AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 3rd ODI: ಭಾರತ-ವೆಸ್ಟ್ ಇಂಡೀಸ್ 3ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ

West Indies vs India, 3rd ODI: ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಸೋತು ಭಾರತ ತಂಡವು ಮುಖಭಂಗಕ್ಕೆ ಒಳಗಾಗಿದೆ.

IND vs WI 3rd ODI: ಭಾರತ-ವೆಸ್ಟ್ ಇಂಡೀಸ್ 3ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ
IND vs WI
TV9 Web
| Edited By: |

Updated on: Jul 30, 2023 | 6:03 PM

Share

West Indies vs India, 3rd ODI: ಭಾರತ-ವೆಸ್ಟ್ ಇಂಡೀಸ್ ನಡುವಣ 3 ಪಂದ್ಯಗಳ ಏಕದಿನ ಸರಣಿಯ 2 ಮ್ಯಾಚ್​ಗಳು ಈಗಾಗಲೇ ಮುಗಿದಿವೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿದರೆ, 2ನೇ ಪಂದ್ಯದಲ್ಲಿ ಭಾರತ ತಂಡಕ್ಕೆ ವೆಸ್ಟ್ ಇಂಡೀಸ್ 6 ವಿಕೆಟ್​ಗಳ ಸೋಲುಣಿಸಿದೆ. ಇದರೊಂದಿಗೆ ಸರಣಿಯು 1-1 ಅಂತರದಿಂದ ಸಮಬಲಗೊಂಡಿದೆ. ಅದರಂತೆ ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿರುವುದು ವಿಶೇಷ.

ಈ ಫೈನಲ್ ಫೈಟ್ ಪಂದ್ಯವು ಆಗಸ್ಟ್ 1 ರಂದು ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಗೆದ್ದು ಮಾನ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

ಏಕೆಂದರೆ ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಸೋತು ಭಾರತ ತಂಡವು ಮುಖಭಂಗಕ್ಕೆ ಒಳಗಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಜಯ ಸಾಧಿಸಿ ಸರಣಿ ವಶಪಡಿಸಿಕೊಳ್ಳಲು ಟೀಮ್ ಇಂಡಿಯಾ ಭರ್ಜರಿ ಪ್ಲ್ಯಾನ್ ರೂಪಿಸಿದೆ.

ಇನ್ನು ಈ ಪಂದ್ಯ ಕೂಡ ಡಿಡಿ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದ್ದು, ಹಾಗೆಯೇ ಜಿಯೋ ಸಿನಿಮಾ ಆ್ಯಪ್ ಹಾಗೂ ವೆಬ್​ಸೈಟ್​ಗಳಲ್ಲಿ ಲೈವ್ ವೀಕ್ಷಿಸಬಹುದು.

ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ) , ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಅಲಿಕ್ ಅಥಾನಾಝ್, ಶಿಮ್ರಾನ್ ಹೆಟ್ಮೆಯರ್ , ರೋವ್​ಮನ್ ಪೊವೆಲ್ , ರೊಮಾರಿಯೋ ಶೆಫರ್ಡ್ , ಡೊಮಿನಿಕ್ ಡ್ರೇಕ್ಸ್ , ಯಾನಿಕ್ ಕ್ಯಾರಿಯಾ , ಗುಡಕೇಶ್ ಮೋಟಿ , ಜೇಡನ್ ಸೀಲ್ಸ್ , ಕೀಸಿ ಕಾರ್ಟಿ, ಒಶಾನೆ ಥಾಮಸ್ , ಅಲ್ಝಾರಿ ಜೋಸೆಫ್, ಕೆವಿನ್ ಸಿಂಕ್ಲೇರ್.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್ , ಯುಜ್ವೇಂದ್ರ ಚಾಹಲ್ , ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್.

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್