AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಟ್ ರನ್ ರೇಟ್ ಸಮಗೊಂಡರೆ ಸೆಮಿಫೈನಲ್​ಗೇರುವುದು ಯಾರು?

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ದ್ವಿತೀಯ ಸುತ್ತಿನಲ್ಲೂ ಗ್ರೂಪ್​ಗಳಲ್ಲಿರುವ ತಂಡಗಳು ಪರಸ್ಪರ ಮುಖಾಮುಖಿಯಾಗಲಿದ್ದಾರೆ. ಈ ಪಂದ್ಯಗಳಲ್ಲಿ ಗೆದ್ದು ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಪಡೆಯುವ ತಂಡಗಳು ಸೆಮಿಫೈನಲ್​ಗೇರಲಿದ್ದಾರೆ.

ನೆಟ್ ರನ್ ರೇಟ್ ಸಮಗೊಂಡರೆ ಸೆಮಿಫೈನಲ್​ಗೇರುವುದು ಯಾರು?
T20 World Cup 2026
ಝಾಹಿರ್ ಯೂಸುಫ್
|

Updated on: Feb 22, 2026 | 9:31 AM

Share

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನ ಮೊದಲ ಪಂದ್ಯವೇ ಮಳೆಗೆ ಆಹುತಿಯಾಗಿದೆ. ಕೊಲಂಬೊದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪಾಕಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಪಂದ್ಯವನ್ನು ರದ್ದು ಮಾಡಲಾಗಿದೆ. ಇನ್ನು ಪಂದ್ಯ ರದ್ದಾಗಿರುವ ಕಾರಣ ಉಭಯ ತಂಡಗಳಿಗೆ ತಲಾ ಒಂದೊಂದು ಅಂಕಗಳನ್ನು ಹಂಚಲಾಗಿದೆ.

ಇತ್ತ ಉಭಯ ತಂಡಗಳು ಒಂದೊಂದು ಅಂಕ ಪಡೆದಿರುವ ಕಾರಣ ಮುಂದಿನ ಎರಡು ಮ್ಯಾಚ್​ಗಳಲ್ಲಿ ಗೆಲ್ಲುವ ಮೂಲಕ ಸೆಮಿಫೈನಲ್​ಗೇರಬಹುದು. ಒಂದು ವೇಳೆ ಗ್ರೂಪ್ ಮುಂದಿನ ಪಂದ್ಯಗಳು ಕೂಡ ಮಳೆಗೆ ಆಹುತಿಯಾಗಿ ಎಲ್ಲಾ ತಂಡಗಳು ಸಮವಾದ ಅಂಕಳನ್ನು ಪಡೆದರೆ ಯಾರಿಗೆ ಚಾನ್ಸ್ ಎಂಬ ಪ್ರಶ್ನೆ ಮೂಡುವುದು ಸಹಜ.

ಈ ಪ್ರಶ್ನೆಗೆ ಸಾಮಾನ್ಯವಾಗಿ ಸಿಗುವ ಉತ್ತರ ನೆಟ್ ರನ್ ರೇಟ್. ಅಂದರೆ ಅಂಕ ಪಟ್ಟಿಯಲ್ಲಿ ಎರಡಕ್ಕಿಂತ ಹೆಚ್ಚಿನ ತಂಡಗಳು ಸಮನಾದ ಅಂಕಗಳನ್ನು ಪಡೆದುಕೊಂಡಿದ್ದರೆ ಯಾವ ತಂಡ ಹೆಚ್ಚಿನ ನೆಟ್ ರನ್ ರೇಟ್ ಹೊಂದಿರುತ್ತವೆಯೋ ಆ ತಂಡವು ಮುಂದಿನ ಹಂತಕ್ಕೇರಲಿದೆ.  ಒಂದು ವೇಳೆ ಅಂಕಗಳೊಂದಿಗೆ ನೆಟ್ ರನ್ ರೇಟ್ ಕೂಡ ಸಮವಾಗಿದ್ದರೆ? ಈ ಪ್ರಶ್ನೆಗೆ ಉತ್ತರ ಈ ಕೆಳಗಿನಂತಿದೆ…

  • ಗೆಲುವಿನ ಲೆಕ್ಕಾಚಾರ: ಪಾಯಿಂಟ್ಸ್ ಮತ್ತು ನೆಟ್ ರನ್ ರೇಟ್ ಎರಡೂ ಸಮವಾಗಿದ್ದಾಗ, ಟೂರ್ನಮೆಂಟ್‌ನಲ್ಲಿ ಯಾರು ಹೆಚ್ಚು ಪಂದ್ಯಗಳನ್ನು ಗೆದ್ದಿದ್ದಾರೋ ಆ ತಂಡಕ್ಕೆ ಮೊದಲ ಆದ್ಯತೆ ನೀಡಲಾಗುತ್ತದೆ.
  • ಹೆಡ್-ಟು-ಹೆಡ್: ಟೂರ್ನಿಯಲ್ಲಿ ಉಭಯ ತಂಡಗಳ ಗೆಲುವು ಕೂಡ ಸಮನಾಗಿದ್ದರೆ, ಟೈ ಆಗಿರುವ ಆ ಎರಡು ತಂಡಗಳು ಲೀಗ್ ಹಂತದಲ್ಲಿ ಪರಸ್ಪರ ಮುಖಾಮುಖಿಯಾದಾಗ ಯಾರು ಹೆಚ್ಚು ಗೆದ್ದಿದ್ದರು ಎಂಬುದನ್ನು ನೋಡಲಾಗುತ್ತದೆ. ಹೀಗೆ ಪರಸ್ಪರ ಮುಖಾಮುಖಿಯಲ್ಲಿ ಹೆಚ್ಚು ಗೆದ್ದಿರುವ ತಂಡ ಮುಂದಿನ ಹಂತಕ್ಕೇರುತ್ತದೆ.
  • ಐಸಿಸಿ ಶ್ರೇಯಾಂಕ: ಅಂತರಾಷ್ಟ್ರೀಯ ಪಂದ್ಯಗಳಲ್ಲಿ (ವಿಶ್ವಕಪ್‌ನಂತಹ ಟೂರ್ನಿಗಳಲ್ಲಿ), ಎಲ್ಲವೂ ಸಮನಾದಾಗ ಪಂದ್ಯಾವಳಿ ಆರಂಭಕ್ಕೂ ಮೊದಲು ಇದ್ದ ICC ಟೀಮ್ ರ‍್ಯಾಂಕಿಂಗ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂದರೆ ಗೆಲುವು, ನೆಟ್ ರನ್ ರೇಟ್, ಹೆಡ್ ಟು ಹೆಡ್ ಎಲ್ಲವೂ ಸಮವಾಗಿದ್ದರೆ ಈ ವೇಳೆ ಈ ಐಸಿಸಿ ರ್ಯಾಂಕಿಂಗ್​ನಲ್ಲಿ ಯಾವ ತಂಡ ಮೇಲಿರುತ್ತದೆಯೋ ಆ ತಂಡ ಮುಂದಿನ ಹಂತಕ್ಕೇರಲಿದೆ.
  • ಹೆಚ್ಚು ವಿಕೆಟ್ ಲೆಕ್ಕಾಚಾರ: ಕೆಲವು ಟೂರ್ನಿಗಳಲ್ಲಿ (ಉದಾಹರಣೆಗೆ IPL), ಮೇಲಿನ ಹಂತಗಳಲ್ಲೂ ಫಲಿತಾಂಶ ಸಿಗದಿದ್ದರೆ, ಇಡೀ ಟೂರ್ನಿಯಲ್ಲಿ ಯಾವ ತಂಡ ಅತಿ ಹೆಚ್ಚು ವಿಕೆಟ್‌ಗಳನ್ನು ಕಬಳಿಸಿದೆ ಎಂದು ನೋಡಲಾಗುತ್ತದೆ. ಈ ಮೂಲಕ ಮುಂದಿನ ಹಂತಕ್ಕೇರುವುದನ್ನು ನಿರ್ಧರಿಸಲಾಗುತ್ತದೆ.

ಅಂದರೆ ಐಸಿಸಿ ಟೂರ್ನಿಗಳಲ್ಲಿ ಪಾಯಿಂಟ್ಸ್, ಗೆಲುವು, ನೆಟ್ ರನ್ ರೇಟ್, ಹೆಡ್ ಟು ಹೆಡ್ ಎಲ್ಲವೂ ಸಮವಾಗಿದ್ದರೂ ತಂಡಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಲು ಕೊನೆಗೆ ಐಸಿಸಿ ತಂಡಗಳ ರ್ಯಾಂಕಿಂಗ್ ಅನ್ನು ಬಳಸಲಾಗುತ್ತದೆ. ಹೀಗಾಗಿ ಪ್ರಸ್ತುತ ಟೂರ್ನಿಯಲ್ಲಿ ತಂಡಗಳ ಅಂಕಗಳು, ಗೆಲುವು, ನೆಟ್ ರನ್​ ರೇಟ್ ಎಲ್ಲವೂ ಸಮವಾದರೂ ಸೂಪರ್-8 ಸುತ್ತಿನಿಂದ 4 ತಂಡಗಳು ಮುಂದಿನ ಹಂತಕ್ಕೇರುವುದು ಖಚಿತ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ