AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಎಷ್ಟು ರನ್​ಗಳಿಸಿ ಡಿಕ್ಲೇರ್ ಮಾಡಬೇಕು? ಇಲ್ಲಿದೆ ಮಾಹಿತಿ

England vs India, 1st Test: ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 471 ರನ್​ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಇಂಗ್ಲೆಂಡ್ 465 ರನ್​ಗಳಿಸಿ ಆಲೌಟ್ ಆಗಿದೆ. ಇದೀಗ 6 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಮೂರನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 90 ರನ್ ಕಲೆಹಾಕಿದೆ.

IND vs ENG: ಟೀಮ್ ಇಂಡಿಯಾ ಎಷ್ಟು ರನ್​ಗಳಿಸಿ ಡಿಕ್ಲೇರ್ ಮಾಡಬೇಕು? ಇಲ್ಲಿದೆ ಮಾಹಿತಿ
Ind Vs Eng
ಝಾಹಿರ್ ಯೂಸುಫ್
|

Updated on: Jun 23, 2025 | 12:23 PM

Share

ಭಾರತ ಮತ್ತು ಇಂಗ್ಲೆಂಡ್​ ನಡುವಣ ಮೊದಲ ಟೆಸ್ಟ್ ಪಂದ್ಯವು ನಾಲ್ಕನೇ ದಿನದಾಟಕ್ಕೆ ಕಾಲಿಟ್ಟಿದೆ. ಮೊದಲ ಮೂರು ದಿನದಾಟಗಳಲ್ಲಿ ಉಭಯ ತಂಡಗಳು ಸಮಬಲದ ಪ್ರದರ್ಶನ ನೀಡಿದೆ. ಹೀಗಾಗಿ ನಾಲ್ಕನೇ ದಿನದಾಟವು ನಿರ್ಣಾಯಕ. ಇತ್ತ ಮೂರನೇ ದಿನದಾಟದ ಕೊನೆಯ ಸೆಷನ್​ನಲ್ಲಿ ದ್ವಿತೀಯ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ 2 ವಿಕೆಟ್ ಕಳೆದುಕೊಂಡು 90 ರನ್​ಗಳಿಸಿದೆ.

ನಾಲ್ಕನೇ ದಿನದಾಟದಲ್ಲಿ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (47) ಹಾಗೂ ಶುಭ್​​ಮನ್ ಗಿಲ್ (6) ಇನಿಂಗ್ಸ್ ಮುಂದುವರೆಸಲಿದ್ದಾರೆ. ಅಲ್ಲದೆ ಇಂದು ಭಾರತ ತಂಡವು ಸಂಪೂರ್ಣ ಬ್ಯಾಟಿಂಗ್ ಕಾಯ್ದುಕೊಳ್ಳುವ ಸಾಧ್ಯತೆಯಿದೆ. ಅಂದರೆ 4ನೇ ದಿನದಾಟದಲ್ಲಿ ಟೀಮ್ ಇಂಡಿಯಾ ಡಿಕ್ಲೇರ್ ಘೋಷಿಸುವ ಸಾಧ್ಯತೆಯಿಲ್ಲ. ಏಕೆಂದರೆ ಹೆಡಿಂಗ್ಲೆ ಮೈದಾನವು ಬ್ಯಾಟಿಂಗ್ ಸ್ನೇಹಿ ಪಿಚ್​ ಹೊಂದಿದ್ದು, ಇಲ್ಲಿ ಚೇಸಿಂಗ್ ಮಾಡುವುದು ಸುಲಭ. ಇದಕ್ಕೆ ಸಾಕ್ಷಿ ಈ ಹಿಂದಿನ ಅಂಕಿ ಅಂಶಗಳು.

ಯಶಸ್ವಿ ಚೇಸ್ ಯಾವುದು?

  • ಹೆಡಿಂಗ್ಲೆ ಮೈದಾನದಲ್ಲಿ ಅತ್ಯಧಿಕ ರನ್ ಚೇಸ್ ಮಾಡಿ ಗೆದ್ದಿರುವುದು ಆಸ್ಟ್ರೇಲಿಯಾ ತಂಡ. 1948 ರಲ್ಲಿ ಇಂಗ್ಲೆಂಡ್ ವಿರುದ್ಧ 404 ರನ್​ಗಳ ಗುರಿಯನ್ನು ಬೆನ್ನತ್ತಿ ಆಸೀಸ್ ಪಡೆ ಜಯ ಸಾಧಿಸಿತ್ತು.
  • ಇದಾದ ಬಳಿಕ ಈ ಮೈದಾನದಲ್ಲಿ ಕಂಡು ಬಂದ ಅತ್ಯಂತ ಯಶಸ್ವಿ ಚೇಸಿಂಗ್ ಇಂಗ್ಲೆಂಡ್ ತಂಡದ್ದು. 2019 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ 359 ರನ್​ಗಳನ್ನು ಚೇಸ್ ಮಾಡಿ ಐತಿಹಾಸಿಕ ಗೆಲುವು ದಾಖಲಿಸಿತ್ತು.
  • ಇದಲ್ಲದೆ ಇತ್ತೀಚಿನ ವರ್ಷಗಳ ಅಂಕಿ ಅಂಶಗಳನ್ನು ತೆಗೆದುಕೊಂಡರೆ, 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್​ ನಾಲ್ಕನೇ ಇನಿಂಗ್ಸ್​ನಲ್ಲಿ 251 ರನ್​ ಬಾರಿಸಿ ಗೆಲುವು ದಾಖಲಿಸಿದೆ. ಹಾಗೆಯೇ 2022 ರಲ್ಲಿ ನ್ಯೂಝಿಲೆಂಡ್ ವಿರುದ್ಧ ಇಂಗ್ಲೆಂಡ್ 296 ರನ್​ಗಳ ಗುರಿ ಬೆನ್ನತ್ತುವಲ್ಲಿ ಯಶಸ್ವಿಯಾಗಿದೆ.

ಅಂದರೆ ಹೆಡಿಂಗ್ಲೆ ಮೈದಾನದಲ್ಲಿ ನಾಲ್ಕನೇ ಇನಿಂಗ್ಸ್​ನಲ್ಲಿ 250 ರಿಂದ 350 ರನ್​ಗಳಿಸುವುದು ಕಷ್ಟವೇನಲ್ಲ. ಹೀಗಾಗಿ ಭಾರತ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ ಕನಿಷ್ಠ 400+ ಸ್ಕೋರ್​ಗಳಿಸದೇ ಡಿಕ್ಲೇರ್​ ಘೋಷಿಸುವ ಸಾಧ್ಯತೆಯಿಲ್ಲ.

ಈ ಮೂಲಕ ಇಂಗ್ಲೆಂಡ್​ಗೆ ತಂಡಕ್ಕೆ ಕೊನೆಯ ಇನಿಂಗ್ಸ್​ನಲ್ಲಿ ಕನಿಷ್ಠ 400+ ರನ್​ಗಳ ಗುರಿ ನೀಡಲು ಪ್ಲ್ಯಾನ್ ರೂಪಿಸಲಿದ್ದಾರೆ. ಒಂದು ವೇಳೆ ಟೀಮ್ ಇಂಡಿಯಾ 300ರ ಅಸುಪಾಸಿನಲ್ಲಿ ಆಲೌಟ್ ಆದರೆ, ಇಂಗ್ಲೆಂಡ್ ಚೇಸಿಂಗ್​ಗೆ ಪ್ರಯತ್ನಿಸುವುದು ಖಚಿತ.

ಏಕೆಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಆಕ್ರಮಣಕಾರಿ ರಣತಂತ್ರವನ್ನು ಅಳವಡಿಸಿಕೊಂಡಿರುವ ಇಂಗ್ಲೆಂಡ್ ತಂಡವು ಕಳೆದ ಕೆಲ ವರ್ಷಗಳಿಂದ ಪಂದ್ಯವನ್ನು ಡ್ರಾ ಮಾಡಿಕೊಳ್ಳುವುದಕ್ಕಿಂತ ಮ್ಯಾಚ್ ಗೆಲ್ಲಲು ಪ್ರಯತ್ನಿಸುತ್ತಾ ಬಂದಿದೆ. ಈ ಪ್ರಯತ್ನವು ಹಲವು ಬಾರಿ ಆಂಗ್ಲರ ಕೈ ಹಿಡಿದಿದೆ. ಹೀಗಾಗಿ ಟೀಮ್ ಇಂಡಿಯಾ 300 ರನ್​ಗಳ ಅಸುಪಾಸಿನಲ್ಲಿ ರನ್​ಗಳಿಸಿದರೆ, ಇಂಗ್ಲೆಂಡ್ ಗೆಲುವಿನ ಲೆಕ್ಕಾಚಾರದೊಂದಿಗೆ ಕಣಕ್ಕಿಳಿಯುವುದು ಖಚಿತ.

ಇತ್ತ ಟೀಮ್ ಇಂಡಿಯಾ ಪರ ಮೊದಲ ಇನಿಂಗ್ಸ್​ನಲ್ಲಿ ಜಸ್​ಪ್ರೀತ್ ಬುಮ್ರಾ ಅವರನ್ನು ಹೊರತುಪಡಿಸಿದರೆ, ಉಳಿದ ವೇಗಿಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಪ್ರಸಿದ್ಧ್ ಕೃಷ್ಣ 20 ಓವರ್​ಗಳಲ್ಲಿ 128 ರನ್ ನೀಡಿದರೆ, ಮೊಹಮ್ಮದ್ ಸಿರಾಜ್ 27 ಓವರ್​ಗಳಲ್ಲಿ 122 ರನ್ ಬಿಟ್ಟು ಕೊಟ್ಟಿದ್ದರು. ಹೀಗಾಗಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಡ್ರಾ ಸಾಧಿಸಲು ಅಥವಾ ಗೆಲ್ಲಲು ಬಯಸಿದರೆ, ಕನಿಷ್ಠ 400 ರನ್​ಗಳನ್ನು ಕಲೆಹಾಕಲೇಬೇಕು.

ಇದನ್ನೂ ಓದಿ: MLC 2025: ದಾಖಲೆಯ ರನ್ ಚೇಸ್… ಹೊಸ ಚರಿತ್ರೆ ಬರೆದ ವಾಷಿಂಗ್ಟನ್ ಫ್ರೀಡಂ

ಹೆಡಿಂಗ್ಲೆ ಟೆಸ್ಟ್ ಪಂದ್ಯಗಳ ಯಶಸ್ವಿ ರನ್ ಚೇಸ್‌ಗಳು:

ಶ್ರೇಣಿ ತಂಡ ಗುರಿ ಸ್ಕೋರ್ ಓವರ್‌ಗಳು ರನ್ ರೇಟ್ ಎದುರಾಳಿ ವರ್ಷ
1 ಆಸ್ಟ್ರೇಲಿಯಾ 404 404/3 114.4 3.53 ಇಂಗ್ಲೆಂಡ್ 1948
2 ಇಂಗ್ಲೆಂಡ್ 359 362/9 125.4 2.88 ಆಸ್ಟ್ರೇಲಿಯಾ 2019
3 ವೆಸ್ಟ್ ಇಂಡೀಸ್ 322 322/5 91.2 3.52 ಇಂಗ್ಲೆಂಡ್ 2017
4 ಇಂಗ್ಲೆಂಡ್ 315 315/4 73.2 4.29 ಆಸ್ಟ್ರೇಲಿಯಾ 2001
5 ಇಂಗ್ಲೆಂಡ್ 296 296/3 54.2 5.44 ನ್ಯೂಝಿಲೆಂಡ್ 2022
6 ಇಂಗ್ಲೆಂಡ್ 251 254/7 50.0 5.08 ಆಸ್ಟ್ರೇಲಿಯಾ 2023
7 ಇಂಗ್ಲೆಂಡ್ 219 219/7 80.2 ೨.೭೨ ಪಾಕಿಸ್ತಾನ 1982
8 ಇಂಗ್ಲೆಂಡ್ 184 186/5 52.4 3.53 ಸೌತ್ ಆಫ್ರಿಕಾ 1929
9 ಪಾಕಿಸ್ತಾನ 180 180/7 50.4 3.55 ಆಸ್ಟ್ರೇಲಿಯಾ 2010
10 ವೆಸ್ಟ್ ಇಂಡೀಸ್ 128 131/2 32.3 4.03 ಇಂಗ್ಲೆಂಡ್ 1984
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ