AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಸ್ಟ್ ಇಂಡೀಸ್​ಗೆ ಸುಲಭ ಗುರಿ ನೀಡಿದ ಟೀಮ್ ಇಂಡಿಯಾ

West Indies vs India, 2nd T20I: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ವೆಸ್ಟ್ ಇಂಡೀಸ್​ಗೆ ಸುಲಭ ಗುರಿ ನೀಡಿದ ಟೀಮ್ ಇಂಡಿಯಾ
IND vs WI
TV9 Web
| Edited By: |

Updated on: Aug 06, 2023 | 9:39 PM

Share

West Indies vs India, 2nd T20I: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್​ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸಾಧಾರಣ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಕೇವಲ 7 ರನ್​ಗಳಿಸಿ ಅಲ್ಝಾರಿ ಜೋಸೆಫ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ಸೂರ್ಯಕುಮಾರ್ ಯಾದವ್ (1) ರನ್ ಕದಿಯುವ ಯತ್ನದಲ್ಲಿ ರನೌಟ್ ಆಗಿ ನಿರ್ಗಮಿಸಿದರು.

ಮತ್ತೊಂದೆಡೆ ಕ್ರೀಸ್​ ಕಚ್ಚಿ ನಿಂತಿದ್ದ ಇಶಾನ್ ಕಿಶನ್ 23 ಎಸೆತಗಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 27 ರನ್​ಗಳು ಮಾತ್ರ. ಇದರ ನಡುವೆ ಕಣಕ್ಕಿಳಿದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು.

ಆದರೆ ಸಂಜು ಸ್ಯಾಮ್ಸನ್ (7) ಸ್ಟಂಪ್ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು. ಇದಾಗ್ಯೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ತಿಲಕ್ ವರ್ಮಾ 39 ಎಸೆತಗಳಲ್ಲಿ ತಮ್ಮ ಚೊಚ್ಚಲ ಅರ್ಧಶತಕ ಪೂರೈಸಿದರು.

ಇನ್ನು ಅರ್ಧಶತಕದ ಬೆನ್ನಲ್ಲೇ ಭರ್ಜರಿ ಹೊಡೆತಕ್ಕೆ ಮುಂದಾದ ತಿಲಕ್ ವರ್ಮಾ (51 ರನ್, 41 ಎಸೆತ) ಬೌಂಡರಿ ಲೈನ್​ನಲ್ಲಿ ಕ್ಯಾಚಿತ್ತು ಹೊರ ನಡೆದರು. ಅಂತಿಮ ಓವರ್​ಗಳ ವೇಳೆ ಜೊತೆಯಾದ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಕೂಡ ರನ್​ಗಳಿಸಲು ತಡಕಾಡಿದರು. ಅಲ್ಲದೆ 18 ಎಸೆತಗಳಲ್ಲಿ 24 ರನ್​ಗಳಿಸಿದ ಪಾಂಡ್ಯ ಅಲ್ಝಾರಿ ಜೋಸೆಫ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

ಹಾಗೆಯೇ 20ನೇ ಓವರ್​ನ ಮೊದಲ ಎಸೆತದಲ್ಲೇ ಅಕ್ಷರ್ ಪಟೇಲ್ (14) ಕೂಡ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯ ಓವರ್​ನಲ್ಲಿ ಅರ್ಷದೀಪ್ ಸಿಂಗ್ ಬಾರಿಸಿದ ಫೋರ್ ಹಾಗೂ ರವಿ ಬಿಷ್ಣೋಯ್ ಸಿಡಿಸಿದ ಸಿಕ್ಸ್​ನಿಂದ ಟೀಮ್ ಇಂಡಿಯಾ ಮೊತ್ತ   7 ವಿಕೆಟ್ ನಷ್ಟಕ್ಕೆ 152 ಕ್ಕೆ ಬಂದು ನಿಂತಿತು. ಅದರಂತೆ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಗೆಲ್ಲಲು 120 ಎಸೆತಗಳಲ್ಲಿ 153 ರನ್​ ಕಲೆಹಾಕಬೇಕಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಶುಭ್​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.

ಇದನ್ನೂ ಓದಿ: Team India: ಶತಕ ಬಾರಿಸದೇ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್.

Follow Us
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು