AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಆಸ್ಟ್ರೇಲಿಯಾ ಬ್ಯಾಟ್ಸ್​ಮನ್​ಗೆ ಎಚ್ಚರಿಕೆ ನೀಡಿದ ಪೊಲಾರ್ಡ್

West Indies vs Australia 3rd ODI: ಈ ಹಿಂದೆ ಕಪಿಲ್ ದೇವ್ ಕೂಡ ಮಂಕಡಿಂಗ್ ರನೌಟ್ ಮಾಡಿ ಗಮನ ಸೆಳೆದಿದ್ದರು. 1991-92 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ನಡೆದ ಏಕದಿನ ಪಂದ್ಯದ ವೇಳೆ ನಾನ್​ಸ್ಟ್ರೈಕರ್ ತುದಿಯಲ್ಲಿದ್ದ ಪೀಟರ್ ಕರ್ಸ್ಟೆನ್ ಬೌಲ್ ಮಾಡುವ ಮುನ್ನ ಕ್ರೀಸ್ ಬಿಡುತ್ತಿದ್ದರು.

Viral Video: ಆಸ್ಟ್ರೇಲಿಯಾ ಬ್ಯಾಟ್ಸ್​ಮನ್​ಗೆ ಎಚ್ಚರಿಕೆ ನೀಡಿದ ಪೊಲಾರ್ಡ್
Kieron Pollard
TV9 Web
| Edited By: |

Updated on:Jul 27, 2021 | 6:54 PM

Share

ಕ್ರಿಕೆಟ್ ಅಂಗಳದಲ್ಲಿ ಮಂಕಡಿಂಗ್ ರನೌಟ್ ಸದಾ ಸುದ್ದಿಯಲ್ಲಿರುತ್ತೆ. ಈ ಹಿಂದೆ ರವಿಚಂದ್ರನ್ ಅಶ್ವಿನ್ ಶ್ರೀಲಂಕಾ ವಿರುದ್ದ ಹಾಗೂ ಐಪಿಎಲ್​ನಲ್ಲಿ ಮಂಕಡಿಂಗ್ ರನೌಟ್ ಮಾಡಿ ಗಮನ ಸೆಳೆದಿದ್ದರು. ಅಶ್ವಿನ್ ಅವರ ನಡೆಗೆ ಪರ-ವಿರೋಧಗಳು ವ್ಯಕ್ತವಾಗಿದ್ದವು. ಆದರೆ ಕ್ರಿಕೆಟ್ ನಿಯಮಗಳ ಪ್ರಕಾರ ಮಂಕಡಿಂಗ್ ರನೌಟ್ ಮೂಲಕ ಬ್ಯಾಟ್ಸ್​ಮನ್​ನ್ನು ವಜಾಗೊಳಿಸಬಹುದು. ಆದರೆ ಅದಕ್ಕೂ ಮುನ್ನ ಬ್ಯಾಟ್ಸ್​ಮನ್​​ಗಳಿಗೆ ಎಚ್ಚರಿಕೆ ನೀಡುವುದು ಕ್ರೀಡಾ ಸ್ಪೂರ್ತಿ ಎಂದು ಪರಿಗಣಿಸಲಾಗುತ್ತದೆ. ಇದೀಗ ಮತ್ತೊಮ್ಮೆ ಮಂಕಡಿಂಗ್ ಎಚ್ಚರಿಕೆ ಸುದ್ದಿಯಲ್ಲಿದೆ. ಆಸ್ಟ್ರೇಲಿಯಾ ವಿರುದ್ದದ 3ನೇ ಏಕದಿನ ಪಂದ್ಯದ ವೇಳೆ ವೆಸ್ಟ್ ಇಂಡೀಸ್ ನಾಯಕ ಕೀರನ್ ಪೊಲಾರ್ಡ್​ ಅವರಿಗೆ ಮಂಕಡಿಂಗ್ ರನೌಟ್ ಮಾಡುವ ಅವಕಾಶ ಲಭಿಸಿತ್ತು.

ಸಾಮಾನ್ಯವಾಗಿ ಮಧ್ಯಮ ವೇಗದಲ್ಲಿ ಬೌಲಿಂಗ್ ಮಾಡುವ ಪೊಲಾರ್ಡ್ ಈ ಪಂದ್ಯದಲ್ಲಿ ಆಫ್ ಸ್ಪಿನ್ನರ್ ಆಗಿ ಚೆಂಡೆಸೆದಿದ್ದರು. ಹೀಗೆ ಚೆಂಡೆಸೆಯುವ ಮುನ್ನವೇ ಆಸೀಸ್ ಬ್ಯಾಟ್ಸ್​ಮನ್ ಮಾಥ್ಯೂ ವೇಡ್ ಕ್ರೀಸ್ ಬಿಟ್ಟಿದ್ದರು. ಇದನ್ನು ಗಮನಿಸಿದ ಪೊಲಾರ್ಡ್ ಚೆಂಡೆಸದಿರಲಿಲ್ಲ. ತಕ್ಷಣವೇ ಎಚ್ಚೆತ್ತುಕೊಂಡ ವೇಡ್ ಎಡಗಾಲನ್ನು ಹಿಂದಕ್ಕಿಟ್ಟು ಕ್ರೀಸ್ ಸೇರಿಕೊಂಡರು. ಅತ್ತ ಔಟ್ ಮಾಡುವ ಅವಕಾಶ ಹೊಂದಿದ್ದರೂ ಪೊಲಾರ್ಡ್​ ವೇಡ್​ಗೆ ಎಚ್ಚರಿಕೆ ನೀಡಿದರು. ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

2019ರ ಐಪಿಎಲ್​ನಲ್ಲಿ ಅಶ್ವಿನ್ ರಾಜಸ್ಥಾನ್ ರಾಯಲ್ಸ್ ಬ್ಯಾಟ್ಸ್‌ಮನ್ ಜೋಸ್ ಬಟ್ಲರ್‌ನನ್ನು ಮಂಕಡಿಂಗ್ ಮಾಡಿ ಔಟ್ ಮಾಡಿದ್ದರು. ಈ ಬಗ್ಗೆ ವ್ಯಾಪಕ ಆಕ್ರೋಶಗಳು ವ್ಯಕ್ತವಾಗಿದ್ದವು. ಇದಾಗ್ಯೂ ಅಂದು ಈ ಅಶ್ವಿನ್ ನಡೆ ಬಗ್ಗೆ ಪ್ರತಿಕ್ರಿಯಿಸಿದ್ದ ಲೆಜೆಂಡ್ ಕಪಿಲ್ ದೇವ್ ಬೆಂಬಲ ವ್ಯಕ್ತಪಡಿಸಿದ್ದರು. ಬೌಲರ್ ಚೆಂಡೆಸೆಯುವ ಮೊದಲೇ ಬ್ಯಾಟ್ಸ್​ಮನ್​ ಕ್ರೀಸ್ ಬಿಟ್ಟರೆ ರನೌಟ್ ಮಾಡುವುದು ನನ್ನ ಪ್ರಕಾರ ತಪ್ಪಲ್ಲ ಎಂದಿದ್ದರು.

ಏಕೆಂದರೆ ಐಸಿಸಿ ನಿಯಮ 42.15 ರ ಪ್ರಕಾರ ಚೆಂಡನ್ನು ಎಸೆಯುವ ಮುನ್ನ ನಾನ್ ಸ್ಟ್ರೈಕ್​ನಲ್ಲಿರುವ ಬ್ಯಾಟ್ಸ್​ಮನ್​ ಕ್ರೀಸ್ ಬಿಟ್ಟರೆ ಬೌಲರ್​ಗೆ ರನೌಟ್ ಮಾಡುವ ಅವಕಾಶವಿದೆ. ಕ್ರಿಕೆಟ್ ನಿಯಮವೇ ಹೀಗಿರುವಾಗ ಇಲ್ಲಿ ಕ್ರೀಡಾ ಸ್ಪೂರ್ತಿ ಎಲ್ಲಿ ಬರುತ್ತೆ. ಹೀಗೆ ಮೊದಲೇ ಕ್ರೀಸ್ ಬಿಟ್ಟು ಲಾಭ ಪಡೆಯುತ್ತಿರುವುದು ಬ್ಯಾಟ್ಸ್​ಮನ್​ ಅಲ್ಲವೇ? ಅವರಿಗೆ ಕ್ರೀಡಾ ಸ್ಪೂರ್ತಿ ಅನ್ವಯವಾಗುದಿಲ್ಲವೇ ಎಂದು ಕಪಿಲ್ ದೇವ್ ಪ್ರಶ್ನಿಸಿದ್ದರು.

ಅಷ್ಟೇ ಅಲ್ಲದೆ ಈ ಹಿಂದೆ ಕಪಿಲ್ ದೇವ್ ಕೂಡ ಮಂಕಡಿಂಗ್ ರನೌಟ್ ಮಾಡಿ ಗಮನ ಸೆಳೆದಿದ್ದರು. 1991-92 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ನಡೆದ ಏಕದಿನ ಪಂದ್ಯದ ವೇಳೆ ನಾನ್​ಸ್ಟ್ರೈಕರ್ ತುದಿಯಲ್ಲಿದ್ದ ಪೀಟರ್ ಕರ್ಸ್ಟೆನ್ ಬೌಲ್ ಮಾಡುವ ಮುನ್ನ ಕ್ರೀಸ್ ಬಿಡುತ್ತಿದ್ದರು. ಈ ವೇಳೆ ಒಂದೆರಡು ಬಾರಿ ಕಪಿಲ್ ದೇವ್ ಎಚ್ಚರಿಕೆ ನೀಡಿದ್ದರು. ಆದರೆ ಅದೇ ತಪ್ಪನ್ನು ಮರಕಳಿಸಿದ್ದ ಪೀಟರ್​ನ್ನು ಮಂಕಡಿಂಗ್ ರನೌಟ್ ಮಾಡಿ ಕಪಿಲ್ ದೇವ್ ಪೆವಿಲಿಯನ್​ಗೆ ಕಳುಹಿಸಿದ್ದರು.

ಇದನ್ನೂ ಓದಿ: Viral Story: ಟ್ರಾಫಿಕ್​ ಪೊಲೀಸ್​ ಮನೆಯಲ್ಲಿ ಚಿನ್ನದ ಟಾಯ್ಲೆಟ್

ಇದನ್ನೂ ಓದಿ: ಈವರೆಗೆ ಟೀಮ್ ಇಂಡಿಯಾ ಪರ ಎಷ್ಟು ಮಂದಿ ಆಡಿದ್ದಾರೆ ಗೊತ್ತಾ?

(Kieron Pollard warns Australian player on the field, video goes viral)

Published On - 6:51 pm, Tue, 27 July 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?