AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India squad: ವೆಸ್ಟ್​ ಇಂಡೀಸ್ ವಿರುದ್ದದ ಸರಣಿಗೆ ಟೀಮ್ ಇಂಡಿಯಾ ಪ್ರಕಟ

India squad for West Indies series: ಅನುಭವಿ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್. ಶಮಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಇನ್ನು ತಂಡಕ್ಕೆ ಆಯ್ಕೆಯಾಗಿರುವ ಉಪನಾಯಕ ಕೆಎಲ್ ರಾಹುಲ್ 2ನೇ ಏಕದಿನ ಪಂದ್ಯದಿಂದ ಲಭ್ಯವಾಗಲಿದ್ದಾರೆ.

India squad: ವೆಸ್ಟ್​ ಇಂಡೀಸ್ ವಿರುದ್ದದ ಸರಣಿಗೆ ಟೀಮ್ ಇಂಡಿಯಾ ಪ್ರಕಟ
Team India
TV9 Web
| Updated By: ಝಾಹಿರ್ ಯೂಸುಫ್|

Updated on:Jan 26, 2022 | 11:08 PM

Share

India squad for West Indies series:  ವೆಸ್ಟ್ ಇಂಡೀಸ್ ವಿರುದ್ದದ (India vs West Indies) ಸರಣಿಗಾಗಿ ಟೀಮ್ ಇಂಡಿಯಾವನ್ನು (India squad) ಪ್ರಕಟಿಸಲಾಗಿದೆ. ಗಾಯದ ಕಾರಣ ಸೌತ್ ಆಫ್ರಿಕಾ ಸರಣಿಯಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) ತಂಡಕ್ಕೆ ಮರಳಿದ್ದಾರೆ. ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್​ ಪರ ಆಡಿದ್ದ ಯುವ ಸ್ಪಿನ್ನರ್ ರವಿ ಬಿಷ್ಣೋಯ್ ಹಾಗೂ  ಸ್ಪೋಟಕ ಬ್ಯಾಟರ್ ದೀಪಕ್ ಹೂಡಾ  ಚೊಚ್ಚಲ ಬಾರಿಗೆ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆದಿದ್ದಾರೆ. ಹಾಗೆಯೇ ನ್ಯೂಜಿಲೆಂಡ್ ವಿರುದ್ದ ಸರಣಿಗೆ ಆಯ್ಕೆಯಾಗಿದ್ದ ಯುವ ವೇಗಿ ಅವೇಶ್ ಖಾನ್ ಮತ್ತೊಮ್ಮೆ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ತಂಡಕ್ಕೆ ಮರಳಿದ್ದಾರೆ.

ಇನ್ನು ಅನುಭವಿ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿಗೆ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ. ಹಾಗೆಯೇ ತಂಡಕ್ಕೆ ಆಯ್ಕೆಯಾಗಿರುವ ಉಪನಾಯಕ ಕೆಎಲ್ ರಾಹುಲ್ 2ನೇ ಏಕದಿನ ಪಂದ್ಯದಿಂದ ಲಭ್ಯವಾಗಲಿದ್ದಾರೆ. ಇದಾಗ್ಯೂ  ಮೊಣಕಾಲಿನ ಗಾಯದಿಂದ ಚೇತರಿಸಿಕೊಳ್ಳುತ್ತಿರುವ ರವೀಂದ್ರ ಜಡೇಜಾ ಅವರನ್ನು ಆಯ್ಕೆ ಮಾಡಲಾಗಿಲ್ಲ. ಇನ್ನು ಗಾಯದ ಕಾರಣ ರವಿಚಂದ್ರನ್ ಅಶ್ವಿನ್ ಅವರನ್ನು ಕೂಡ ಆಯ್ಕೆಗೆ ಪರಿಗಣಿಸಿಲ್ಲ.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜುವೇಂದ್ರ  ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

ಭಾರತ-ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ ಹೀಗಿದೆ:

ಏಕದಿನ ಸರಣಿ ವೇಳಾಪಟ್ಟಿ

6 ಫೆಬ್ರವರಿ: 1ನೇ ODI, ಅಹಮದಾಬಾದ್

ಫೆಬ್ರವರಿ 9: 2ನೇ ODI, ಅಹಮದಾಬಾದ್

ಫೆಬ್ರವರಿ 11: 3ನೇ ODI, ಅಹಮದಾಬಾದ್

ಟಿ20 ಸರಣಿ ವೇಳಾಪಟ್ಟಿ:

16 ಫೆಬ್ರವರಿ: 1ನೇ ಟಿ20, ಕೋಲ್ಕತ್ತಾ

ಫೆಬ್ರವರಿ 18: ಎರಡನೇ ಟಿ20, ಕೋಲ್ಕತ್ತಾ

ಫೆಬ್ರವರಿ 20: ಮೂರನೇ ಟಿ20, ಕೋಲ್ಕತ್ತಾ

ಇದನ್ನೂ ಓದಿ: ICC ODI Rankings: ಐಸಿಸಿ ಏಕದಿನ ರ‍್ಯಾಕಿಂಗ್ ಪಟ್ಟಿ ಪ್ರಕಟ: ಕೊಹ್ಲಿ-ರೋಹಿತ್ ನಡುವೆ ಪೈಪೋಟಿ

ಇದನ್ನೂ ಓದಿ: IPL 2022 Auction: ಲಕ್ನೋ ತಂಡದ ಮೊದಲ ಟಾರ್ಗೆಟ್ ಯಾರು ಎಂಬುದನ್ನು ಬಹಿರಂಗಪಡಿಸಿದ ರಾಹುಲ್

Published On - 10:51 pm, Wed, 26 January 22

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ