AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI 3rd ODI: ಭಾರತ-ವೆಸ್ಟ್ ಇಂಡೀಸ್ 3ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ

West Indies vs India, 3rd ODI: ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಸೋತು ಭಾರತ ತಂಡವು ಮುಖಭಂಗಕ್ಕೆ ಒಳಗಾಗಿದೆ.

IND vs WI 3rd ODI: ಭಾರತ-ವೆಸ್ಟ್ ಇಂಡೀಸ್ 3ನೇ ಏಕದಿನ ಪಂದ್ಯ ಯಾವಾಗ? ಇಲ್ಲಿದೆ ಮಾಹಿತಿ
IND vs WI
TV9 Web
| Edited By: |

Updated on: Jul 30, 2023 | 6:03 PM

Share

West Indies vs India, 3rd ODI: ಭಾರತ-ವೆಸ್ಟ್ ಇಂಡೀಸ್ ನಡುವಣ 3 ಪಂದ್ಯಗಳ ಏಕದಿನ ಸರಣಿಯ 2 ಮ್ಯಾಚ್​ಗಳು ಈಗಾಗಲೇ ಮುಗಿದಿವೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಜಯ ಸಾಧಿಸಿದರೆ, 2ನೇ ಪಂದ್ಯದಲ್ಲಿ ಭಾರತ ತಂಡಕ್ಕೆ ವೆಸ್ಟ್ ಇಂಡೀಸ್ 6 ವಿಕೆಟ್​ಗಳ ಸೋಲುಣಿಸಿದೆ. ಇದರೊಂದಿಗೆ ಸರಣಿಯು 1-1 ಅಂತರದಿಂದ ಸಮಬಲಗೊಂಡಿದೆ. ಅದರಂತೆ ಇದೀಗ ಮೂರನೇ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿರುವುದು ವಿಶೇಷ.

ಈ ಫೈನಲ್ ಫೈಟ್ ಪಂದ್ಯವು ಆಗಸ್ಟ್ 1 ರಂದು ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವು ಸರಣಿ ನಿರ್ಣಾಯಕವಾಗಿರುವುದರಿಂದ ಗೆದ್ದು ಮಾನ ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ.

ಏಕೆಂದರೆ ಏಕದಿನ ವಿಶ್ವಕಪ್​ಗೆ ಅರ್ಹತೆ ಪಡೆಯುವಲ್ಲಿ ವಿಫಲವಾಗಿರುವ ವೆಸ್ಟ್ ಇಂಡೀಸ್ ವಿರುದ್ಧ 2ನೇ ಏಕದಿನ ಪಂದ್ಯದಲ್ಲಿ ಸೋತು ಭಾರತ ತಂಡವು ಮುಖಭಂಗಕ್ಕೆ ಒಳಗಾಗಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಜಯ ಸಾಧಿಸಿ ಸರಣಿ ವಶಪಡಿಸಿಕೊಳ್ಳಲು ಟೀಮ್ ಇಂಡಿಯಾ ಭರ್ಜರಿ ಪ್ಲ್ಯಾನ್ ರೂಪಿಸಿದೆ.

ಇನ್ನು ಈ ಪಂದ್ಯ ಕೂಡ ಡಿಡಿ ಸ್ಪೋರ್ಟ್ಸ್​ ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದ್ದು, ಹಾಗೆಯೇ ಜಿಯೋ ಸಿನಿಮಾ ಆ್ಯಪ್ ಹಾಗೂ ವೆಬ್​ಸೈಟ್​ಗಳಲ್ಲಿ ಲೈವ್ ವೀಕ್ಷಿಸಬಹುದು.

ವೆಸ್ಟ್ ಇಂಡೀಸ್ ಏಕದಿನ ತಂಡ: ಶಾಯ್ ಹೋಪ್ (ನಾಯಕ) , ಬ್ರಾಂಡನ್ ಕಿಂಗ್ , ಕೈಲ್ ಮೇಯರ್ಸ್ , ಅಲಿಕ್ ಅಥಾನಾಝ್, ಶಿಮ್ರಾನ್ ಹೆಟ್ಮೆಯರ್ , ರೋವ್​ಮನ್ ಪೊವೆಲ್ , ರೊಮಾರಿಯೋ ಶೆಫರ್ಡ್ , ಡೊಮಿನಿಕ್ ಡ್ರೇಕ್ಸ್ , ಯಾನಿಕ್ ಕ್ಯಾರಿಯಾ , ಗುಡಕೇಶ್ ಮೋಟಿ , ಜೇಡನ್ ಸೀಲ್ಸ್ , ಕೀಸಿ ಕಾರ್ಟಿ, ಒಶಾನೆ ಥಾಮಸ್ , ಅಲ್ಝಾರಿ ಜೋಸೆಫ್, ಕೆವಿನ್ ಸಿಂಕ್ಲೇರ್.

ಇದನ್ನೂ ಓದಿ: ICC Test Rankings: ಅಗ್ರ ಹತ್ತರಲ್ಲಿ ಟೀಮ್ ಇಂಡಿಯಾದ ಏಕೈಕ ಆಟಗಾರನಿಗೆ ಸ್ಥಾನ

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) , ಇಶಾನ್ ಕಿಶನ್ (ವಿಕೆಟ್ ಕೀಪರ್) , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ಹಾರ್ದಿಕ್ ಪಾಂಡ್ಯ , ಸೂರ್ಯಕುಮಾರ್ ಯಾದವ್ , ರವೀಂದ್ರ ಜಡೇಜಾ , ಶಾರ್ದೂಲ್ ಠಾಕೂರ್ , ಕುಲ್ದೀಪ್ ಯಾದವ್ , ಉಮ್ರಾನ್ ಮಲಿಕ್ , ಮುಖೇಶ್ ಕುಮಾರ್ , ಯುಜ್ವೇಂದ್ರ ಚಾಹಲ್ , ಸಂಜು ಸ್ಯಾಮ್ಸನ್, ಜಯದೇವ್ ಉನಾದ್ಕಟ್, ರುತುರಾಜ್ ಗಾಯಕ್ವಾಡ್, ಅಕ್ಷರ್ ಪಟೇಲ್.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?