ವಿಕೆಟ್ ಕೀಪರ್ ಬ್ಯಾಟರ್ ಟೆವಿನ್ ಇಮ್ಲಾಚ್ 35 ರನ್ ಸಿಡಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 244 ರನ್​ ಕಲೆಹಾಕಿತು. ಪಾಕಿಸ್ತಾನ್ ಪರ ನೊಮಾನ್ ಅಲಿ ಹಾಗೂ ಸಾಜಿದ್ ಖಾನ್ ತಲಾ 4 ವಿಕೆಟ್ ಕಬಳಿಸಿದರು.

254 ರನ್​ಗಳ ಗುರಿ:

ಪ್ರಥಮ ಇನಿಂಗ್ಸ್​ನಲ್ಲಿನ 9 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 254 ರನ್​​ಗಳ ಗುರಿ ಪಡೆದ ಪಾಕಿಸ್ತಾನ್ ಬ್ಯಾಟರ್​ಗಳು ರನ್​ ಗಳಿಸುವುದಿರಲಿ, ಜೋಮೆಲ್ ವಾರಿಕನ್ ಸ್ಪಿನ್ ಮುಂದೆ ಕ್ರೀಸ್ ಕಚ್ಚಿ ನಿಲ್ಲಲು ಕೂಡ ಪರದಾಡಿದರು. ಪರಿಣಾಮ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 133 ರನ್​ಗಳಿಗೆ ಆಲೌಟ್ ಆಗಿ 120 ರನ್​ಗಳಿಂದ ಹೀನಾಯವಾಗಿ ಸೋಲೊಪ್ಪಿಕೊಂಡಿದೆ.

ಈ ಭರ್ಜರಿ ಗೆಲುವಿನೊಂದಿಗೆ ವೆಸ್ಟ್ ಇಂಡೀಸ್ ತಂಡವು ಪಾಕಿಸ್ತಾನದಲ್ಲಿನ 34 ವರ್ಷಗಳ ಸೋಲಿನ ಸರಪಳಿಯನ್ನು ಕಳಚಿಕೊಂಡಿದೆ. ಅಲ್ಲದೆ 2 ಪಂದ್ಯಗಳ ಸರಣಿಯನ್ನು 1-1 ಅಂತರದಿಂದ ಡ್ರಾ ಮಾಡಿಕೊಂಡಿದೆ.

ಪಾಕಿಸ್ತಾನ್ ಪ್ಲೇಯಿಂಗ್ 11: ಶಾನ್ ಮಸೂದ್ (ನಾಯಕ) , ಮುಹಮ್ಮದ್ ಹುರ್ರೈರಾ , ಬಾಬರ್ ಆಝಂ , ಕಮ್ರಾನ್ ಗುಲಾಮ್ , ಸೌದ್ ಶಕೀಲ್ , ಮೊಹಮ್ಮದ್ ರಿಝ್ವಾನ್ ( ವಿಕೆಟ್ ಕೀಪರ್ ) , ಸಲ್ಮಾನ್ ಅಘಾ , ಸಾಜಿದ್ ಖಾನ್ , ನೊಮಾನ್ ಅಲಿ , ಕಾಶಿಫ್ ಅಲಿ , ಅಬ್ರಾರ್ ಅಹ್ಮದ್.

ಇದನ್ನೂ ಓದಿ: ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ವಿಶೇಷ ದಾಖಲೆ ಬರೆದ ಫಾಫ್ ಡುಪ್ಲೆಸಿಸ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕ್ರೈಗ್ ಬ್ರಾಥ್‌ವೈಟ್ (ನಾಯಕ) , ಮೈಕೈಲ್ ಲೂಯಿಸ್ , ಅಮೀರ್ ಜಾಂಗೂ , ಕವೆಮ್ ಹಾಡ್ಜ್ , ಅಲಿಕ್ ಅಥನಾಝ್ , ಜಸ್ಟಿನ್ ಗ್ರೀವ್ಸ್ , ಟೆವಿನ್ ಇಮ್ಲಾಚ್ (ವಿಕೆಟ್ ಕೀಪರ್) , ಕೆವಿನ್ ಸಿಂಕ್ಲೇರ್ , ಗುಡಾಕೇಶ್ ಮೋಟಿ , ಕೆಮರ್ ರೋಚ್ , ಜೋಮೆಲ್ ವಾರಿಕನ್.

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​