AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WI vs IND: ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡ ವೆಸ್ಟ್ ಇಂಡೀಸ್ ಲೆಜೆಂಡ್ ಕ್ರಿಕೆಟಿಗ

West indies vs india 2nd Odi: ಈ ಸರಣಿಯ 2ನೇ ಪಂದ್ಯವು ಭಾನುವಾರ (ಜುಲೈ 22) ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ಭಾರತದ ಪಾಲಾಗಲಿದೆ. ಹೀಗಾಗಿ ವೆಸ್ಟ್ ಇಂಡೀಸ್ ತಂಡಕ್ಕೆ 2ನೇ ಪಂದ್ಯವು ನಿರ್ಣಾಯಕವಾಗಿದೆ.

WI vs IND: ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್​ನಲ್ಲಿ ಕಾಣಿಸಿಕೊಂಡ ವೆಸ್ಟ್ ಇಂಡೀಸ್ ಲೆಜೆಂಡ್ ಕ್ರಿಕೆಟಿಗ
Team India
Follow us
TV9 Web
| Updated By: ಝಾಹಿರ್ ಯೂಸುಫ್

Updated on:Jul 24, 2022 | 10:47 PM

ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ತಂಡವನ್ನು 3 ರನ್ ಗಳಿಂದ ಸೋಲಿಸಿ ರೋಚಕ ಜಯ ಸಾಧಿಸಿದೆ. ಶುಕ್ರವಾರ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 308 ರನ್ ಗಳಿಸಿತ್ತು. ನಂತರ ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ 305 ರನ್ ಗಳಿಸಲಷ್ಟೇ ಶಕ್ತವಾಯಿತು. ರೋಚಕ ಪಂದ್ಯದಲ್ಲಿ ಗೆಲುವಿನ ಬಳಿಕ ವೆಸ್ಟ್ ಇಂಡೀಸ್​ನ ಲೆಜೆಂಡ್ ಕ್ರಿಕೆಟಿಗ ಬ್ರಿಯಾನ್ ಲಾರಾ ಡ್ರೆಸ್ಸಿಂಗ್ ರೂಂನಲ್ಲಿ ಟೀಮ್ ಇಂಡಿಯಾ ಆಟಗಾರರನ್ನು ಭೇಟಿ ಮಾಡಿದರು.

ಟೀಮ್ ಇಂಡಿಯಾ ಗೆಲುವಿನ ಬಳಿಕ ಲಾರಾ ಭಾರತೀಯ ಆಟಗಾರರನ್ನು ಕುಶಲೋಪರಿ ನಡೆಸಿದರು. ಏತನ್ಮಧ್ಯೆ, ಶಿಖರ್ ಧವನ್ ಮತ್ತು ಶ್ರೇಯಸ್ ಅಯ್ಯರ್ ವೆಸ್ಟ್ ಇಂಡೀಸ್ ದಂತಕಥೆಯೊಂದಿಗೆ ವಿಶೇಷ ಸಂವಾದ ನಡೆಸಿದರು. ಇವರೊಂದಿಗೆ ಯುಜುವೇಂದ್ರ ಚಾಹಲ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ಕಾಣಿಸಿಕೊಂಡರು. ಈ ವಿಶೇಷ ವಿಡಿಯೋವನ್ನು ಬಿಸಿಸಿಐ ಟ್ವೀಟ್ ಮಾಡಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಕೂಡ ಲಾರಾ ಅವರನ್ನು ಭೇಟಿಯಾಗಿದ್ದರು.

ಇದನ್ನೂ ಓದಿ
Image
Team India: 7 ತಿಂಗಳಲ್ಲಿ 7 ನಾಯಕರು: ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ
Image
ಸಚಿನ್, ಧೋನಿಗೂ ಸಿಕ್ಕಿಲ್ಲ ಈ ಗೌರವ: ಇಂಗ್ಲೆಂಡ್ ಕ್ರಿಕೆಟ್ ಸ್ಟೇಡಿಯಂಗೆ ಭಾರತೀಯ ಕ್ರಿಕೆಟಿಗನ ಹೆಸರು..!
Image
Cheteshwar Pujara: ಒಟ್ಟು 997 ರನ್​: ಕೌಂಟಿ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಪೂಜಾರ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಶಿಖರ್ ಧವನ್ 97 ರನ್‌ಗಳ ಅದ್ಭುತ ಇನ್ನಿಂಗ್ಸ್‌ನೊಂದಿಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಆದರೆ ಕೇವಲ 3 ರನ್​ಗಳಿಂದ ಶತಕ ವಂಚಿತರಾಗಿದ್ದರು. ಇನ್ನು ಶುಭಮನ್ ಗಿಲ್ 64 ರನ್, ಶ್ರೇಯಸ್ ಅಯ್ಯರ್ 54 ರನ್ ಗಳಿಸಿ ಮಿಂಚಿದರು. ಭಾರತದ ಬೌಲಿಂಗ್ ನಲ್ಲಿ ಅದ್ಭುತ ಪ್ರದರ್ಶನ ನೀಡಿದ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ ಹಾಗೂ ಚಹಾಲ್ ತಲಾ ಎರಡು ವಿಕೆಟ್ ಪಡೆದು ಭಾರತ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.

ಇದೀಗ ಈ ಸರಣಿಯ 2ನೇ ಪಂದ್ಯವು ಭಾನುವಾರ (ಜುಲೈ 22) ನಡೆಯಲಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ ಸರಣಿ ಭಾರತದ ಪಾಲಾಗಲಿದೆ. ಹೀಗಾಗಿ ವೆಸ್ಟ್ ಇಂಡೀಸ್ ತಂಡಕ್ಕೆ 2ನೇ ಪಂದ್ಯವು ನಿರ್ಣಾಯಕವಾಗಿದೆ.

ವೆಸ್ಟ್ ಇಂಡೀಸ್ ಏಕದಿನ ತಂಡ ಹೀಗಿದೆ: ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮ್ರಾ ಬ್ರೂಕ್ಸ್, ಕೆಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕಿಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರೆಂಡನ್ ಕಿಂಗ್, ಕೈಲ್ ಮೈಯರ್ಸ್, ಗುಡಕೇಶ್ ಮೋತಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್ ಮತ್ತು ಜೇಡನ್ ಸೀಲ್ಸ್.

ಮೀಸಲು ಆಟಗಾರರು: ರೊಮಾರಿಯೊ ಶೆಫರ್ಡ್, ಹೇಡನ್ ವಾಲ್ಷ್ ಜೂನಿಯರ್.

ಭಾರತ ಏಕದಿನ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್‌), ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

Published On - 10:55 am, Sun, 24 July 22

ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
‘ದೂರ ತೀರ ಯಾನ’ಕ್ಕೆ ನಟ ನವೀನ್ ಶಂಕರ್ ಶುಭ ಹಾರೈಕೆ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್