AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಸ್ಟ್ ಇಂಡೀಸ್​ಗೆ ಸುಲಭ ಗುರಿ ನೀಡಿದ ಟೀಮ್ ಇಂಡಿಯಾ

West Indies vs India, 2nd T20I: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ವೆಸ್ಟ್ ಇಂಡೀಸ್​ಗೆ ಸುಲಭ ಗುರಿ ನೀಡಿದ ಟೀಮ್ ಇಂಡಿಯಾ
IND vs WI
TV9 Web
| Edited By: |

Updated on: Aug 06, 2023 | 9:39 PM

Share

West Indies vs India, 2nd T20I: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್​ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸಾಧಾರಣ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಕೇವಲ 7 ರನ್​ಗಳಿಸಿ ಅಲ್ಝಾರಿ ಜೋಸೆಫ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ಸೂರ್ಯಕುಮಾರ್ ಯಾದವ್ (1) ರನ್ ಕದಿಯುವ ಯತ್ನದಲ್ಲಿ ರನೌಟ್ ಆಗಿ ನಿರ್ಗಮಿಸಿದರು.

ಮತ್ತೊಂದೆಡೆ ಕ್ರೀಸ್​ ಕಚ್ಚಿ ನಿಂತಿದ್ದ ಇಶಾನ್ ಕಿಶನ್ 23 ಎಸೆತಗಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 27 ರನ್​ಗಳು ಮಾತ್ರ. ಇದರ ನಡುವೆ ಕಣಕ್ಕಿಳಿದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು.

ಆದರೆ ಸಂಜು ಸ್ಯಾಮ್ಸನ್ (7) ಸ್ಟಂಪ್ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು. ಇದಾಗ್ಯೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ತಿಲಕ್ ವರ್ಮಾ 39 ಎಸೆತಗಳಲ್ಲಿ ತಮ್ಮ ಚೊಚ್ಚಲ ಅರ್ಧಶತಕ ಪೂರೈಸಿದರು.

ಇನ್ನು ಅರ್ಧಶತಕದ ಬೆನ್ನಲ್ಲೇ ಭರ್ಜರಿ ಹೊಡೆತಕ್ಕೆ ಮುಂದಾದ ತಿಲಕ್ ವರ್ಮಾ (51 ರನ್, 41 ಎಸೆತ) ಬೌಂಡರಿ ಲೈನ್​ನಲ್ಲಿ ಕ್ಯಾಚಿತ್ತು ಹೊರ ನಡೆದರು. ಅಂತಿಮ ಓವರ್​ಗಳ ವೇಳೆ ಜೊತೆಯಾದ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಕೂಡ ರನ್​ಗಳಿಸಲು ತಡಕಾಡಿದರು. ಅಲ್ಲದೆ 18 ಎಸೆತಗಳಲ್ಲಿ 24 ರನ್​ಗಳಿಸಿದ ಪಾಂಡ್ಯ ಅಲ್ಝಾರಿ ಜೋಸೆಫ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

ಹಾಗೆಯೇ 20ನೇ ಓವರ್​ನ ಮೊದಲ ಎಸೆತದಲ್ಲೇ ಅಕ್ಷರ್ ಪಟೇಲ್ (14) ಕೂಡ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯ ಓವರ್​ನಲ್ಲಿ ಅರ್ಷದೀಪ್ ಸಿಂಗ್ ಬಾರಿಸಿದ ಫೋರ್ ಹಾಗೂ ರವಿ ಬಿಷ್ಣೋಯ್ ಸಿಡಿಸಿದ ಸಿಕ್ಸ್​ನಿಂದ ಟೀಮ್ ಇಂಡಿಯಾ ಮೊತ್ತ   7 ವಿಕೆಟ್ ನಷ್ಟಕ್ಕೆ 152 ಕ್ಕೆ ಬಂದು ನಿಂತಿತು. ಅದರಂತೆ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಗೆಲ್ಲಲು 120 ಎಸೆತಗಳಲ್ಲಿ 153 ರನ್​ ಕಲೆಹಾಕಬೇಕಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಶುಭ್​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.

ಇದನ್ನೂ ಓದಿ: Team India: ಶತಕ ಬಾರಿಸದೇ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್