AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಸ್ಟ್ ಇಂಡೀಸ್​ಗೆ ಸುಲಭ ಗುರಿ ನೀಡಿದ ಟೀಮ್ ಇಂಡಿಯಾ

West Indies vs India, 2nd T20I: ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ವೆಸ್ಟ್ ಇಂಡೀಸ್​ಗೆ ಸುಲಭ ಗುರಿ ನೀಡಿದ ಟೀಮ್ ಇಂಡಿಯಾ
IND vs WI
TV9 Web
| Edited By: |

Updated on: Aug 06, 2023 | 9:39 PM

Share

West Indies vs India, 2nd T20I: ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್​ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸಾಧಾರಣ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಕೇವಲ 7 ರನ್​ಗಳಿಸಿ ಅಲ್ಝಾರಿ ಜೋಸೆಫ್​ಗೆ ವಿಕೆಟ್ ಒಪ್ಪಿಸಿದರು. ಇನ್ನು ಸೂರ್ಯಕುಮಾರ್ ಯಾದವ್ (1) ರನ್ ಕದಿಯುವ ಯತ್ನದಲ್ಲಿ ರನೌಟ್ ಆಗಿ ನಿರ್ಗಮಿಸಿದರು.

ಮತ್ತೊಂದೆಡೆ ಕ್ರೀಸ್​ ಕಚ್ಚಿ ನಿಂತಿದ್ದ ಇಶಾನ್ ಕಿಶನ್ 23 ಎಸೆತಗಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 27 ರನ್​ಗಳು ಮಾತ್ರ. ಇದರ ನಡುವೆ ಕಣಕ್ಕಿಳಿದ ಯುವ ಎಡಗೈ ದಾಂಡಿಗ ತಿಲಕ್ ವರ್ಮಾ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದರು.

ಆದರೆ ಸಂಜು ಸ್ಯಾಮ್ಸನ್ (7) ಸ್ಟಂಪ್ ಔಟ್ ಆಗುವ ಮೂಲಕ ನಿರಾಸೆ ಮೂಡಿಸಿದರು. ಇದಾಗ್ಯೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ತಿಲಕ್ ವರ್ಮಾ 39 ಎಸೆತಗಳಲ್ಲಿ ತಮ್ಮ ಚೊಚ್ಚಲ ಅರ್ಧಶತಕ ಪೂರೈಸಿದರು.

ಇನ್ನು ಅರ್ಧಶತಕದ ಬೆನ್ನಲ್ಲೇ ಭರ್ಜರಿ ಹೊಡೆತಕ್ಕೆ ಮುಂದಾದ ತಿಲಕ್ ವರ್ಮಾ (51 ರನ್, 41 ಎಸೆತ) ಬೌಂಡರಿ ಲೈನ್​ನಲ್ಲಿ ಕ್ಯಾಚಿತ್ತು ಹೊರ ನಡೆದರು. ಅಂತಿಮ ಓವರ್​ಗಳ ವೇಳೆ ಜೊತೆಯಾದ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಲ್ ಕೂಡ ರನ್​ಗಳಿಸಲು ತಡಕಾಡಿದರು. ಅಲ್ಲದೆ 18 ಎಸೆತಗಳಲ್ಲಿ 24 ರನ್​ಗಳಿಸಿದ ಪಾಂಡ್ಯ ಅಲ್ಝಾರಿ ಜೋಸೆಫ್ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು.

ಹಾಗೆಯೇ 20ನೇ ಓವರ್​ನ ಮೊದಲ ಎಸೆತದಲ್ಲೇ ಅಕ್ಷರ್ ಪಟೇಲ್ (14) ಕೂಡ ವಿಕೆಟ್ ಒಪ್ಪಿಸಿದರು. ಇನ್ನು ಕೊನೆಯ ಓವರ್​ನಲ್ಲಿ ಅರ್ಷದೀಪ್ ಸಿಂಗ್ ಬಾರಿಸಿದ ಫೋರ್ ಹಾಗೂ ರವಿ ಬಿಷ್ಣೋಯ್ ಸಿಡಿಸಿದ ಸಿಕ್ಸ್​ನಿಂದ ಟೀಮ್ ಇಂಡಿಯಾ ಮೊತ್ತ   7 ವಿಕೆಟ್ ನಷ್ಟಕ್ಕೆ 152 ಕ್ಕೆ ಬಂದು ನಿಂತಿತು. ಅದರಂತೆ ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡ ಗೆಲ್ಲಲು 120 ಎಸೆತಗಳಲ್ಲಿ 153 ರನ್​ ಕಲೆಹಾಕಬೇಕಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಶುಭ್​ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.

ಇದನ್ನೂ ಓದಿ: Team India: ಶತಕ ಬಾರಿಸದೇ ವಿಶೇಷ ದಾಖಲೆ ಬರೆದ ಟೀಮ್ ಇಂಡಿಯಾ

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ಜೇಸನ್ ಹೋಲ್ಡರ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್.

Follow Us
Web contact
Web contact

TV9 Kannada

Read More
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಅಲ್ಲೆಲ್ಲೋ ಯುದ್ಧ ನಡೀತಿದ್ರೆ ಇಲ್ಯಾಕೆ ಚಿನ್ನ ಖರೀದಿ ಮಾಡಬಾರದು?
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಸಾರ್ವಜನಿಕರೇ ಬೆಂಗಳೂರಿನ ಈ ರಸ್ತೆಗಳಲ್ಲಿ ಓಡಾಡುವಾಗ ಹುಷಾರ್!
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಲವ್ ವಿಚಾರಕ್ಕೆ 17ರ ಮಗಳನ್ನೇ ಕೊಂದ ಅಪ್ಪ: ತಂದೆಯ ಅಸಲಿ ಮುಖ ಬಯಲು
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಶತಕದ ಪಂದ್ಯದಲ್ಲಿ ಒಂದೇ ರನ್​ಗೆ ಸುಸ್ತಾದ ಶ್ರೇಯಸ್ ಅಯ್ಯರ್
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ಅರಬ್ಬಿ ಸಮುದ್ರದಲ್ಲಿ ಹೆಚ್ಚಿದ ಗಾಳಿಯ ವೇಗ: ಲಂಗರು ಹಾಕಿದ ನೂರಾರು ಬೋಟ್​​​​
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ನಿಯಂತ್ರಣ ತಪ್ಪಿ ಏಕಾಏಕಿ ರೆಸ್ಟೋರೆಂಟ್ ಒಳಗೆ ನುಗ್ಗಿದ ಕಾರು
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಜಿಟಿ ದೇವೇಗೌಡಗೆ ಶಾಕ್: ಸ್ವಪಕ್ಷದ ಶಾಸಕರನ್ನ ದೂರವಿಟ್ಟು​ ಸಮಾವೇಶ
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ಕಲಬುರಗಿಯಲ್ಲಿ ಮಾಜಿ ಸೈನಿಕನ ಬರ್ಬರ ಹತ್ಯೆ: ಆಗಿದ್ದೇನು?
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ನಿರಾಶ್ರಿತರ ಕೇಂದ್ರದಲ್ಲಿದ್ದ ವಿದೇಶಿ ಅಕ್ರಮ ವಲಸಿಗರು ಪರಾರಿ!
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ
ಶನಿ ಅಮಾವಾಸ್ಯೆ, ವೀಕೆಂಡ್ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತಸಾಗರ