AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ambati Rayudu: ಯಾವುದೇ ತಂಡ RCB ಹತ್ತಿರಕ್ಕೂ ಬರಲ್ಲ!

IPL 2026 RCB vs GT: ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗುಜರಾತ್ ಟೈಟಾನ್ಸ್ ತಂಡವು 20 ಓವರ್​ಗಳಲ್ಲಿ 155 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ಓವರ್​ಗಳಲ್ಲಿ 161 ರನ್​ ಬಾರಿಸಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಆರ್​ಸಿಬಿ ತಂಡ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

Ambati Rayudu: ಯಾವುದೇ ತಂಡ RCB ಹತ್ತಿರಕ್ಕೂ ಬರಲ್ಲ!
Ambati Rayudu Image Credit source: IPL/Google
ಝಾಹಿರ್ ಯೂಸುಫ್
|

Updated on: Jun 02, 2026 | 8:37 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್​ ಪಟ್ಟದೊಂದಿಗೆ ಬ್ಯಾಕ್ ಟು ಬ್ಯಾಕ್ ಐಪಿಎಲ್ ಟ್ರೋಫಿ ಗೆದ್ದ ಮೂರನೇ ತಂಡ ಎನಿಸಿಕೊಂಡಿದೆ. 2025 ರ ಐಪಿಎಲ್ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ್ದ ಆರ್​ಸಿಬಿ ಈ ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಬಗ್ಗು ಬಡಿದಿದ್ದಾರೆ. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಬಳಿಕ ಸತತವಾಗಿ ಐಪಿಎಲ್ ಟ್ರೋಫಿ ಗೆದ್ದ ಮೂರನೇ ತಂಡ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಐತಿಹಾಸಿಕ ಸಾಧನೆ ಬೆನ್ನಲ್ಲೇ ಆರ್​ಸಿಬಿ ತಂಡವನ್ನು ಅಂಬಾಟಿ ರಾಯುಡು ಹಾಡಿ ಹೊಗಳಿದ್ದಾರೆ.

” ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪ್ರದರ್ಶನವನ್ನು ಪ್ರಶಂಸಿರುವ ಅಂಬಾಟಿ ರಾಯುಡು, ಪ್ರಸ್ತುತ ಐಪಿಎಲ್​ನ ಬಲಿಷ್ಠ ತಂಡ ಎಂದರೆ ಅದು ಆರ್​ಸಿಬಿ. ಐಪಿಎಲ್​ನ ಈ ಯುಗವನ್ನು ಆರ್​ಸಿಬಿ ಈಗಾಗಲೇ ತಮ್ಮದಾಗಿಸಿಕೊಂಡಿದ್ದಾರೆ” .

” ಪ್ರಸ್ತುತ ಇರುವ ಆರ್‌ಸಿಬಿ ತಂಡವು ತುಂಬಾ ಬಲಿಷ್ಠವಾಗಿದೆ. ತಂಡದಲ್ಲಿ ಸ್ಫೋಟಕ ದಾಂಡಿಗರ ಬಳಗವೇ ಇದೆ. ಇದರ ಜೊತೆಗೆ ವಿಶ್ವದ ಅತ್ಯುತ್ತಮ ಬೌಲರ್​ಗಳಿದ್ದಾರೆ. ಹೀಗಾಗಿ ಬಲಿಷ್ಠತೆಯ ವಿಷಯದಲ್ಲಿ ಬೇರೆ ಯಾವುದೇ ತಂಡ ಆರ್​​ಸಿಬಿ ಹತ್ತಿರಕ್ಕೂ ಬರಲ್ಲ. ಅವರಿಗೆ ಸರಿಸಮಾನವಾಗಿ ನಿಲ್ಲಬಲ್ಲ ಸಾಮರ್ಥ್ಯ ಹೊಂದಿಲ್ಲ” ಎಂದು ಅಂಬಾಟಿ ರಾಯುಡು ಹೇಳಿದ್ದಾರೆ.

ಅಂದರೆ ಈಗಿರುವ ಆರ್​ಸಿಬಿ ವಿರುದ್ಧ ಗೆಲ್ಲಲು ಇತರೆ ತಂಡಗಳಿಗೆ ಅಂದುಕೊಂಡಷ್ಟು ಸುಲಭವಲ್ಲ. ಅವರಿಗೆ ಸರಿಸಮಾನವಾಗಿ ನಿಲ್ಲಬಲ್ಲ ಮತ್ತೊಂದು ತಂಡವಿಲ್ಲ. ಇತರೆ 9 ತಂಡಗಳಿಗಿಂತ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಿಕ್ಕಾಪಟ್ಟೆ ಬಲಿಷ್ಠವಾಗಿದೆ ಎಂದು ಅಂಬಾಟಿ ರಾಯುಡು ಅಭಿಪ್ರಾಯಪಟ್ಟಿದ್ದಾರೆ.

ಕುತೂಹಲಕಾರಿ ವಿಷಯ ಎಂದರೆ ಕಳೆದ ವರ್ಷ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಟ್ರೋಫಿ ಗೆದ್ದಾಗ ಇದೇ ಅಂಬಾಟಿ ರಾಯುಡು ಆರ್​ಸಿಬಿ ತಂಡವನ್ನು ಹೀಯಾಳಿಸಿದ್ದರು.

“ನಿಮಗೆ ಒಂದು ಕಪ್ ಗೆಲ್ಲಲು 18 ವರ್ಷ ಬೇಕಾಯಿತು, ಹಾಗಾದರೆ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ 5 ಟ್ರೋಫಿಗಳ ದಾಖಲೆ ಸರಿಗಟ್ಟಲು ನಿಮಗೆ 72 ವರ್ಷ ಬೇಕಾಗಬಹುದು” ಎಂದು ಅಂಬಾಟಿ ರಾಯುಡು ಆರ್​ಸಿಬಿಯನ್ನು ಲೇವಡಿ ಮಾಡಿದ್ದರು.

ಇದನ್ನೂ ಓದಿ: ಇದು ಅನ್ಯಾಯ… ಫೈನಲ್ ಮ್ಯಾಚ್ ಮುಂದೂಡಬೇಕಿತ್ತು: ಸುನಿಲ್ ಗವಾಸ್ಕರ್

ಆದರೆ ಇದೀಗ ಆರ್​ಸಿಬಿ ತಂಡವು ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆಲ್ಲುತ್ತಿದ್ದಂತೆ ಅಂಬಾಟಿ ರಾಯುಡು ತಮ್ಮ ಹಳೆಯ ಡೈಲಾಗ್ ಮರೆತಿದ್ದಾರೆ. ಬದಲಾಗಿ ಇದು ಆರ್​ಸಿಬಿ ತಂಡದ ಯುಗ, ಪ್ರಸ್ತುತ ಐಪಿಎಲ್​ನಲ್ಲಿ ಆರ್​ಸಿಬಿಗೆ ಸರಿಸಾಟಿಯಾಗಿ ಯಾವುದೇ ತಂಡವಿಲ್ಲ. ಯಾವುದೇ ತಂಡದ ಬಲಿಷ್ಠತೆ ಅವರ ಹತ್ತಿರಕ್ಕೂ ಬರಲ್ಲ ಎನ್ನುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ