AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA Live Streaming: ಫೈನಲ್ ಪಂದ್ಯ ಎಷ್ಟು ಗಂಟೆಗೆ, ಯಾವ ಚಾನೆಲ್‌ನಲ್ಲಿ ಆರಂಭ? ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?

IND vs SA, T20 World Cup 2024 Live Streaming: 9ನೇ ಆವೃತ್ತಿಯ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಬಾರ್ಬಡೋಸ್‌ನಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮೂರನೇ ಬಾರಿ ಫೈನಲ್‌ ಪ್ರವೇಶಿಸಿದೆ. ಇದಕ್ಕೂ ಮೊದಲು 2007 ಮತ್ತು 2014ರಲ್ಲಿಯೂ ತಂಡ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿತ್ತು. ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ತಂಡ ಮೊದಲ ಬಾರಿಗೆ ವಿಶ್ವಕಪ್‌ನ ಫೈನಲ್ ಪಂದ್ಯವನ್ನು ಆಡಲಿದೆ.

IND vs SA Live Streaming: ಫೈನಲ್ ಪಂದ್ಯ ಎಷ್ಟು ಗಂಟೆಗೆ, ಯಾವ ಚಾನೆಲ್‌ನಲ್ಲಿ ಆರಂಭ? ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?
ಭಾರತ- ದಕ್ಷಿಣ ಆಫ್ರಿಕಾ
ಪೃಥ್ವಿಶಂಕರ
|

Updated on: Jun 28, 2024 | 7:52 PM

Share

9ನೇ ಆವೃತ್ತಿಯ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಬಾರ್ಬಡೋಸ್‌ನಲ್ಲಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮೂರನೇ ಬಾರಿ ಫೈನಲ್‌ ಪ್ರವೇಶಿಸಿದೆ. ಇದಕ್ಕೂ ಮೊದಲು 2007 ಮತ್ತು 2014ರಲ್ಲಿಯೂ ತಂಡ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿತ್ತು. ಅದೇ ಸಮಯದಲ್ಲಿ, ದಕ್ಷಿಣ ಆಫ್ರಿಕಾ ತಂಡ ಮೊದಲ ಬಾರಿಗೆ ವಿಶ್ವಕಪ್‌ನ ಫೈನಲ್ ಪಂದ್ಯವನ್ನು ಆಡಲಿದೆ. ಭಾರತ ತಂಡ ಕಳೆದ ವರ್ಷ ಏಕದಿನ ವಿಶ್ವಕಪ್‌ನಲ್ಲಿ ಫೈನಲ್ ತಲುಪಿತ್ತು. ಆದರೆ ಆ ಪಂದ್ಯದಲ್ಲಿ ತಂಡವು, ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಎದುರಿಸಬೇಕಾಯಿತು.

11 ವರ್ಷಗಳ ಬರ ನೀಗಿಸುತ್ತಾ ಭಾರತ?

ಭಾರತ ತಂಡ ಯಾವುದೇ ಐಸಿಸಿ ಟ್ರೋಫಿಯನ್ನು ಗೆದ್ದು ಬಹಳ ಸಮಯವಾಗಿದೆ. 2013 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ತಂಡವು ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿತು. ಇದಾದ ಬಳಿಕ ತಂಡವು 2017ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಸೋತಿದ್ದರೆ, 2019ರ ಏಕದಿನ ವಿಶ್ವಕಪ್‌ನ ಸೆಮಿಫೈನಲ್, 2021ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್, 2022ರ ಟಿ20 ವಿಶ್ವಕಪ್​ನ ಸೆಮಿಫೈನಲ್‌ನಲ್ಲಿಯೂ ತಂಡ ಸೋತಿತ್ತು. ಆ ಬಳಿಕ 2023ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಮತ್ತು 2023ರ ಏಕದಿನ ವಿಶ್ವಕಪ್‌ನ ಫೈನಲ್​ನಲ್ಲಿ ಸೋಲನ್ನು ಎದುರಿಸಬೇಕಾಯಿತು. ಇದೀಗ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡಕ್ಕೆ ಐಸಿಸಿ ಟ್ರೋಫಿ ಗೆಲ್ಲುವ 11 ವರ್ಷಗಳ ಬರ ನೀಗಿಸುವ ಅವಕಾಶವಿದೆ.

ಭಾರತ-ದಕ್ಷಿಣ ಆಫ್ರಿಕಾ ಮುಖಾಮುಖಿ

ಟಿ20 ಕ್ರಿಕೆಟ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾದ ಮೇಲೆ ಮೇಲುಗೈ ಸಾಧಿಸಿದೆ. ಉಭಯರ ನಡುವೆ ಒಟ್ಟು 26 ಪಂದ್ಯಗಳು ನಡೆದಿವೆ. ಇದರಲ್ಲಿ ಭಾರತ 14 ಪಂದ್ಯಗಳಲ್ಲಿ ಗೆದ್ದಿದ್ದರೆ ಆಫ್ರಿಕಾ 11 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಅದೇ ಸಮಯದಲ್ಲಿ, ಒಂದು ಪಂದ್ಯ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಇನ್ನು ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು ಆರು ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ ಎರಡು ಪಂದ್ಯಗಳನ್ನು ಗೆದ್ದಿದೆ.

ಪಂದ್ಯದ ಬಗ್ಗೆ ಪೂರ್ಣ ಮಾಹಿತಿ ಇಲ್ಲಿದೆ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯ ಯಾವಾಗ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯವು ಜೂನ್ 29 ರಂದು ಅಂದರೆ ಶನಿವಾರದಂದು ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯ ಯಾವಾಗ ಪ್ರಾರಂಭವಾಗುತ್ತದೆ?

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನಡೆಯಲಿದೆ. ರಾತ್ರಿ 7:30ಕ್ಕೆ ಟಾಸ್ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯವನ್ನು ಯಾವ ಟಿವಿ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗುತ್ತದೆ?

ಸ್ಟಾರ್ ಸ್ಪೋರ್ಟ್ಸ್ ಟಿ20 ವಿಶ್ವಕಪ್ 2024 ಪ್ರಸಾರ ಮಾಡುವ ಹಕ್ಕನ್ನು ಹೊಂದಿದೆ. ಹಿಂದಿ ಮತ್ತು ಇಂಗ್ಲಿಷ್ ಹೊರತುಪಡಿಸಿ, ಸ್ಟಾರ್ ಸ್ಪೋರ್ಟ್ಸ್ ಚಾನೆಲ್ ಬಂಗಾಳಿ, ಕನ್ನಡ, ತೆಲುಗು ಮತ್ತು ತಮಿಳು ಸೇರಿದಂತೆ ಇತರ ಭಾಷೆಗಳಲ್ಲಿ ಲೈವ್ ಕಾಮೆಂಟರಿಯನ್ನು ಒದಗಿಸುತ್ತದೆ. ಅದೇ ಸಮಯದಲ್ಲಿ, ಡಿಡಿ ಫ್ರೀ ಡಿಶ್ ಬಳಸುವ ವೀಕ್ಷಕರು ಭಾರತದ ಪಂದ್ಯಗಳು ಮತ್ತು ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿ ಉಚಿತವಾಗಿ ವೀಕ್ಷಿಸಲು ಸಾಧ್ಯವಾಗುತ್ತದೆ.

ಫೋನ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಲೈವ್ ಪಂದ್ಯವನ್ನು ವೀಕ್ಷಿಸುವುದು ಹೇಗೆ?

ಈ ಪಂದ್ಯದ ಲೈವ್-ಸ್ಟ್ರೀಮಿಂಗ್ ಅನ್ನು ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ನೋಡಬಹುದು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ