AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ ಇಂಗ್ಲೆಂಡ್ ಸೆಮಿಫೈನಲ್​ಗೆ ಮಳೆ ಭೀತಿ; ಪಂದ್ಯ ರದ್ದಾದರೆ ಫೈನಲ್​ಗೆ ಯಾರು? ಮೀಸಲು ದಿನ ಇದೆಯೇ? ಇಲ್ಲಿದೆ ಉತ್ತರ

IND vs ENG T20 World Cup Semi Final; ಟಿ20 ವಿಶ್ವಕಪ್​​ನಲ್ಲಿ ಭಾರತ ಹಾಗೂ ಇಂಗ್ಲೆಂಡ್ ಮಧ್ಯೆ ಸೆಮಿಫೈನಲ್ ಹಣಾಹಣಿಗೆ ವೇದಿಕೆ ಸಿದ್ಧವಾಗಿದೆ. ಜೂನ್ 27 ರಂದು ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಕಳೆದ ಬಾರಿಯ ವಿಶ್ವಕಪ್ ಸೆಮಿಫೈನಲ್ ಸೋಲಿನ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಿದ್ಧವಾಗಿದೆ. ಮತ್ತೊಂದೆಡೆ ಪಂದ್ಯಕ್ಕೆ ಮಳೆ ಭೀತಿಯೂ ಎದುರಾಗಿದೆ. ಒಂದು ವೇಳೆ ಮಳೆಯಿಂದ ಪಂದ್ಯಕ್ಕೆ ಅಡ್ಡಿಯಾದರೆ ಏನೆಲ್ಲ ಸಾಧ್ಯತೆಗಳಿವೆ ಎಂಬ ವಿವರ ಇಲ್ಲಿದೆ.

IND vs ENG: ಭಾರತ ಇಂಗ್ಲೆಂಡ್ ಸೆಮಿಫೈನಲ್​ಗೆ ಮಳೆ ಭೀತಿ; ಪಂದ್ಯ ರದ್ದಾದರೆ ಫೈನಲ್​ಗೆ ಯಾರು? ಮೀಸಲು ದಿನ ಇದೆಯೇ? ಇಲ್ಲಿದೆ ಉತ್ತರ
ಟೀಂ ಇಂಡಿಯಾ
ಗಣಪತಿ ಶರ್ಮಾ
|

Updated on:Jun 25, 2024 | 1:04 PM

Share

ಟಿ20 ವಿಶ್ವಕಪ್​​ನ (T20 World Cup) ಸೂಪರ್ 8 ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ಧ 24 ರನ್​​ಗಳಿಂದ ಭರ್ಜರಿ ಗೆಲುವು ದಾಖಲಿಸಿ ಟಿ20 ವಿಶ್ವಕಪ್​​ನಲ್ಲಿ ಗೆಲುವಿನ ನಾಗಾಲೋಟ ಮುಂದುವರಿಸಿರುವ ಟೀಂ ಇಂಡಿಯಾಗೆ (Team Inadia) ಸೆಮಿಫೈನಲ್​​ನಲ್ಲಿ ಇಗ್ಲೆಂಡ್ ಎದುರಾಳಿಯಾಗಿರಲಿದೆ. ಜೂನ್ 27 ರಂದು ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆಯಲಿರುವ ಸೆಮಿಫೈನಲ್ ಕದನಕ್ಕೆ ಮಳೆ ಭೀತಿಯೂ ಎದುರಾಗಿದೆ. ಒಂದು ವೇಳೆ ಮಳೆಯಿಂದಾಗಿ ಸೆಮಿಫೈನಲ್​ ಪಂದ್ಯಕ್ಕೆ ಅಡ್ಡಿಯಾದರೆ ಏನಾಗಲಿದೆ? ಅಗ ಯಾರು ಫೈನಲ್ ಪ್ರವೇಶಿಸುತ್ತಾರೆ? ಮೀಸಲು ದಿನ ಇದೆಯೇ? ಈ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಅಕ್ಯುವೆದರ್ ಪ್ರಕಾರ, ಜೂನ್ 27 ರಂದು ಗಯಾನಾದಲ್ಲಿ ಶೇ 88ರ ಮಳೆ ಮುನ್ಸೂಚನೆ ಇದೆ. ಶೇ 18 ರಷ್ಟು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಸ್ಥಳೀಯ ಕಾಲಮಾನ ಬೆಳಗ್ಗೆ 10.30ಕ್ಕೆ ಪಂದ್ಯ ಆರಂಭವಾಗಲಿದೆ.

IND vs ENG ಸೆಮಿಫೈನಲ್‌ಗೆ ಮೀಸಲು ದಿನವಿದೆಯೇ?

ಭಾರತ, ಇಂಗ್ಲೆಂಡ್ ನಡುವಣ ಸೆಮಿಫೈನಲ್​ ಪಂದ್ಯಕ್ಕೆ ಯಾವುದೇ ಮೀಸಲು ದಿನ ನಿಗದಿಯಾಗಿಲ್ಲ. ಒಂದು ವೇಳೆ ಮಳೆಯಿಂದ ಅಡ್ಡಿಯಾದರೆ ಪಂದ್ಯ ನಡೆಸುವ ಸಲುವಾಗಿ 250 ಹೆಚ್ಚುವರಿ ನಿಮಿಷಗಳ ಸಮಯವನ್ನು ನಿಗದಿಪಡಿಸಲಾಗಿದೆ. ಮೀಸಲು ದಿನವು ಉಭಯ ತಂಡಗಳಿಗೆ ಒತ್ತಡವನ್ನುಂಟುಮಾಡಲಿದೆ. ಏಕೆಂದರೆ ಮೀಸಲು ದಿನ ನಿಗದಿಪಡಿಸಿದರೆ ಸೆಮಿಫೈನಲ್ 2 ರ 24 ಗಂಟೆಗಳ ಒಳಗೆ ಫೈನಲ್ ಪಂದ್ಯದಲ್ಲಿ ಆಡಬೇಕಾಗುತ್ತದೆ.

ಪಂದ್ಯ ರದ್ದಾದರೆ ಫೈನಲ್​ಗೆ ಯಾರು?

ಮಳೆಯಿಂದಾಗಿ ಒಂದೇ ಒಂದು ಎಸೆತವೂ ಕಾಣದೆ ಪಂದ್ಯ ರದ್ದಾದರೆ, ಸೂಪರ್ 8 ಹಂತದಲ್ಲಿ ಪಾಯಿಂಟ್ ಟೇಬಲ್​​ನಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಭಾರತವು ನೇರವಾಗಿ ಟಿ20 ವಿಶ್ವಕಪ್‌ ಫೈನಲ್‌ ಪ್ರವೇಶಿಸಲಿದೆ.

ಸೋಮವಾರ ರಾತ್ರಿ ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು 24 ರನ್‌ಗಳಿಂದ ಸೋಲಿಸಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಸೆಮಿಫೈನಲ್‌ ಪ್ರವೇಶಿಸಿದೆ. ಕಳೆದ ವರ್ಷ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಆದ ಸೋಲಿಗೆ ಈ ಮೂಲಕ ಟೀಂ ಇಂಡಿಯಾ ಸೇಡು ತೀರಿಸಕೊಂಡಿದೆ.

ಇದನ್ನೂ ಓದಿ: ಆಸೀಸ್​​ ಬೌಲರ್​ಗಳ ಬೆವರಿಳಿಸಿ ರೋಹಿತ್ ಶರ್ಮಾ ನಿರ್ಮಿಸಿದ ದಾಖಲೆಗಳಿವು…

ಮತ್ತೊಂದೆಡೆ, ಕಳೆದ ಬಾರಿಯ ಟಿ20 ವಿಶ್ವಕಪ್​​ ಸೆಮಿಫೈನಲ್​​ನಲ್ಲಿ ಎದುರಾಳಿಯಾಗಿದ್ದ ಇಂಗ್ಲೆಂಡ್ ತಂಡವೇ ಈ ಬಾರಿಯೂ ಭಾರತ ತಂಡಕ್ಕೆ ಎದುರಾಳಿಯಾಗಿದೆ. ಕಳೆದ ಬಾರಿ ಸೆಮಿಫೈನಲ್​ನಲ್ಲಿ ಭಾರತ ಸೋಲನುಭವಿಸಿತ್ತು. ಈ ಬಾರಿ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:52 pm, Tue, 25 June 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ