IND vs SL: ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಈ ದಿನದಂದು ಪ್ರಕಟ; ಯಾರಿಗೆಲ್ಲ ಅವಕಾಶ?

IND vs SL: ವರದಿ ಪ್ರಕಾರ, ಭಾರತ ತಂಡವನ್ನು ಮಂಗಳವಾರ, ಜುಲೈ 16 ರಂದು ಪ್ರಕಟಿಸಬಹುದಾಗಿದೆ. ಈ ಪ್ರವಾಸದಲ್ಲಿ, ಗೌತಮ್ ಗಂಭೀರ್ ಮೊದಲ ಬಾರಿಗೆ ಮುಖ್ಯ ಕೋಚ್ ಆಗಿ ಭಾರತ ತಂಡದೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.

IND vs SL: ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡ ಈ ದಿನದಂದು ಪ್ರಕಟ; ಯಾರಿಗೆಲ್ಲ ಅವಕಾಶ?
ಟೀಂ ಇಂಡಿಯಾ
Follow us
|

Updated on: Jul 15, 2024 | 10:56 PM

ಐದು ಪಂದ್ಯಗಳ ಟಿ20 ಸರಣಿಗಾಗಿ ಜಿಂಬಾಬ್ವೆ ಪ್ರವಾಸ ಮಾಡಿದ್ದ ಟೀಂ ಇಂಡಿಯಾದ ಮುಂದಿನ ನಿಲ್ದಾಣ ಶ್ರೀಲಂಕಾ ಎಂಬುದನ್ನು ಕೆಲವು ದಿನಗಳ ಹಿಂದೆ ಬಿಸಿಸಿಐ ಖಚಿತ ಪಡಿಸಿತ್ತು. ಜುಲೈ 27 ರಿಂದ ಪ್ರಾರಂಭವಾಗಲ್ಲಿರುವ ಈ ಸರಣಿಯಲ್ಲಿ ಭಾರತ ತಂಡ ಒಟ್ಟು 6 ಪಂದ್ಯಗಳನ್ನು ಆಡಲಿದೆ. ಇದರಲ್ಲಿ ಮೂರು ಪಂದ್ಯಗಳ ಟಿ20 ಮತ್ತು ಮೂರು ಪಂದ್ಯಗಳ ಏಕದಿನ ಸರಣಿಗಳು ಸೇರಿವೆ. ಆದರೆ ಈ ಪ್ರವಾಸಕ್ಕೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿಲ್ಲ. ಅದಾಗ್ಯೂ ಈ ಸರಣಿಯಿಂದ ಹಿರಿಯ ಆಟಗಾರರು ಮತ್ತೆ ತಂಡವನ್ನು ಸೇರಿಕೊಳ್ಳುವುದು ಖಚಿತವಾಗಿದೆ. ಈ ನಡುವೆ ಶ್ರೀಲಂಕಾ ಪ್ರವಾಸಕ್ಕೆ ಭಾರತ ತಂಡವನ್ನು ಯಾವಾಗ ಪ್ರಕಟಿಸಲಾಗುತ್ತದೆ? ಯಾರಿಗೆಲ್ಲ ಅವಕಾಶ ಸಿಗಬಹುದು ಎಂಬುದರ ಬಗ್ಗೆ ವಿವರ ಇಲ್ಲಿದೆ.

ಇಂದು ಅಥವಾ ನಾಳೆ ಪ್ರಕಟ

ಕ್ರಿಕ್‌ನೆಕ್ಸ್ಟ್‌ನ ವರದಿ ಪ್ರಕಾರ, ಭಾರತ ತಂಡವನ್ನು ನಾಳೆ ಮಂಗಳವಾರ, ಜುಲೈ 16 ರಂದು ಪ್ರಕಟಿಸಬಹುದಾಗಿದೆ. ಈ ಪ್ರವಾಸದಲ್ಲಿ, ಗೌತಮ್ ಗಂಭೀರ್ ಮೊದಲ ಬಾರಿಗೆ ಮುಖ್ಯ ಕೋಚ್ ಆಗಿ ಭಾರತ ತಂಡದೊಂದಿಗೆ ಕಾಣಿಸಿಕೊಳ್ಳಲಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾಗೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಜಿಂಬಾಬ್ವೆ ಪ್ರವಾಸದಂತೆಯೇ ಟೀಂ ಇಂಡಿಯಾ ತಂಡದಲ್ಲಿ ಯುವ ತಂಡವನ್ನು ಆಯ್ಕೆ ಮಾಡಬಹುದು. ಟಿ20 ತಂಡದ ನಾಯಕತ್ವವನ್ನು ಹಾರ್ದಿಕ್ ಪಾಂಡ್ಯ ಮತ್ತು ಏಕದಿನ ತಂಡದ ನಾಯಕತ್ವವನ್ನು ಕೆಎಲ್ ರಾಹುಲ್ ನಿಭಾಯಿಸಬಹುದು ಎಂದು ಹೇಳಲಾಗುತ್ತಿದೆ.

ಸಂಜುಗೆ ಮತ್ತೊಂದು ಅವಕಾಶ

ವರದಿ ಪ್ರಕಾರ ಸಂಜು ಸ್ಯಾಮ್ಸನ್ ಎರಡೂ ತಂಡಗಳಲ್ಲಿ ಆಯ್ಕೆಯಾಗುವ ಸಾಧ್ಯತೆ ಇದೆ. ಟಿ20 ವಿಶ್ವಕಪ್ ಬಳಿಕ ತಡವಾಗಿ ಜಿಂಬಾಬ್ವೆ ಪ್ರವಾಸಕ್ಕೆ ಸೇರಿದ್ದ ಅವರನ್ನು ತಂಡದ ಉಪನಾಯಕರನ್ನಾಗಿ ನೇಮಿಸಲಾಯಿತು. ಅದರಂತೆ ಜವಬ್ದಾರಿಯುತ ಆಟ ಆಡಿದ ಸಂಜ ಜಿಂಬಾಬ್ವೆ ವಿರುದ್ಧದ ಕೊನೆಯ ಟಿ20 ಪಂದ್ಯದಲ್ಲಿ ಅಮೋಘ ಅರ್ಧಶತಕ ಸಿಡಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಯಾರ್ಯಾರಿಗೆ ಅವಕಾಶ ಸಿಗಬಹುದು?

ಸಂಜು ಜೊತೆಗೆ ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್ ಹಾಗೂ ಶಿವಂ ದುಬೆ ಅಥವಾ ರಿಂಕು ಸಿಂಗ್ ಅವರಲ್ಲಿ ಒಬ್ಬರು ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದಲ್ಲಿ ಸ್ಥಾನ ಪಡೆಯಬಹುದು. ವರದಿ ಪ್ರಕಾರ ಶಿವಂ ದುಬೆಗೆ ಈ ಸರಣಿಯಿಂದ ಬ್ರೇಕ್ ನೀಡುವ ಸಾಧ್ಯತೆ ಇದೆ. ಆದರೆ ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದ ತಂಡದಲ್ಲಿ ಸ್ಥಾನ ಪಡೆದಿದ್ದ ರಿಯಾನ್ ಪರಾಗ್, ಸಾಯಿ ಸುದರ್ಶನ್ ಮತ್ತು ಜಿತೇಶ್ ಶರ್ಮಾಗೂ ಅವಕಾಶ ಸಿಗುವುದು ಕಷ್ಟ ಸಾಧ್ಯ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮೊಟೊರೊಲ ಹೊಸ ಸ್ಮಾರ್ಟ್​​ಫೋನ್ G45 5G ಭಾರತದ ಮಾರುಕಟ್ಟೆಗೆ ಲಗ್ಗೆ
ಮೊಟೊರೊಲ ಹೊಸ ಸ್ಮಾರ್ಟ್​​ಫೋನ್ G45 5G ಭಾರತದ ಮಾರುಕಟ್ಟೆಗೆ ಲಗ್ಗೆ
ಮೈಸೂರಿಗೆ ಆಗಮಿಸಿದ ಗಜಪಡೆಯ ಮೊದಲ ಬ್ಯಾಚ್, ಗಮನ ಸೆಳೆಯುತ್ತಿರುವ ಅಭಿಮನ್ಯು
ಮೈಸೂರಿಗೆ ಆಗಮಿಸಿದ ಗಜಪಡೆಯ ಮೊದಲ ಬ್ಯಾಚ್, ಗಮನ ಸೆಳೆಯುತ್ತಿರುವ ಅಭಿಮನ್ಯು
ಕೊಪ್ಪಳ: ಯರಡೋಣ ಗ್ರಾಮದಲ್ಲಿರುವಂಥ ಗೂಳಿಯನ್ನು ಮೊದಲೆಲ್ಲಾದರೂ ನೋಡಿದ್ದೀರಾ?
ಕೊಪ್ಪಳ: ಯರಡೋಣ ಗ್ರಾಮದಲ್ಲಿರುವಂಥ ಗೂಳಿಯನ್ನು ಮೊದಲೆಲ್ಲಾದರೂ ನೋಡಿದ್ದೀರಾ?
ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವದಲ್ಲಿ ಯದುವೀರ್ ಭಾಗಿ
ಮಂತ್ರಾಲಯದ ರಾಯರ 353ನೇ ಆರಾಧನಾ ಮಹೋತ್ಸವದಲ್ಲಿ ಯದುವೀರ್ ಭಾಗಿ
ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?
ದರ್ಶನ್ ಪ್ರಕರಣದ ತನಿಖೆಗೆ ಈವರೆಗೆ ಖರ್ಚಾದ ಹಣ ಎಷ್ಟು?
ದೇವರ ಮನೆಯಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ
ದೇವರ ಮನೆಯಲ್ಲಿ ಅಪ್ಪಿತಪ್ಪಿಯೂ ಈ ವಸ್ತುಗಳನ್ನು ಇಡಬೇಡಿ
ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಶ್ರಾವಣ ಮಾಸದ 3ನೇ ಶುಭ ಗುರುವಾರದ ರಾಶಿಭವಿಷ್ಯ ತಿಳಿಯಿರಿ
ಸಿದ್ದರಾಮಯ್ಯ ಜನಪ್ರಿಯ ಮತ್ತು ಮಾಸ್ ಲೀಡರ್ ಅನ್ನೋದ್ರಲ್ಲಿ ಎರಡು ಮಾತಿಲ್ಲ
ಸಿದ್ದರಾಮಯ್ಯ ಜನಪ್ರಿಯ ಮತ್ತು ಮಾಸ್ ಲೀಡರ್ ಅನ್ನೋದ್ರಲ್ಲಿ ಎರಡು ಮಾತಿಲ್ಲ
ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ
ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ
ಕುಮಾರಸ್ವಾಮಿಗೆ ಹೆದರಿಕೆ; ಹಾಗಾಗೇ ಪತ್ರಿಕಾ ಗೋಷ್ಠಿ ನಡೆಸಿದ್ದಾರೆ: ಸಿಎಂ
ಕುಮಾರಸ್ವಾಮಿಗೆ ಹೆದರಿಕೆ; ಹಾಗಾಗೇ ಪತ್ರಿಕಾ ಗೋಷ್ಠಿ ನಡೆಸಿದ್ದಾರೆ: ಸಿಎಂ