AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೆಸ್ಟ್ ಇಂಡೀಸ್​ಗೆ ಸ್ಪರ್ಧಾತ್ಮಕ ಸವಾಲು ನೀಡಿದ ಟೀಮ್ ಇಂಡಿಯಾ

West Indies vs India, 5th T20I: ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ (5) ಹಾಗೂ ಶುಭ್​ಮನ್ ಗಿಲ್ (9) ಅಕೇಲ್ ಹೊಸೈನ್​ರ ಸ್ಪಿನ್ ಮೋಡಿಗೆ ಬಲಿಯಾದರು. ಈ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ 49 ರನ್​ಗಳ ಜೊತೆಯಾಟದೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ವೆಸ್ಟ್ ಇಂಡೀಸ್​ಗೆ ಸ್ಪರ್ಧಾತ್ಮಕ ಸವಾಲು ನೀಡಿದ ಟೀಮ್ ಇಂಡಿಯಾ
IND vs WIImage Credit source: AFP
TV9 Web
| Edited By: |

Updated on: Aug 13, 2023 | 10:11 PM

Share

West Indies vs India, 5th T20I: ಫ್ಲೋರಿಡಾದ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 5ನೇ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಭಾರತ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕ ಆಟಗಾರರಾದ ಯಶಸ್ವಿ ಜೈಸ್ವಾಲ್ (5) ಹಾಗೂ ಶುಭ್​ಮನ್ ಗಿಲ್ (9) ಅಕೇಲ್ ಹೊಸೈನ್​ರ ಸ್ಪಿನ್ ಮೋಡಿಗೆ ಬಲಿಯಾದರು. ಈ ಹಂತದಲ್ಲಿ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ತಿಲಕ್ ವರ್ಮಾ 49 ರನ್​ಗಳ ಜೊತೆಯಾಟದೊಂದಿಗೆ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

ಆದರೆ ತಂಡದ ಮೊತ್ತ 66 ರನ್ ಆಗಿದ್ದ ವೇಳೆ ರೋಸ್ಟನ್ ಚೇಸ್ ಹಿಡಿದ ಅದ್ಭುತ ಕ್ಯಾಚ್​ನಿಂದ ತಿಲಕ್ ವರ್ಮಾ (27) ಹೊರ ನಡೆಯಬೇಕಾಯಿತು. ಇದರ ಬೆನ್ನಲ್ಲೇ ಸಂಜು ಸ್ಯಾಮ್ಸನ್ (13) ಕೂಡ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಮತ್ತೊಂದೆಡೆ ಉತ್ತಮವಾಗಿ ಬ್ಯಾಟ್ ಬೀಸಿದ ಸೂರ್ಯಕುಮಾರ್ ಯಾದವ್ ರನ್​ಗಳಿಕೆಯ ವೇಗವನ್ನು ಹೆಚ್ಚಿಸುತ್ತಾ ಸಾಗಿದರು. ಇದರಿಂದ 15 ಓವರ್​ ಮುಕ್ತಾಯದ ವೇಳೆಗೆ ಟೀಮ್ ಇಂಡಿಯಾ 112 ರನ್​ಗಳಿಸುವಂತಾಯಿತು.

ಅಲ್ಲದೆ 16ನೇ ಓವರ್​ನ ಮೊದಲ ಎಸೆತದಲ್ಲೇ ಭರ್ಜರಿ ಸಿಕ್ಸ್ ಸಿಡಿಸಿ ಸೂರ್ಯಕುಮಾರ್ ಯಾದವ್ 38 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇನ್ನು ನಾಯಕ ಹಾರ್ದಿಕ್ ಪಾಂಡ್ಯ ಕೇವಲ 14 ರನ್​ಗಳಿಸಿ ನಿರ್ಗಮಿಸಿದರು. ಮತ್ತೊಂದೆಡೆ ಅಬ್ಬರ ಮುಂದುವರೆಸಿದ ಸೂರ್ಯಕುಮಾರ್ 45 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 61 ರನ್ ಸಿಡಿಸಿದರು. ಈ ವೇಳೆ ಹೋಲ್ಡರ್ ಎಸೆತವನ್ನು ಗುರುತಿಸುವಲ್ಲಿ ಎಡವಿದ ಸೂರ್ಯಕುಮಾರ್ ಯಾದವ್ (61) ಎಲ್​ಬಿಡಬ್ಲ್ಯೂ ಆಗಿ ಹೊರನಡೆದರು.

ಅಂತಿಮವಾಗಿ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್​ಗಳಿಸಿತು. ಈ ಮೂಲಕ ವೆಸ್ಟ್ ಇಂಡೀಸ್ ತಂಡಕ್ಕೆ 166 ರನ್​ಗಳ ಟಾರ್ಗೆಟ್ ನೀಡಿದೆ. ವಿಂಡೀಸ್ ಪರ ರೊಮಾರಿಯೊ ಶೆಫರ್ಡ್​ 4 ವಿಕೆಟ್ ಕಬಳಿಸಿದರೆ, ಅಕೇಲ್ ಹೊಸೈನ್ ಹಾಗೂ ಜೇಸನ್ ಹೋಲ್ಡರ್ ತಲಾ 2 ವಿಕೆಟ್ ಪಡೆದರು.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ಶುಭಮನ್ ಗಿಲ್ , ಯಶಸ್ವಿ ಜೈಸ್ವಾಲ್ , ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮಾ , ಹಾರ್ದಿಕ್ ಪಾಂಡ್ಯ (ನಾಯಕ) , ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್) , ಅಕ್ಷರ್ ಪಟೇಲ್ , ಕುಲದೀಪ್ ಯಾದವ್ , ಅರ್ಷದೀಪ್ ಸಿಂಗ್ , ಯುಜ್ವೇಂದ್ರ ಚಹಲ್ , ಮುಖೇಶ್ ಕುಮಾರ್.

ಇದನ್ನೂ ಓದಿ: Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ವೆಸ್ಟ್ ಇಂಡೀಸ್ ಪ್ಲೇಯಿಂಗ್ ಇಲೆವೆನ್: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಶಾಯ್ ಹೋಪ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ರೋವ್‌ಮನ್ ಪೊವೆಲ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ರೊಮಾರಿಯೊ ಶೆಫರ್ಡ್, ರೋಸ್ಟನ್ ಚೇಸ್, ಅಕೇಲ್ ಹೋಸೇನ್, ಅಲ್ಝಾರಿ ಜೋಸೆಫ್.

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!