AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AUS vs WI: ‘ಅಂಪೈರ್‌ಗೂ ದಂಡ ವಿಧಿಸಿ’; ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ವಿಂಡೀಸ್ ನಾಯಕ

West Indies Captain Blasts Umpire : ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಸೋಲು ಅನುಭವಿಸಿತು. ಈ ಪಂದ್ಯದಲ್ಲಿ ಮೂರನೇ ಅಂಪೈರ್ ಆಡ್ರಿಯನ್ ಹೋಲ್ಡ್‌ಸ್ಟಾಕ್ ಅವರ ವಿವಾದಾತ್ಮಕ ತೀರ್ಪುಗಳಿಂದ ವೆಸ್ಟ್ ಇಂಡೀಸ್ ತಂಡ ತೀವ್ರ ಅಸಮಾಧಾನಗೊಂಡಿದೆ. ವೆಸ್ಟ್ ಇಂಡೀಸ್ ನಾಯಕ ರೋಸ್ಟನ್ ಚೇಸ್ ಅವರು ಅಂಪೈರ್‌ನ ತಪ್ಪು ತೀರ್ಪುಗಳನ್ನು ತೀವ್ರವಾಗಿ ಖಂಡಿಸಿದ್ದು, ಅಂಪೈರ್‌ಗಳಿಗೂ ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿದ್ದಾರೆ.

AUS vs WI: ‘ಅಂಪೈರ್‌ಗೂ ದಂಡ ವಿಧಿಸಿ’; ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ವಿಂಡೀಸ್ ನಾಯಕ
Aus Vs Wi
ಪೃಥ್ವಿಶಂಕರ
|

Updated on: Jun 28, 2025 | 7:53 PM

Share

ಪ್ರಸ್ತುತ ವೆಸ್ಟ್ ಇಂಡೀಸ್ ಹಾಗೂ ಆಸ್ಟ್ರೇಲಿಯಾ (Australia vs West Indies) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಕೆನ್ಸಿಂಗ್ಟನ್ ಓವಲ್ ಬಾರ್ಬಡೋಸ್​ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ 159 ರನ್​ಗಳ ಭಾರಿ ಜಯ ದಾಖಲಿಸಿದೆ. ವಾಸ್ತವವಾಗಿ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ಮುಗಿಯುವವರೆಗೂ ವಿಂಡೀಸ್ ತಂಡ ಮೇಲುಗೈ ಸಾಧಿಸಿತ್ತು. ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಯಿತು. ಆದರೆ ಪಂದ್ಯ ಮುಗಿದ ಬಳಿಕ ಮಾತನಾಡಿರುವ ವಿಂಡೀಸ್ ತಂಡದ ನಾಯಕ ರೋಸ್ಟನ್ ಚೇಸ್ (Roston Chase), ಪಂದ್ಯದಲ್ಲಿ ಮೂರನೇ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದ ಆಡ್ರಿಯನ್ ಹೋಲ್ಡ್‌ಸ್ಟಾಕ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದು, ಆಟಗಾರರಂತೆ ತಪ್ಪು ತೀರ್ಪುಗಳನ್ನು ನೀಡುವ ಅಂಪೈರ್​ಗೂ ದಂಡ ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಅಂಪೈರ್ ವಿರುದ್ಧ ರೋಸ್ಟನ್ ಚೇಸ್ ಅಸಮಾಧಾನ

ವಾಸ್ತವವಾಗಿ ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಈ ಪಂದ್ಯದಲ್ಲಿ, ಮೂರನೇ ಅಂಪೈರ್ ಆಡ್ರಿಯನ್ ಹೋಲ್ಡ್‌ಸ್ಟಾಕ್ ಅವರು ಒಟ್ಟು 5 ವಿವಾದಾತ್ಮಕ ತೀರ್ಪುಗಳನ್ನು ನೀಡಿದ್ದರು. ಇವುಗಳಲ್ಲಿ 4 ತೀರ್ಪುಗಳು ವೆಸ್ಟ್ ಇಂಡೀಸ್ ತಂಡದ ವಿರುದ್ಧ ಆಗಿದ್ದವು. ಅಂಪೈರ್ ಅವರ ಈ ವಿವಾದಾತ್ಮಕ ತೀರ್ಪು ಪಂದ್ಯದ ಫಲಿತಾಂಶದಲ್ಲಿ ಪ್ರಮುಖ ಪಾತ್ರ ವಹಿಸಿತು. ಇದರಲ್ಲಿ ಒಂದು ನಿರ್ಧಾರ ವೆಸ್ಟ್ ಇಂಡೀಸ್ ನಾಯಕ ರೋಸ್ಟನ್ ಚೇಸ್ ವಿರುದ್ಧವೂ ಆಗಿತ್ತು.

ಅಂಪೈರ್​ಗೆ ಶಿಕ್ಷೆ ಯಾಕಿಲ್ಲ?

ಇಂತಹ ಪರಿಸ್ಥಿತಿಯಲ್ಲಿ ಪಂದ್ಯ ಮುಗಿದ ಬಳಿಕ ಮಾತನಾಡಿದ ವೆಸ್ಟ್ ಇಂಡೀಸ್‌ನ ನಾಯಕ ರೋಸ್ಟನ್ ಚೇಸ್, ‘ಆಟಗಾರರು ನಿಯಮಗಳನ್ನು ಮುರಿದಾಗ, ನಮಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ, ಕೆಲವೊಮ್ಮೆ ನಮ್ಮನ್ನು ನಿಷೇಧಿಸಲಾಗುತ್ತದೆ. ಆದರೆ ತಪ್ಪು ನಿರ್ಧಾರಗಳನ್ನು ನೀಡುವ ಅಂಪೈರ್‌ಗೆ ಎಂದಿಗೂ ಏನೂ ಆಗುವುದಿಲ್ಲ. ಅವರು ತಪ್ಪು ನಿರ್ಧಾರ ಅಥವಾ ಪ್ರಶ್ನಾರ್ಹ ನಿರ್ಧಾರವನ್ನು ನೀಡಿದ ಹೊರತಾಗಿಯೂ ಅವರನ್ನು ಅಂಪೈರ್ ಆಗಿ ಮುಂದುವರೆಸಲಾಗುತ್ತದೆ.’ ಎಂದು ಹೇಳುವ ಮೂಲಕ ಬಹಿರಂಗವಾಗಿಯೇ ಅಂಪೈರ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಹಾಗೆಯೇ ಆಟಗಾರರಂತೆ ಅಂಪೈರ್​ಗೂ ತಪ್ಪು ನಿರ್ಧಾರಗಳಿಗೆ ಐಸಿಸಿ ಶಿಕ್ಷೆ ವಿಧಿಸಬೇಕು ಎಂಬುದು ಚೇಸ್ ಅವರ ಅಭಿಪ್ರಾಯವಾಗಿದೆ.

‘ಅಪ್ರಾಪ್ತೆಯೂ ಸೇರಿ 11 ಮಹಿಳೆಯರ ಮೇಲೆ ಅತ್ಯಾಚಾರ’; ವಿಂಡೀಸ್ ಸ್ಟಾರ್ ಕ್ರಿಕೆಟಿಗನ ಮೇಲೆ ಗಂಭೀರ ಆರೋಪ

ಪಂದ್ಯ ಹೀಗಿತ್ತು

ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಉತ್ತಮ ಆರಂಭ ಪಡೆದುಕೊಂಡಿತು. ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾವನ್ನು 180 ರನ್‌ಗಳಿಗೆ ಆಲೌಟ್ ಮಾಡಿದ್ದ ವೆಸ್ಟ್ ಇಂಡೀಸ್, ಮೊದಲ ಇನ್ನಿಂಗ್ಸ್‌ನಲ್ಲಿ 190 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಕೇವಲ 10 ರನ್‌ಗಳ ಮುನ್ನಡೆ ಪಡೆದುಕೊಂಡಿತು. ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ಬಲಿಷ್ಠ ಆಟವಾಡಿ 310 ರನ್‌ ಕಲೆಹಾಕಿತು. ಕೊನೆಯಲ್ಲಿ ಗೆಲುವಿಗೆ 301 ರನ್​ಗಳ ಗುರಿ ಪಡೆದ ವೆಸ್ಟ್ ಇಂಡೀಸ್ 141 ರನ್‌ಗಳಿಗೆ ಆಲೌಟ್ ಆಗುವ ಮೂಲಕ ಪಂದ್ಯದಲ್ಲಿ ಸೋಲನುಭವಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!