AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವರ್ಲ್ಡ್ ಬೆಸ್ಟ್ ಕಾರನ್ನು ಗ್ಯಾರೇಜ್​ನಲ್ಲಿ ನಿಲ್ಲಿಸಿದಂತಾಯಿತು’; ಟೀಂ ಇಂಡಿಯಾವನ್ನು ಲೇವಡಿ ಮಾಡಿದ ಬ್ರೆಟ್ ಲೀ

ಆಸೀಸ್​ ಪಿಚ್​ಗಳಲ್ಲಿ ಒಬ್ಬ ಬೌಲರ್ 140 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವಾಗಲೇ ಪಲಿತಾಂಶ ಭಿನ್ನವಾಗಿರುತ್ತದೆ. ಇನ್ನ ಒಬ್ಬ ಬೌಲರ್ 150 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುತ್ತಾನೆ ಎಂದರೆ ಪಲಿತಾಂಶ ಹೇಗಿರುತ್ತದೆ ಎಂಬುದನ್ನು ನೀವೇ ಊಹಿಸಿ ಎಂದು ಲೀ ರೋಹಿತ್ ಪಡೆಗೆ ಸಲಹೆ ನೀಡಿದ್ದಾರೆ.

‘ವರ್ಲ್ಡ್ ಬೆಸ್ಟ್ ಕಾರನ್ನು ಗ್ಯಾರೇಜ್​ನಲ್ಲಿ ನಿಲ್ಲಿಸಿದಂತಾಯಿತು’; ಟೀಂ ಇಂಡಿಯಾವನ್ನು ಲೇವಡಿ ಮಾಡಿದ ಬ್ರೆಟ್ ಲೀ
TV9 Web
| Updated By: ಪೃಥ್ವಿಶಂಕರ|

Updated on:Oct 13, 2022 | 4:03 PM

Share

ಟಿ20 ವಿಶ್ವಕಪ್‌ಗಾಗಿ (T20 World Cup 2022) ರೋಹಿತ್ ನೇತೃತ್ವದ ಟೀಂ ಇಂಡಿಯಾ ಈಗಾಗಲೇ ಆಸೀಸ್ ನೆಲಕ್ಕೆ ಕಾಲಿಟ್ಟಿದೆ. ಜೊತೆಗೆ ಎರಡು ಅಭ್ಯಾಸ ಪಂದ್ಯಗಳನ್ನು ಆಡಿರುವ ರೋಹಿತ್ ಸೈನ್ಯ ಒಂದರಲ್ಲಿ ಗೆದ್ದಿದ್ದರೆ, ಮತ್ತೊಂದು ಪಂದ್ಯದಲ್ಲಿ ಸೋಲುಂಡಿದೆ. ಮೊದಲ ಪಂದ್ಯದಲ್ಲಿ ಕಷ್ಟಪಟ್ಟು ಗೆದ್ದಿದ್ದ ಭಾರತ, ಎರಡನೇ ಪಂದ್ಯದಲ್ಲಿ ಕಳಪೆ ಬ್ಯಾಟಿಂಗ್​ನಿಂದ ಸೋಲೊಪ್ಪಿಕೊಂಡಿತು. ಹೀಗಾಗಿ ಅಭ್ಯಾಸ ಪಂದ್ಯದಲ್ಲೇ ಮುಗ್ಗರಿಸಿರುವ ಟೀಂ ಇಂಡಿಯಾ ಟಿ20 ವಿಶ್ವಕಪ್‌ ಗೆಲ್ಲುವುದರ ಬಗ್ಗೆ ಅಭಿಮಾನಿಗಳಲ್ಲಿ ಈಗಾಗಲೇ ಅನುಮಾನ ಶುರುವಾಗಿದೆ. ಈ ಮೊದಲು ವಿಶ್ವಕಪ್‌ಗೆ ಸರ್ವ ತಯಾರಿ ನಡೆಸಿದ್ದ ಭಾರತಕ್ಕೆ ಆಟಗಾರರ ಇಂಜುರಿ ನುಂಗಲಾರದ ತುತ್ತಾಗಿ ಪರಿಣಮಿಸಿತು. ಮೊದಲು ಜಡೇಜಾ (Ravindra Jadeja) ಇಂಜುರಿಗೊಂಡರೆ, ಆ ಬಳಿಕ ತಂಡದ ವೇಗದ ಬೌಲರ್ ಬುಮ್ರಾ (Jasprit Bumrah) ಇಂಜುರಿಯಿಂದ ವಿಶ್ವಕಪ್​ಗೆ ಅಲಭ್ಯರಾದರು. ಈ ಇಬ್ಬರ ಬಳಿಕ ಬುಮ್ರಾ ಸ್ಥಾನಕ್ಕೆ ಸ್ಪರ್ಧಿಯಾಗಿದ್ದ ದೀಪಕ್ ಚಹರ್ ಕೂಡ ಇಂಜುರಿಯಿಂದ ಟಿ20 ವಿಶ್ವಕಪ್​ನಿಂದ ಹಿಂದೆ ಸರಿದಿದ್ದಾರೆ. ಈಗ ಬುಮ್ರಾ ಸ್ಥಾನಕ್ಕೆ ಶಮಿಯವರನ್ನು ಆಯ್ಕೆ ಮಾಡಲಾಗುತ್ತದೆ ಎಂಬ ಟಾಕ್ ಶುರುವಾಗಿದೆ. ಆದರೆ ಈ ಎಲ್ಲದರ ನಡುವೆ ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್​ ಲೀ ಟೀಂ ಇಂಡಿಯಾದ ಆಯ್ಕೆಯನ್ನು ಲೇವಡಿ ಮಾಡಿದ್ದಾರೆ.

ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗುವ ಖಚಿತತೆಯೊಂದಿಗೆ ಶಮಿ ಈಗಾಗಲೇ ಆಸ್ಟ್ರೇಲಿಯಾಕ್ಕೆ ಹಾರಿದ್ದಾರೆ. ಆದರೆ ಶಮಿ ಜೊತೆ ನೆಟ್ ಬೌಲರ್ಸ್​ಗಳಾಗಿ ತಂಡ ಸೇರಿಕೊಳ್ಳಬೇಕಾಗಿದ್ದ ಉಮ್ರಾನ್ ಮತ್ತು ಸಿರಾಜ್ ವೀಸಾ ಸಮಸ್ಯೆಯಲ್ಲಿ ಸಿಲುಕಿ ಹಾಕಿಕೊಂಡಿದ್ದಾರೆ. ವಿಶ್ವಕಪ್‌ ಆರಂಭಕ್ಕೂ ಮುನ್ನ ಈ ಇಬ್ಬರ ವೀಸಾ ಸಮಸ್ಯೆ ಪರಿಹಾರವಾದರೆ ಈ ಇಬ್ಬರು ತಂಡ ಸೇರಿಕೊಳ್ಳಲಿದ್ದಾರೆ. ಕೊನೆಯದಾಗಿ ಜೂನ್‌ನಲ್ಲಿ ನಡೆದ ಐರ್ಲೆಂಡ್‌ ವಿರುದ್ಧದ ಸರಣಿಯಲ್ಲಿ ಭಾರತದ ಪರ ಆಡಿದ್ದ ಉಮ್ರಾನ್ ಮಲಿಕ್, ಆ ನಂತರ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಇತ್ತ ದಕ್ಷಿಣ ಆಫ್ರಿಕಾ ವಿರುದ್ಧದ ‘ಪ್ಲೇಯರ್ ಆಫ್ ದಿ ಸೀರೀಸ್’ ಪ್ರದರ್ಶನ ನೀಡಿದ್ದ ಸಿರಾಜ್ ವಿಶ್ವಕಪ್‌ ತಂಡದಲ್ಲಿ ಸ್ಥಾನ ಪಡೆಯುವ ಯೋಜನೆಯಲ್ಲಿದ್ದಾರೆ.

ಆದಾಗ್ಯೂ, ಈ ಇಬ್ಬರ ನಡುವೆ ನಾನು ಉಮ್ರಾನ್‌ಗೆ ತಂಡದಲ್ಲಿ ಅವಕಾಶ ನೀಡಲು ಬಯಸುವುದಾಗಿ ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಹೇಳಿಕೊಂಡಿದ್ದಾರೆ. ಇದಕ್ಕೆ ಸೂಕ್ತ ಕಾರಣವನ್ನು ನೀಡಿರುವ ಲೀ, “ಉಮ್ರಾನ್ ಮಲಿಕ್ ಗಂಟೆಗೆ 150 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡುತ್ತಿದ್ದಾರೆ. ಆದರೂ ಅವರನ್ನು ಮುಖ್ಯ ತಂಡಕ್ಕೆ ಆಯ್ಕೆ ಮಾಡಿಲ್ಲ. ಇದರರ್ಥ ಹೇಗಿದೆ ಅಂದರೆ ನಿಮ್ಮ ಬಳಿ ವಿಶ್ವದ ಅತ್ಯುತ್ತಮ ಕಾರಿದ್ದು ಅದನ್ನು ಕೇವಲ ಗ್ಯಾರೇಜ್‌ನಲ್ಲಿ ನಿಲ್ಲಿಸಿದರೆ, ಆ ಕಾರನ್ನು ನೀವು ಖರೀದಿಸಿದಕ್ಕೂ ಏನು ಪ್ರಯೋಜನ? ಎಂದು ಲೀ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ಉಮ್ರಾನ್ ಮಲಿಕ್ ಅವರನ್ನು ಭಾರತ ತಂಡದಲ್ಲಿ ಆಯ್ಕೆ ಮಾಡಬೇಕಿತ್ತು ಎಂದು ಟೈಮ್ಸ್‌ಗೆ ನೀಡಿದ ಸಂದರ್ಶನದಲ್ಲಿ ಬ್ರೆಟ್ ಲೀ ಹೇಳಿಕೊಂಡಿದ್ದಾರೆ.

“ಹೌದು, ಉಮ್ರಾನ್ ಈಗ ತಾನೆ ಬೆಳೆಯುತ್ತಿರುವ ಯುವ ಪ್ರತಿಭೆ. ಅವರ ಬೌಲಿಂಗ್​ನಲ್ಲಿ ಇನ್ನೂ ಪರಿಪಕ್ವತೆ ಇಲ್ಲದಿರುಬಹುದು. ಆದರೆ ಅವರು 150 ಕಿಮೀ ವೇಗದಲ್ಲಿ ಬೌಲ್ ಮಾಡುವ ಸಾಮಥ್ಯ್ರ ಹೊಂದಿದ್ದಾರೆ. ಆಸ್ಟ್ರೇಲಿಯಾದಲ್ಲಿ ಆಡುವಾಗ ಇಂತಹ ವೇಗದ ಬೌಲರ್​ಗಳೇ ತಂಡಕ್ಕೆ ಬೇಕಾಗಿರುವುದು. ಆದ್ದರಿಂದ ಉಮ್ರಾನ್​ಗೆ ಟಿ20 ವಿಶ್ವಕಪ್ ತಂಡದಲ್ಲಿ ಅವಕಾಶ ನೀಡಿ ಎಂದಿದ್ದಾರೆ. ಅಲ್ಲದೆ ಆಸೀಸ್​ ಪಿಚ್​ಗಳಲ್ಲಿ ಒಬ್ಬ ಬೌಲರ್ 140 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುವಾಗಲೇ ಪಲಿತಾಂಶ ಭಿನ್ನವಾಗಿರುತ್ತದೆ. ಇನ್ನ ಒಬ್ಬ ಬೌಲರ್ 150 ಕಿಮೀ ವೇಗದಲ್ಲಿ ಬೌಲಿಂಗ್ ಮಾಡುತ್ತಾನೆ ಎಂದರೆ ಪಲಿತಾಂಶ ಹೇಗಿರುತ್ತದೆ ಎಂಬುದನ್ನು ನೀವೇ ಊಹಿಸಿ ಎಂದು ಲೀ ರೋಹಿತ್ ಪಡೆಗೆ ಸಲಹೆ ನೀಡಿದ್ದಾರೆ.

Published On - 4:02 pm, Thu, 13 October 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್