AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಇನ್ನೇನು ಮಾಡಬೇಕು… ಕೆಎಲ್ ರಾಹುಲ್ ಹತಾಶೆಯ ನುಡಿ

KL Rahul: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೆಎಲ್ ರಾಹುಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ 41 ರನ್ ಬಾರಿಸಿದ್ದ ರಾಹುಲ್, ನ್ಯೂಝಿಲೆಂಡ್ ವಿರುದ್ಧ 23 ರನ್​ಗಳ ಕೊಡುಗೆ ನೀಡಿದ್ದರು. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಅಜೇಯ 42 ರನ್ ಬಾರಿಸಿ ಭಾರತ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.

ನಾನು ಇನ್ನೇನು ಮಾಡಬೇಕು... ಕೆಎಲ್ ರಾಹುಲ್ ಹತಾಶೆಯ ನುಡಿ
Kl Rahul
ಝಾಹಿರ್ ಯೂಸುಫ್
|

Updated on:Mar 06, 2025 | 7:28 AM

Share

ಟೀಮ್ ಇಂಡಿಯಾ ಚಾಂಪಿಯನ್ಸ್ ಟ್ರೋಫಿಯ ಫೈನಲ್​ಗೆ ತಲುಪಿದೆ. ಹೀಗೆ ಫೈನಲ್​ಗೇರುವಲ್ಲಿ ಕನ್ನಡಿಗ ಕೆಎಲ್ ರಾಹುಲ್ ಅವರ ಕೊಡುಗೆ ಕೂಡ ಇದೆ. ಈ ಬಾರಿಯ ಟೂರ್ನಿಯಲ್ಲಿ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯುತ್ತಿರುವ ರಾಹುಲ್, ಅಂತಿಮ ಹಂತದಲ್ಲಿ ತಂಡವನ್ನು ಗೆಲುವಿನ ದಡ ಸೇರಿಸುವ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಇದಾಗ್ಯೂ ರಾಹುಲ್ ಅವರ ಪ್ರದರ್ಶನ ಆಗಾಗ್ಗೆ ಚರ್ಚೆಗೀಡಾಗುತ್ತದೆ.

ಈ ಬಗ್ಗೆ ಮಾತನಾಡಿರುವ ಕೆಎಲ್ ರಾಹುಲ್ ತಮ್ಮ ಹತಾಶೆಯನ್ನು ತೆರೆದಿಟ್ಟಿದ್ದಾರೆ. ನಾನು ಟೀಮ್ ಇಂಡಿಯಾಗೆ ಏನು ಮಾಡಬೇಕು ಅದೆಲ್ಲವನ್ನೂ ಮಾಡಿದ್ದೇನೆ. ಇದಾಗ್ಯೂ ಪ್ರತಿ ಬಾರಿ ನನ್ನನ್ನು ಟ್ರೋಲ್ ಮಾಡಲಾಗುತ್ತಿದೆ. ಇದಕ್ಕಿಂತ ನಾನೇನು ಮಾಡಬೇಕು ಎಂದು ರಾಹುಲ್ ಖಾಸಗಿ ಚಾನೆಲ್​ಗೆ ನೀಡಿದ ಸಂದರ್ಶನದಲ್ಲಿ ಪ್ರಶ್ನಿಸಿದ್ದಾರೆ.

ಪ್ರತಿ ಸರಣಿಯಲ್ಲೂ ನಾನು ಉತ್ತಮವಾಗಿ ಆಡಿದ ಬಳಿಕ ಅಥವಾ ಏಕದಿನ ಕ್ರಿಕೆಟ್​ನಿಂದ ಬ್ರೇಕ್ ತೆಗೆದುಕೊಂಡ ಬಳಿಕ, ಇಲ್ಲ ನಾಲ್ಕೈದು ತಿಂಗಳುಗಳ ನಂತರ ಮತ್ತೆ ನಾನು ಏಕದಿನ ಸರಣಿ ಆಡಲು ಮುಂದಾಗುತ್ತಿದ್ದಂತೆ ಅಲ್ಲೊಂದು ಪ್ರಶ್ನೆ ಹುಟ್ಟಿಕೊಂಡಿರುತ್ತದೆ. ರಾಹುಲ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುತ್ತಾನಾ? ಎಂಬುದು.

ಇದನ್ನೂ ಓದಿ
Image
ವಿರಾಟ್ ಕೊಹ್ಲಿಗೆ 100 ಕೋಟಿ ರೂ: ಶುಭ್​ಮನ್ ಗಿಲ್​ಗೆ ಎಷ್ಟು?
Image
VIDEO: ಅಳುತ್ತಿದ್ದ ಅಭಿಮಾನಿಯನ್ನು ಸಮಾಧಾನ ಮಾಡಿದ ಕೆಎಲ್ ರಾಹುಲ್
Image
ನಾನು ಹೊಡೀತಿದ್ದೆ ಅಲ್ವಾ... ವಿರಾಟ್ ಕೊಹ್ಲಿ ಮುಂದೆ ಕೆಎಲ್ ರಾಹುಲ್ ಹತಾಶೆ
Image
Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

2020 ರಿಂದ, ನಾನು 5ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದೇನೆ. ಈ ಕ್ರಮಾಂಕದಲ್ಲಿ ನಾನು ಆಡುತ್ತಿದ್ದೆ ಎಂಬುದನ್ನು ಸಹ ಜನರು ಮರೆತುಬಿಡುತ್ತಾರೆ. ಪ್ರತಿ ಬಾರಿ ನಾನು ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳುತ್ತಾನಾ ಎಂಬ ಪ್ರಶ್ನೆ ಹುಟ್ಟಿಕೊಂಡಾಗ, ನಾನು ಇನ್ನೇನು ಮಾಡಬೇಕು ಎಂದು ನನ್ನನ್ನೇ ನಾನು ಪ್ರಶ್ನಿಸಿದ್ದೇನೆ.

ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹೇಳಿದಂತೆ ನಾನು ಆಡಿದ್ದೇನೆ ಮತ್ತು ನಾನು ಉತ್ತಮ ಪ್ರದರ್ಶನ ನೀಡಿದ್ದೇನೆ. ಅವರು ಯಾವ ಕ್ರಮಾಂಕದಲ್ಲಿ ಆಡಬೇಕೆಂದು ತಿಳಿಸಿದ್ದಾರೊ ಅದೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದೇನೆ. ಇದಾಗ್ಯೂ ಪ್ಲೇಯಿಂಗ್ ಇಲೆವೆನ್​ನಲ್ಲಿ ನನ್ನ ಸ್ಥಾನದ ಬಗ್ಗೆ ಪ್ರಶ್ನೆ ಮೂಡಿದಾಗ, ನಿಜವಾಗಲೂ ನಾನು ಇನ್ನೇನು ಮಾಡಬೇಕು ಎಂದೆನಿಸುತ್ತದೆ ಎಂದು ಕೆಎಲ್ ರಾಹುಲ್ ಹತಾಶೆ ವ್ಯಕ್ತಪಡಿಸಿದ್ದಾರೆ.

ಅಂದಹಾಗೆ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೆಎಲ್ ರಾಹುಲ್ ಅವರನ್ನು 5 ಕ್ರಮಾಂಕದಲ್ಲಿ ಅಲ್ಲ. ಬದಲಾಗಿ 6ನೇ ಕ್ರಮಾಂಕದಲ್ಲಿ ಆಡಿಸಲಾಗುತ್ತಿದೆ. ಅಂದರೆ ಈ ಹಿಂದೆ ಆರಂಭಿಕನಾಗಿ ಕಣಕ್ಕಿಳಿಯುತ್ತಿದ್ದ ರಾಹುಲ್ ಅವರ ಸ್ಥಾನ ಇದೀಗ 6ನೇ ಕ್ರಮಾಂಕಕ್ಕೆ ಬಂದು ನಿಂತಿದೆ. ಇದಾಗ್ಯೂ ಅವರ ಪ್ರದರ್ಶನವೇನು ಕುಂಠಿತವಾಗಿಲ್ಲ.

ಇದನ್ನೂ ಓದಿ: Virat Kohli: ಮಾಸ್ಟರ್ ಚೇಸ್ ಮಾಸ್ಟರ್​ನ ವಿಶ್ವ ದಾಖಲೆ

ಬಾಂಗ್ಲಾದೇಶ್ ವಿರುದ್ಧದ ಮೊದಲ ಪಂದ್ಯದಲ್ಲಿ ರಾಹುಲ್ 41 ರನ್ ಬಾರಿಸಿದ್ದರು. ಇನ್ನು ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಅವರು ಬ್ಯಾಟಿಂಗ್​ಗೆ ಇಳಿದಿರಲಿಲ್ಲ. ನ್ಯೂಝಿಲೆಂಡ್ ವಿರುದ್ಧದ ಮ್ಯಾಚ್​ನಲ್ಲಿ 23 ರನ್​ಗಳ ಕೊಡುಗೆ ನೀಡಿದ್ದರು. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯಕ ಪಂದ್ಯದಲ್ಲಿ ಅಜೇಯ 42 ರನ್ ಬಾರಿಸುವ ಮೂಲಕ ಕೆಎಲ್ ರಾಹುಲ್ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದ್ದರು. ಇದಾಗ್ಯೂ ಟೀಮ್ ಇಂಡಿಯಾದಲ್ಲಿ ಕೆಎಲ್ ರಾಹುಲ್ ಅವರ ಸ್ಥಾನದ ಬಗ್ಗೆ ಪ್ರಶ್ನೆಗಳು ಮೂಡುತ್ತಿದ್ದರೆ, ಅವರು ಇನ್ನೇನು ಮಾಡಬೇಕೆಂಬುದೇ ಪ್ರಶ್ನೆ.

Published On - 6:55 am, Thu, 6 March 25

‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು
‘ದುಬೈ’ನಲ್ಲಿ ಸಿನಿಮಾ ಮುಹೂರ್ತ: ಕನಸು ಹಂಚಿಕೊಂಡ ಆರ್ ಚಂದ್ರು
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಬೆಂಗಳೂರು ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟದ ರಹಸ್ಯ ಬಿಚ್ಚಿಟ್ಟ RTO
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಈಗ ನನಗೆ ಜ್ಞಾನೋದಯವಾಗಿದೆ, ಇನ್ಮೇಲೆ ನಾನು ಕೊಡೋದೆ ಬೇರೆ: ಆರ್ ಚಂದ್ರು
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಲಕ್ಕುಂಡಿಯಲ್ಲಿ ನಿಧಿ ರಹಸ್ಯ: ಬಸವಣ್ಣ ದೇವಸ್ಥಾನದಲ್ಲಿ ಸರ್ಪದ ಪೊರೆ ಪತ್ತೆ
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್​​ನಲ್ಲಿ ಗೊಂದಲ: ಆಗಿದ್ದೇನು?
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಕಾಂಗ್ರೆಸ್ ಭವನಕ್ಕೆ ಕೋಟಿ ಕೋಟಿ ಮೌಲ್ಯದ ಸಿಎ ಸೈಟ್ ಮೂರ್ಕಾಸಿಗೆ
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಮಲ್ಲನ ಮ್ಯಾಜಿಕ್​ಗೆ ಕರಗಿದ ಸಾಲ್ಟ್
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಎರಡನೇ ಮದುವೆ ಮಾಡಿಕೊಳ್ಳುತ್ತಿದ್ದ ಪತಿಗೆ ಮೊದಲ ಪತ್ನಿ ಶಾಕ್: ವಿಡಿಯೋ ನೋಡಿ
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಹಾಸನ: ಮಹಿಳೆ ರೂಮ್​ಗೆ ನುಗ್ಗಿ ಪತಿ ಸಂಬಂಧಿಕರ ಗಲಾಟೆ!
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ
ಜಿಟಿಡಿ ವಿರುದ್ಧ ಹೆಚ್​​ಡಿಕೆ ಗರಂ: ಅವರು ನಮ್ಮೊಂದಿಗಿಲ್ಲ ಎಂದ ಕೇಂದ್ರ ಸಚಿವ