AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇವೆಲ್ಲವೂ ಆಟದ ಭಾಗ… ಕೆಎಲ್ ರಾಹುಲ್ ತಿರುಗೇಟು

India vs England 3rd Test: ಲಂಡನ್​ನ ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪ್ರಥಮ ಇನಿಂಗ್ಸ್​ನಲ್ಲಿ 387 ರನ್​ ಕಲೆಹಾಕಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಕೂಡ 387 ರನ್​ಗಳಿಸಿ ಆಲೌಟ್ ಆಗಿದೆ. ಅದರಂತೆ ಇದೀಗ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್ ಆರಂಭಿಸಿದೆ.

IND vs ENG: ಇವೆಲ್ಲವೂ ಆಟದ ಭಾಗ... ಕೆಎಲ್ ರಾಹುಲ್ ತಿರುಗೇಟು
KL Rahul
ಝಾಹಿರ್ ಯೂಸುಫ್
|

Updated on: Jul 13, 2025 | 11:23 AM

Share

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದ ಮೂರನೇ ದಿನದಾಟವು ನಾಟಕೀಯ ಕ್ಷಣಗಳಿಗೆ ಸಾಕ್ಷಿಯಾಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ ಜೋ ರೂಟ್ (104) ಅವರ ಶತಕದ ನೆರವಿನೊಂದಿಗೆ 387 ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100) ಶತಕ ಸಿಡಿಸಿದ್ದರು. ಈ ಶತಕದ ಸಹಾಯದೊಂದಿಗೆ ಭಾರತ ತಂಡ ಕೂಡ ಪ್ರಥಮ ಇನಿಂಗ್ಸ್​ನಲ್ಲಿ 387 ರನ್​ಗಳಿಗೆ ಆಲೌಟ್ ಆಗಿದ್ದರು.

ಭಾರತ ತಂಡ ಆಲೌಟ್ ಆದ ಬೆನ್ನಲ್ಲೇ ಇಂಗ್ಲೆಂಡ್ ದ್ವಿತೀಯ ಇನಿಂಗ್ಸ್ ಆರಂಭಿಸಿದ್ದರು. ಆದರೆ ಮೂರನೇ ದಿನದಾಟ ಮುಗಿಯಲು ಕೇವಲ 7 ನಿಮಿಷಗಳು ಬಾಕಿಯಿತ್ತು. ಇತ್ತ ಟೀಮ್ ಇಂಡಿಯಾ ಬೌಲರ್​ಗಳು ಅಂತಿಮ ನಿಮಿಷಗಳ ಮೂಲಕ ಹೆಚ್ಚಿನ ಓವರ್​ಗಳನ್ನು ಎಸೆಯಲು ಪ್ಲ್ಯಾನ್ ರೂಪಿಸಿದರೆ, ಅತ್ತ ಇಂಗ್ಲೆಂಡ್ ಬ್ಯಾಟರ್​ಗಳು ಸಮಯ ವ್ಯರ್ಥ ಮಾಡಲು ಮುಂದಾಗಿದ್ದರು.

ಅದರಂತೆ ದ್ವಿತೀಯ ಇನಿಂಗ್ಸ್​ನ 2ನೇ ಓವರ್​ನಲ್ಲಿ ಇಂಗ್ಲೆಂಡ್​ನ ಆರಂಭಿಕ ದಾಂಡಿಗ ಝಾಕ್ ಕ್ರಾಲಿ ಸಮಯ ವ್ಯರ್ಥಗೊಳಿಸುವ ಕಾಯಕಕ್ಕೆ ಕೈ ಹಾಕಿದರು. ಬುಮ್ರಾ 3ನೇ ಎಸೆತ ಎಸೆಯಲು  ಬರುತ್ತಿದ್ದಂತೆ ಸೈಡ್ ಸ್ಕ್ರೀನ್ ತಗಾದೆ ತೆಗೆಯುವ ಮೂಲಕ ಬೌಲಿಂಗ್ ಮಾಡುವುದನ್ನು ತಡೆದರು. ಇದು ಕೇವಲ ನೆಪ ಎಂಬುದು ಟೀಮ್ ಇಂಡಿಯಾ ಆಟಗಾರರಿಗೆ ಸ್ಪಷ್ಟವಾಗಿತ್ತು.

ಇತ್ತ ಜಸ್​ಪ್ರೀತ್ ಬುಮ್ರಾ ತಮ್ಮ ಅಸಹಾಯಕತೆ ತೋರ್ಪಡಿಸಿದರೆ, ಅತ್ತ ಮೊಹಮ್ಮದ್ ಸಿರಾಜ್ ಇಂಗ್ಲೆಂಡ್ ಬ್ಯಾಟರ್​ಗಳು ಗುರಿಯಾಗಿಸಿ ಅದೇನೋ ಹೇಳಿದರು. ಇದೇ ವೇಳೆ ಸ್ಲಿಪ್ ಕಡೆಯಿಂದ ಮುನ್ನುಗ್ಗಿ ಬಂದ ಶುಭ್​ಮನ್ ಗಿಲ್ ಇಂಗ್ಲೆಂಡ್ ಬ್ಯಾಟರ್​ಗಳ ಚಳಿ ಬಿಡಿಸಿದರು. ಇದಾಗಿ ಐದನೇ ಎಸೆತವನ್ನು ರಕ್ಷಣಾತ್ಮಕವಾಗಿ ಆಡಿದ ಝಾಕ್ ಕ್ರಾಲಿ ಕ್ರೀಸ್​ನಿಂದ ಹೊರಗೆ ನಿಂತು ಬೆರಳಿಗೆ ನೋವಾಗುತ್ತಿದೆ ಎಂದು ನಾಟಕ ಮಾಡಲಾರಂಭಿಸಿದ್ದಾರೆ.

ಇದರಿಂದ ಕೆರಳಿದ ಟೀಮ್ ಇಂಡಿಯಾ ಆಟಗಾರರು ಕ್ರಾಲಿಯ ಈ ನಾಟಕವನ್ನು ಚಪ್ಪಾಳೆ ತಟ್ಟುತ್ತಾ ಗೇಲಿ ಮಾಡಿದರು. ಇದೇ ವೇಳೆ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಆಗಮಿಸಿ ನಾಟಕ ಸಾಕು ಆಡ್ರೊ ಎಂಬಾರ್ಥದಲ್ಲಿ ಕ್ರಾಲಿ ಜೊತೆ ವಾಗ್ವಾದಕ್ಕಿಳಿದರು. ಇತ್ತ ಕಡೆಯಿದ್ದ ಬೆನ್ ಡಕೆಟ್ ಕೂಡ ಗಿಲ್​ ಜೊತೆ ಮಾತಿನ ಚಕಮಕಿಗೆ ಇಳಿದರು.  ಇದೇ ವೇಳೆ ಮಧ್ಯ ಪ್ರವೇಶಿಸಿದ ಅಂಪೈರ್ ಪಂದ್ಯವನ್ನು ಮುಂದುವರೆಸುವಂತೆ ಕೋರಿದರು.

ಇತ್ತ ಸಮಯ ವ್ಯರ್ಥ ಮಾಡುವ ಮೂಲಕ ಇಂಗ್ಲೆಂಡ್ ಬ್ಯಾಟರ್​ಗಳು ಪಂದ್ಯವನ್ನು 2 ಓವರ್​ಗಳಿಗೆ ಸೀಮಿತಗೊಳಿಸುವಲ್ಲಿ ಯಶಸ್ವಿಯಾದರು. ಅದರಂತೆ ಮೂರನೇ ದಿನದಾಟದ ಅಂತ್ಯಕ್ಕೆ ಇಂಗ್ಲೆಂಡ್ ವಿಕೆಟ್​ ನಷ್ಟವಿಲ್ಲದೆ 2 ರನ್​ಗಳಿಸಿದೆ.

ಇಂಡಿಯಾ-ಇಂಗ್ಲೆಂಡ್ ಲಾಸ್ಟ್ ಓವರ್ ಡ್ರಾಮಾ:

ಕೆಎಲ್ ರಾಹುಲ್ ತಿರುಗೇಟು:

ಮೂರನೇ ದಿನದಾಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಕೆಎಲ್ ರಾಹುಲ್ ಅವರಿಗೆ ಟೀಮ್ ಇಂಡಿಯಾ ಆಟಗಾರರ ವರ್ತನೆ ಬಗ್ಗೆ ಆಂಗ್ಲ ಪತ್ರಕರ್ತರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಈ ಪ್ರಶ್ನೆಗೆ, ಇದೆಲ್ಲವೂ ಆಟದ ಒಂದು ಭಾಗ. ಇಂಗ್ಲೆಂಡ್ ಬ್ಯಾಟರ್​ಗಳು ಉದ್ದೇಶ ಏನಾಗಿತ್ತು ಎಂಬುದು ನಮಗೆ ಚೆನ್ನಾಗಿ ಅರ್ಥವಾಗಿತ್ತು ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಒಂದು ಸೆಂಚುರಿಯೊಂದಿಗೆ 6 ಭರ್ಜರಿ ದಾಖಲೆ ಬರೆದ ಕೆಎಲ್ ರಾಹುಲ್

ಈ ಮೂಲಕ ಟೀಮ್ ಇಂಡಿಯಾ ಆಟಗಾರರು ಸುಖಾಸುಮ್ಮನೆ ಜಗಳಕ್ಕೆ ಇಳಿದಿಲ್ಲ. ಆಂಗ್ಲ ಬ್ಯಾಟರ್​ಗಳು ಸಮಯ ವ್ಯರ್ಥ ಮಾಡಲು ಮುಂದಾಗಿದ್ದಕ್ಕೆ, ಇಷ್ಟೆಲ್ಲಾ ರದ್ದಾಂತಗಳು ನಡೆದಿವೆ. ಇವೆಲ್ಲವೂ ಆಟದ ಭಾಗ ಎಂದು ಕೆಲ್ ರಾಹುಲ್ ಹೇಳಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?