AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy 2024: ಏನಿದು ದುಲೀಪ್ ಟ್ರೋಫಿ?

Duleep Trophy 2024: ದುಲೀಪ್ ಟ್ರೋಫಿ 2024 ಸೆಪ್ಟೆಂಬರ್ 5 ರಿಂದ ಶುರುವಾಗಲಿದೆ. ಈ ಬಾರಿಯ ಟೂರ್ನಿಯು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಯೋಜಿಸಲು ಬಿಸಿಸಿಐ ನಿರ್ಧರಿಸಿದೆ. ವಿಶೇಷ ಎಂದರೆ ಈ ಬಾರಿ ಕಣಕ್ಕಿಳಿಯಲಿರುವ 6 ತಂಡಗಳಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರು ಕೂಡ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ 2024ರ ದುಲೀಪ್ ಟ್ರೋಫಿಯಲ್ಲಿ ರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

Duleep Trophy 2024: ಏನಿದು ದುಲೀಪ್ ಟ್ರೋಫಿ?
Team India
TV9 Web
| Edited By: |

Updated on:Aug 13, 2024 | 10:51 AM

Share

ಬಿಸಿಸಿಐ ಟೀಮ್ ಇಂಡಿಯಾ ಆಟಗಾರರಿಗೆ ದುಲೀಪ್ ಟ್ರೋಫಿ ಆಡುವಂತೆ ಸೂಚಿಸಿದೆ. ಈ ಸೂಚನೆ ಪ್ರಕಾರ, ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​ಪ್ರೀತ್ ಬುಮ್ರಾ ಮತ್ತು ಅಶ್ವಿನ್ ಅವರನ್ನು ಹೊರತುಪಡಿಸಿ ಭಾರತ ಟೆಸ್ಟ್ ತಂಡದಲ್ಲಿರುವ ಆಟಗಾರರು ದುಲೀಪ್ ಟ್ರೋಫಿ ಆಡುವುದು ಕಡ್ಡಾಯ. ಈ ಮೂಲಕ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.

ಭಾರತೀಯ ಕ್ರಿಕೆಟ್ ಮಂಡಳಿಯ ಈ ಸೂಚನೆ ಬೆನ್ನಲ್ಲೇ ದುಲೀಪ್ ಟ್ರೋಫಿ ಟೂರ್ನಿಯು ದೇಶದಲ್ಲಿ ಚರ್ಚಾ ವಿಷಯವಾಗಿದೆ.  ಅಷ್ಟಕ್ಕೂ ಏನಿದು ದುಲೀಪ್ ಟ್ರೋಫಿ ಎಂಬ ಪ್ರಶ್ನೆ ಮೂಡುವುದು ಸಹಜ. ಈ ಎಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ…

ಏನಿದು ದುಲೀಪ್ ಟ್ರೋಫಿ?

ದುಲೀಪ್ ಟ್ರೋಫಿಯು ಭಾರತದಲ್ಲಿ ಆಡಲಾಗುವ ದೇಶೀಯ ಟೆಸ್ಟ್ ಕ್ರಿಕೆಟ್ ಟೂರ್ನಿ. ಈ ಟೂರ್ನಿಗೆ ಮಾಜಿ ಆಟಗಾರ ದುಲೀಪ್‌ಸಿನ್‌ಜಿ ಅವರ ಹೆಸರನ್ನು ಇಡಲಾಗಿದೆ.

ದುಲೀಪ್ ಟ್ರೋಫಿ ಯಾವಾಗ ಶುರುವಾಯಿತು?

ದುಲೀಪ್ ಟ್ರೋಫಿಯನ್ನು 1961-62 ರಲ್ಲಿ ಮೊದಲ ಬಾರಿಗೆ ಆಡಿಸಲಾಗಿತ್ತು. ಈ ಪಂದ್ಯಾವಳಿಯಲ್ಲಿ ಭಾರತದ ವಿವಿಧ ಭೌಗೋಳಿಕ ವಲಯಗಳನ್ನು ಪ್ರತಿನಿಧಿಸುವ ತಂಡಗಳು ಕಣಕ್ಕಿಳಿಯುತ್ತವೆ.

ದುಲೀಪ್ ಟ್ರೋಫಿಯಲ್ಲಿ ಕಣಕ್ಕಿಳಿಯುವ ತಂಡಗಳಾವುವು?

ಈ ಟೂರ್ನಿಯಲ್ಲಿ ಒಟ್ಟು 6 ವಲಯ ತಂಡಗಳು ಕಣಕ್ಕಿಳಿಯುತ್ತವೆ. ಇಲ್ಲಿ ಆಯಾ ವಲಯಗಳನ್ನು ಆಯಾ ಭಾಗದ ರಾಜ್ಯಗಳ ಆಟಗಾರರು ಪ್ರತಿನಿಧಿಸುತ್ತಾರೆ.

  • ಕೇಂದ್ರ ವಲಯ
  • ದಕ್ಷಿಣ ವಲಯ
  • ಪೂರ್ವ ವಲಯ
  • ಪಶ್ಚಿಮ ವಲಯ
  • ಉತ್ತರ ವಲಯ
  • ಈಶಾನ್ಯ ವಲಯ

ದುಲೀಪ್ ಟ್ರೋಫಿಯ ವಲಯ ರಾಜ್ಯಗಳಾವುವು?

  • ಉತ್ತರ ವಲಯ : ಚಂಡೀಗಢ, ದೆಹಲಿ, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಪಂಜಾಬ್ ಮತ್ತು ಸರ್ವೀಸಸ್ ತಂಡಗಳು.
  • ದಕ್ಷಿಣ ವಲಯ : ಆಂಧ್ರಪ್ರದೇಶ, ಗೋವಾ, ಹೈದರಾಬಾದ್ ಕರ್ನಾಟಕ, ಕೇರಳ, ಪಾಂಡಿಚೇರಿ ಮತ್ತು ತಮಿಳುನಾಡು.
  • ಕೇಂದ್ರ ವಲಯ : ಛತ್ತೀಸ್‌ಗಢ, ಮಧ್ಯಪ್ರದೇಶ, ರೈಲ್ವೆ, ರಾಜಸ್ಥಾನ, ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ವಿದರ್ಭ.
  • ಪೂರ್ವ ವಲಯ : ಅಸ್ಸಾಂ, ಬಿಹಾರ, ಬಂಗಾಳ, ಜಾರ್ಖಂಡ್, ಒಡಿಶಾ ಮತ್ತು ತ್ರಿಪುರಾ.
  • ಈಶಾನ್ಯ ವಲಯ : ಅರುಣಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್ ಮತ್ತು ಸಿಕ್ಕಿಂ.
  • ಪಶ್ಚಿಮ ವಲಯ : ಬರೋಡಾ, ಗುಜರಾತ್, ಮಹಾರಾಷ್ಟ್ರ, ಮುಂಬೈ ಮತ್ತು ಸೌರಾಷ್ಟ್ರ.

ಈ ರಾಜ್ಯಗಳ ಆಟಗಾರರು ಆಯಾ ವಲಯಗಳ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಹಿಂದೆ ಈ ವಲಯಗಳ ತಂಡಗಳನ್ನು ಎಲೈಟ್​​ ಹಾಗೂ ಇಂಡಿಯಾ ರೆಡ್, ಬ್ಲೂ, ಗ್ರೀನ್… ಹೆಸರಿನಲ್ಲಿ ಕಣಕ್ಕಿಳಿಸಲಾಗಿತ್ತು. ಹಾಗೆಯೇ ಈ ಬಾರಿ ಈ ವಲಯಗಳಿಗೆ A,B,C,D,E,F  ಎಂದು ಹೆಸರಿಸಡಲಾಗುತ್ತದೆ. ಅದರಂತೆ ಇಂಡಿಯಾ ಎ, ಇಂಡಿಯಾ ಬಿ, ಇಂಡಿಯಾ ಸಿ, ಇಂಡಿಯಾ ಡಿ, ಇಂಡಿಯಾ ಇ ಮತ್ತು ಇಂಡಿಯಾ ಎಫ್ ತಂಡಗಳು ಕಣಕ್ಕಿಳಿಯಲಿವೆ.

ದುಲೀಪ್ ಟ್ರೋಫಿಯ ಹಿಂದಿನ ವಿಜೇತರು ಯಾರು?

  • 1961–62 – ಪಶ್ಚಿಮ ವಲಯ
  • 1962–63 – ಪಶ್ಚಿಮ ವಲಯ
  • 1963–64 – ಪಶ್ಚಿಮ ವಲಯ ಮತ್ತು ದಕ್ಷಿಣ ವಲಯ (ಜಂಟಿ ವಿಜೇತರು)
  • 1964–65 – ಪಶ್ಚಿಮ ವಲಯ
  • 1965–66 – ದಕ್ಷಿಣ ವಲಯ
  • 1966–67 – ದಕ್ಷಿಣ ವಲಯ
  • 1967–68 – ದಕ್ಷಿಣ ವಲಯ
  • 1968–69 – ಪಶ್ಚಿಮ ವಲಯ
  • 1969–70 – ಪಶ್ಚಿಮ ವಲಯ
  • 1970–71 – ದಕ್ಷಿಣ ವಲಯ
  • 1971–72 – ಕೇಂದ್ರ ವಲಯ
  • 1972–73 – ಪಶ್ಚಿಮ ವಲಯ
  • 1973–74 – ಕೇಂದ್ರ ವಲಯ
  • 1974–75 – ದಕ್ಷಿಣ ವಲಯ
  • 1975–76 – ದಕ್ಷಿಣ ವಲಯ
  • 1976–77 – ಪಶ್ಚಿಮ ವಲಯ
  • 1977–78 – ಪಶ್ಚಿಮ ವಲಯ
  • 1978–79 – ಉತ್ತರ ವಲಯ
  • 1979–80 – ಉತ್ತರ ವಲಯ
  • 1980–81 – ಪಶ್ಚಿಮ ವಲಯ
  • 1981–82 – ಪಶ್ಚಿಮ ವಲಯ
  • 1982–83 – ಉತ್ತರ ವಲಯ
  • 1983–84 – ಉತ್ತರ ವಲಯ
  • 1984–85 – ದಕ್ಷಿಣ ವಲಯ
  • 1985–86 – ಪಶ್ಚಿಮ ವಲಯ
  • 1986–87 – ದಕ್ಷಿಣ ವಲಯ
  • 1987–88 – ಉತ್ತರ ವಲಯ
  • 1988–89 – ಉತ್ತರ ವಲಯ ಮತ್ತು ಪಶ್ಚಿಮ ವಲಯ (ಜಂಟಿ ವಿಜೇತರು)
  • 1989–90 – ದಕ್ಷಿಣ ವಲಯ
  • 1990–91 – ಉತ್ತರ ವಲಯ
  • 1991–92 – ಉತ್ತರ ವಲಯ
  • 1992–93 – ಉತ್ತರ ವಲಯ
  • 1993–94 – ಉತ್ತರ ವಲಯ
  • 1994–95 – ಉತ್ತರ ವಲಯ
  • 1995–96 – ದಕ್ಷಿಣ ವಲಯ
  • 1996–97 – ಕೇಂದ್ರ ವಲಯ
  • 1997–98 – ಕೇಂದ್ರ ವಲಯ ಮತ್ತು ಪಶ್ಚಿಮ ವಲಯ (ಜಂಟಿ ವಿಜೇತರು)
  • 1998–99 – ಕೇಂದ್ರ ವಲಯ
  • 1999–2000 – ಉತ್ತರ ವಲಯ
  • 2000–01 – ಉತ್ತರ ವಲಯ
  • 2001–02 – ಪಶ್ಚಿಮ ವಲಯ
  • 2002–03 – ಎಲೈಟ್ ಸಿ
  • 2003–04 – ಉತ್ತರ ವಲಯ
  • 2004–05 – ಕೇಂದ್ರ ವಲಯ
  • 2005–06 – ಪಶ್ಚಿಮ ವಲಯ
  • 2006–07 – ಉತ್ತರ ವಲಯ
  • 2007–08 – ಉತ್ತರ ವಲಯ
  • 2008–09 – ಪಶ್ಚಿಮ ವಲಯ
  • 2009–10 – ಪಶ್ಚಿಮ ವಲಯ
  • 2010–11 – ದಕ್ಷಿಣ ವಲಯ
  • 2011–12 – ಪೂರ್ವ ವಲಯ
  • 2012–13 – ಪೂರ್ವ ವಲಯ
  • 2013–14 – ಉತ್ತರ ವಲಯ ಮತ್ತು ದಕ್ಷಿಣ ವಲಯ (ಜಂಟಿ ವಿಜೇತರು)
  • 2014–15 – ಕೇಂದ್ರ ವಲಯ
  • 2016–17 – ಇಂಡಿಯಾ ಬ್ಲೂ
  • 2017–18 – ಇಂಡಿಯಾ ರೆಡ್
  • 2018–19 – ಇಂಡಿಯಾ ಬ್ಲೂ
  • 2019–20 – ಇಂಡಿಯಾ ರೆಡ್
  • 2022–23 – ಪಶ್ಚಿಮ ವಲಯ
  • 2023 – ದಕ್ಷಿಣ ವಲಯ

Published On - 10:49 am, Tue, 13 August 24

Follow Us
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಕೃಷ್ಣಾ ನದಿಗೆ ಹರಿದುಬಂತು 60,000 ಕ್ಯೂಸೆಕ್ ನೀರು
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ಪ್ರಧಾನಿ ಮನೆ ಮುಂದೆ ಕರ್ನಾಟಕದ ಸಿಎಂ ಡಿ.ಕೆ. ಶಿವಕುಮಾರ್ ಕೂಡ ಧರಣಿ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ