AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಸ್ಪರ್ಧಾತ್ಮಕ ಸವಾಲು ನೀಡಿದ ವೆಸ್ಟ್ ಇಂಡೀಸ್

West Indies vs India, 3rd T20I: ಭಾರತ-ವೆಸ್ಟ್ ಇಂಡೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯ ಗಯಾನಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಗೆದ್ದರೆ ಮಾತ್ರ ಟೀಮ್ ಇಂಡಿಯಾ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು.

ಟೀಮ್ ಇಂಡಿಯಾಗೆ ಸ್ಪರ್ಧಾತ್ಮಕ ಸವಾಲು ನೀಡಿದ ವೆಸ್ಟ್ ಇಂಡೀಸ್
IND vs WI
TV9 Web
| Edited By: |

Updated on:Aug 08, 2023 | 9:40 PM

Share

West Indies vs India, 3rd T20I: ಗಯಾನಾದ ಪ್ರೊವಿಡೆನ್ಸ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ 3ನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವು ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡದ ನಾಯಕ ರೋವ್​ಮನ್ ಪೊವೆಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಕೈಲ್ ಮೇಯರ್ಸ್ ಹಾಗೂ ಬ್ರಾಂಡನ್ ಕಿಂಗ್ ವಿಂಡೀಸ್ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 55 ರನ್ ಪೇರಿಸಿದ ಬಳಿಕ ಮೇಯರ್ಸ್​ (25) ಅಕ್ಷರ್ ಪಟೇಲ್ ಎಸೆತದಲ್ಲಿ ಔಟಾದರು.

ಆ ಬಳಿಕ ಬಂದ ಜಾನ್ಸನ್ ಚಾರ್ಲ್ಸ್​ 12 ರನ್​ಗಳಿಸಿ ಕುಲ್ದೀಪ್ ಯಾದವ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆದರು. ಇನ್ನು ನಿಕೋಲಸ್ ಪೂರನ್ (20) ಕುಲ್ದೀಪ್ ಎಸೆತದಲ್ಲಿ ಸ್ಟಂಪ್ ಔಟ್ ಆಗಿ ನಿರ್ಗಮಿಸಿದರು.

ಇನ್ನು 42 ರನ್​ ಬಾರಿಸಿ ತಂಡಕ್ಕೆ ಆಸರೆಯಾಗಿದ್ದ ಬ್ರಾಂಡನ್ ಕಿಂಗ್​ಗೂ ಕುಲ್ದೀಪ್ ಯಾದವ್ ಪೆವಿಲಿಯನ್ ಹಾದಿ ತೋರಿಸಿದರು. ಪರಿಣಾಮ 17 ಓವರ್​ ಮುಕ್ತಾಯದ ವೇಳೆಗೆ 4 ವಿಕೆಟ್ ಕಳೆದುಕೊಂಡು ವೆಸ್ಟ್ ಇಂಡೀಸ್ 123 ರನ್​ ಕಲೆಹಾಕಿತ್ತು.

ಅಂತಿಮ ಓವರ್​ಗಳಲ್ಲಿ ಬಿಗಿ ದಾಳಿ ಸಂಘಟಿಸಿದ ಟೀಮ್ ಇಂಡಿಯಾ ಬೌಲರ್​ಗಳು ವೆಸ್ಟ್ ಇಂಡೀಸ್ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಇದೇ ವೇಳೆ ಮುಖೇಶ್ ಕುಮಾರ್ ಎಸೆತದಲ್ಲಿ ಶ್ರಿಮಾನ್ ಹೆಟ್ಮೆಯರ್ (9) ಕ್ಯಾಚಿತ್ತು ಹೊರನಡೆದರು. ಆದರೆ ಅರ್ಷದೀಪ್ ಸಿಂಗ್ ಎಸೆದ 19ನೇ ಓವರ್​ನಲ್ಲಿ ರೋವ್​ಮನ್ ಪೊವೆಲ್-ರೊಮಾರಿಯೊ ಜೊತೆಗೂಡಿ 17 ರನ್​ ಬಾರಿಸಿದರು.

ಕೊನೆಯ ಓವರ್​ನಲ್ಲಿ 11 ರನ್ ಬಾರಿಸುವ ಮೂಲಕ 19 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್​ನೊಂದಿಗೆ ಅಜೇಯ 40 ಬಾರಿಸಿದ ರೋವ್​ಮನ್ ಪೊವೆಲ್ ವೆಸ್ಟ್ ಇಂಡೀಸ್ ತಂಡದ ಮೊತ್ತವನ್ನು 5 ವಿಕೆಟ್​ ನಷ್ಟಕ್ಕೆ 159 ಕ್ಕೆ ತಂದು ನಿಲ್ಲಿಸಿದರು. ಈ ಮೂಲಕ ವೆಸ್ಟ್ ಇಂಡೀಸ್ ತಂಡವು ಟೀಮ್ ಇಂಡಿಯಾಗೆ 160 ರನ್​ಗಳ ಟಾರ್ಗೆಟ್ ನೀಡಿದೆ.

ಟೀಮ್ ಇಂಡಿಯಾ ಪರ 4 ಓವರ್​ಗಳಲ್ಲಿ 28 ರನ್ ನೀಡಿ 3 ವಿಕೆಟ್​ ಕಬಳಿಸಿದ ಕುಲ್ದೀಪ್ ಯಾದವ್ ಯಶಸ್ವಿ ಬೌಲರ್​ ಎನಿಸಿಕೊಂಡರು.

ಟೀಮ್ ಇಂಡಿಯಾ ಪ್ಲೇಯಿಂಗ್ 11: ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮುಖೇಶ್ ಕುಮಾರ್.

ಇದನ್ನೂ ಓದಿ: ಪೂರನ್ ಪವರ್​ಗೆ ಹಳೆಯ ದಾಖಲೆ ಉಡೀಸ್​: ಟೀಮ್ ಇಂಡಿಯಾ ವಿರುದ್ದ ಹೊಸ ರೆಕಾರ್ಡ್

ವೆಸ್ಟ್ ಇಂಡೀಸ್ ಪ್ಲೇಯಿಂಗ್ 11: ಕೈಲ್ ಮೇಯರ್ಸ್, ಬ್ರಾಂಡನ್ ಕಿಂಗ್, ಜಾನ್ಸನ್ ಚಾರ್ಲ್ಸ್ (ವಿಕೆಟ್ ಕೀಪರ್), ನಿಕೋಲಸ್ ಪೂರನ್, ಶಿಮ್ರಾನ್ ಹೆಟ್ಮೆಯರ್, ರೋವ್‌ಮನ್ ಪೊವೆಲ್ (ನಾಯಕ), ರೋಸ್ಟನ್ ಚೇಸ್, ರೊಮಾರಿಯೋ ಶೆಫರ್ಡ್, ಅಕೇಲ್ ಹೋಸೇನ್, ಅಲ್ಜಾರಿ ಜೋಸೆಫ್, ಒಬೆಡ್ ಮೆಕಾಯ್.

Published On - 9:38 pm, Tue, 8 August 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್