AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೆರಿಕಾದಲ್ಲಿ ಟೀಮ್ ಇಂಡಿಯಾ ಆಟಗಾರರ ಅಭ್ಯಾಸ ಶುರು: ದ್ರಾವಿಡ್​ರಿಂದ ಸರಣಿ ವಶಕ್ಕೆ ಮಾಸ್ಟರ್ ಪ್ಲಾನ್

India vs West Indies 4th T20I: ಟೀಮ್ ಇಂಡಿಯಾ ಶುಕ್ರವಾರ ಅಂದರೆ ಇಂದಿನಿಂದ ಅಮೆರಿಕಾದಲ್ಲಿ ಅಭ್ಯಾಸ ಶುರು ಮಾಡಲಿದೆ. ಮೆನ್ ಇನ್ ಬ್ಲೂ ಸರಣಿಯನ್ನು ಗೆಲ್ಲಲು ಇನ್ನೂ ಎರಡು ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಫ್ಲೋರಿಡಾದಲ್ಲಿ ಈ ಪಂದ್ಯಗಳು ನಡೆಯಲಿವೆ.

ಅಮೆರಿಕಾದಲ್ಲಿ ಟೀಮ್ ಇಂಡಿಯಾ ಆಟಗಾರರ ಅಭ್ಯಾಸ ಶುರು: ದ್ರಾವಿಡ್​ರಿಂದ ಸರಣಿ ವಶಕ್ಕೆ ಮಾಸ್ಟರ್ ಪ್ಲಾನ್
Team India
Follow us
Vinay Bhat
|

Updated on: Aug 11, 2023 | 7:54 AM

ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸರಣಿಯನ್ನು ಜೀವಂತವಾಗಿರಿಸಿಕೊಂಡಿರುವ ಟೀಮ್ ಇಂಡಿಯಾ (Team India) ಶನಿವಾರ ಮತ್ತು ಭಾನುವಾರದಂದು ಉಳಿದ ಎರಡು ಟಿ20 ಪಂದ್ಯಗಳನ್ನು ಆಡಲು ಅಮೆರಿಕಾದ (America) ಮಿಯಾಮಿಗೆ ಬಂದಿಳಿದಿದೆ. ಮಾಡು ಇಲ್ಲವೇ ಮಡಿ ಎಂಬಂತಾಗಿದ್ದ ಮೂರನೇ ಟಿ20 ಪಂದ್ಯದಲ್ಲಿ ಭಾರತ ಬ್ಯಾಟಿಂಗ್ – ಬೌಲಿಂಗ್​ನಲ್ಲಿ ಅದ್ಭುತ ಪ್ರದರ್ಶನವನ್ನು ನೀಡಿ ಏಳು ವಿಕೆಟ್‌ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ಪಾಂಡ್ಯ (Hardik Pandya) ನೇತೃತ್ವದ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 1-2 ಅಂತರದ ಹಿನ್ನಡೆಯಲ್ಲಿದೆ.

ಟೀಮ್ ಇಂಡಿಯಾ ಶುಕ್ರವಾರ ಅಂದರೆ ಇಂದಿನಿಂದ ಅಮೆರಿಕಾದಲ್ಲಿ ಅಭ್ಯಾಸ ಶುರು ಮಾಡಲಿದೆ. ಮೆನ್ ಇನ್ ಬ್ಲೂ ಸರಣಿಯನ್ನು ಗೆಲ್ಲಲು ಇನ್ನೂ ಎರಡು ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಫ್ಲೋರಿಡಾದಲ್ಲಿ ಈ ಪಂದ್ಯಗಳು ನಡೆಯಲಿವೆ. ಇಲ್ಲಿ ಮೇಜರ್ ಲೀಗ್ ಕ್ರಿಕೆಟ್ (MLC) ಸಮಯದಲ್ಲಿ, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಹೀಗಾಗಿ ಅಮೇರಿಕಾದಲ್ಲಿಯೂ ಸಹ ಭಾರತ ತಂಡವನ್ನು ಹುರಿದುಂಬಿಸಲು ಪ್ರೇಕ್ಷಕರು ಬರುವ ನಿರೀಕ್ಷೆಯಿದೆ.

ಇದನ್ನೂ ಓದಿ
Image
‘ಯುವರಾಜ್ ನಂತರ ಯಾರೂ ಆ ಸ್ಥಾನವನ್ನು ತುಂಬಿಲ್ಲ’; ವಿಶ್ವಕಪ್‌ಗೂ ಮುನ್ನ ರೋಹಿತ್ ಶಾಕಿಂಗ್ ಹೇಳಿಕೆ
Image
ವಿಶ್ವಕಪ್​ಗೂ ಮುನ್ನ ಈಡನ್ ಗಾರ್ಡನ್ಸ್​ನಲ್ಲಿ ಅಗ್ನಿ ಅವಘಡ; ಡ್ರೆಸ್ಸಿಂಗ್ ಕೊಠಡಿಯ ವಸ್ತುಗಳು ಬೆಂಕಿಗಾಹುತಿ
Image
IND vs WI: ಉಳಿದಿರುವ 2 ಟಿ20 ಪಂದ್ಯಗಳಲ್ಲಿ ಕಿಂಗ್ ಕೊಹ್ಲಿ ದಾಖಲೆ ಮುರಿಯಲು ಸಜ್ಜಾದ ತಿಲಕ್ ವರ್ಮಾ!
Image
IND vs WI: ಕೊನೆಯ 2 ಟಿ20 ಪಂದ್ಯಗಳಿಗೆ ಅಮೇರಿಕಾ ಆತಿಥ್ಯ; ಯಾವ ದಿನದಂದು ನಡೆಯಲ್ಲಿವೆ ಈ ಪಂದ್ಯಗಳು?

ODI World Cup 2023: 2 ಬದಲಾವಣೆ; ಟೀಂ ಇಂಡಿಯಾದ ಪರಿಷ್ಕೃತ ವಿಶ್ವಕಪ್ ವೇಳಾಪಟ್ಟಿ ಹೀಗಿದೆ

ಸತತ ಎರಡು ವೈಫಲ್ಯಗಳ ನಂತರ, ತಂಡದ ಹಿರಿಯ ಆಟಗಾರರಾದ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಯುಜ್ವೇಂದ್ರ ಚಹಲ್ ಮತ್ತು ಕುಲ್ದೀಪ್ ಯಾದವ್ ಅವರು ಮೂರನೇ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಿ ಗೆಲುವಿಗೆ ಕಾರಣರಾದರು. ಸೂರ್ಯ ಅವರು ಸ್ಫೋಟಕ ಬ್ಯಾಟಿಂಗ್ ಮೂಲಕ ಫಾರ್ಮ್​ಗೆ ಬಂದರೆ, ಚಹಲ್ ಮತ್ತು ಕುಲ್ದೀಪ್ ಸ್ಪಿನ್ ಜಾದು ಚೆನ್ನಾಗಿ ಕೆಲಸ ಮಾಡಿತು. ಹಾರ್ದಿಕ್ ಕೂಡ ಲಯ ಕಂಡುಕೊಂಡರು. ತಿಲಕ್ ವರ್ಮಾ ತಮ್ಮ ಅದ್ಭುತ ಫಾರ್ಮ್ ಮುಂದುವರೆಸಿದ್ದಾರೆ.

ಸದ್ಯ ಮುಂದಿನ ಎರಡು ಟಿ20 ಪಂದ್ಯಗಳಲ್ಲಿ ಇದೇ ಲಯದಲ್ಲಿ ಆಟವಾಡಬೇಕಿದೆ. ಮೇಜರ್ ಲೀಗ್ ಕ್ರಿಕೆಟ್ ಸಮಯದಲ್ಲಿ ಕಂಡುಬಂದಂತೆ ಯುಎಸ್​ಎಯಲ್ಲಿನ ಪಿಚ್‌ಗಳು ಸಹ ನಿಧಾನವಾಗಿದೆ. ಹೀಗಾಗಿ ಮೂರನೇ ಟಿ20ಯಲ್ಲಿ ಕಣಕ್ಕಿಳಿದ ಆಟಗಾರರೇ ಈ ಬಾರಿ ಕೂಡ ಆಡಬಹುದು.

ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಪಾತ್ರವನ್ನು ಮುಂದುವರಿಸುವ ನಿರೀಕ್ಷೆಯಿದೆ. ಏಕೆಂದರೆ ಭಾರತವು ಯಶಸ್ವಿ ಜೈಸ್ವಾಲ್‌ಗೆ ಮತ್ತೊಂದು ಅವಕಾಶ ನೀಡಬೇಕಿದೆ. ಟಿ20ಗಳಲ್ಲಿ ಸತತ ಮೂರು ವೈಫಲ್ಯ ಅನುಭವಿಸಿರುವ ಗಿಲ್ ಮೇಲೆ ಹೆಚ್ಚಿನ ಒತ್ತಡವಿದೆ. ವೇಗಿಗಳಾದ ಅರ್ಷದೀಪ್ ಸಿಂಗ್ ಮತ್ತು ಮುಖೇಶ್ ಕುಮಾರ್ ಮೂರು ಟಿ20 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದ ಕಾರಣ ಪ್ಲೇಯಿಂಗ್ ಇಲೆವೆನ್​ನಲ್ಲಿರಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ