AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ 33 ವರ್ಷದ ಆಲ್​ರೌಂಡರ್ ಎಂಟ್ರಿ!

India vs Sri Lanka Test: ಭಾರತ ಮತ್ತು ಶ್ರೀಲಂಕಾ ನಡುವಣ ಟೆಸ್ಟ್ ಸರಣಿಯು ಆಗಸ್ಟ್ 15 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯವು ಗಾಲೆಯ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದರೆ, ದ್ವಿತೀಯ ಪಂದ್ಯವು ಆಗಸ್ಟ್ 23 ರಂದು ಕೊಲಂಬೋದ ಎಸ್‌ಎಸ್‌ಸಿ ಮೈದಾನದಲ್ಲಿ ಜರುಗಲಿದೆ.

ಟೀಮ್ ಇಂಡಿಯಾಗೆ 33 ವರ್ಷದ ಆಲ್​ರೌಂಡರ್ ಎಂಟ್ರಿ!
Saransh JainImage Credit source: BCCI
ಝಾಹಿರ್ ಯೂಸುಫ್
|

Updated on: Jul 28, 2026 | 10:11 AM

Share

ಶ್ರೀಲಂಕಾ ವಿರುದ್ಧದ ಸರಣಿಗೆ ಭಾರತ ಟೆಸ್ಟ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ ಈ ತಂಡದಲ್ಲಿ ಕಾಣಿಸಿಕೊಂಡ ಏಕೈಕ ಹೊಸಮುಖ ಸರಂಶ್ ಜೈನ್. ಮಧ್ಯಪ್ರದೇಶದ 33 ವರ್ಷದ ಅನುಭವಿ ಆಫ್-ಸ್ಪಿನ್ ಆಲ್‌ರೌಂಡರ್ ಸರಂಶ್ ಜೈನ್ ಗಾಯಾಳು ವಾಷಿಂಗ್ಟನ್ ಸುಂದರ್​ಗೆ ಬದಲಿಗೆ ಆಯ್ಕೆಯಾಗಿದ್ದಾರೆ. ಈ ಆಯ್ಕೆ ಬೆನ್ನಲ್ಲೇ ಯಾರು ಈ ಸರಂಶ್ ಜೈನ್ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಇಲ್ಲಿದೆ ಉತ್ತರ…

ಸರಂಶ್ ಜೈನ್ ಪ್ರಥಮ ದರ್ಜೆ ಕ್ರಿಕೆಟ್ ಕೆರಿಯರ್ ಆರಂಭವಾಗಿದ್ದು 2014 ರಲ್ಲಿ. ಮಧ್ಯಪ್ರದೇಶ್ ಪರ ಕಣಕ್ಕಿಳಿಯುವ ಮೂಲಕ ವೃತ್ತಿಜೀವನ ಆರಂಭಿಸಿದ್ದ ಸರಂಶ್​ಗೆ ಹನ್ನೆರಡು ವರ್ಷಗಳ ಬಳಿಕ ಟೀಮ್ ಇಂಡಿಯಾದಲ್ಲಿ ಸ್ಥಾನ ಲಭಿಸಿದೆ. ಕಳೆದ ಹನ್ನೆರಡು ವರ್ಷಗಳ ಸರಂಶ್ ಜೈನ್ ದೇಶೀಯ ಕ್ರಿಕೆಟ್​ನಲ್ಲಿ ಹೇಗೆ ಆಡಿದ್ದರು ಎಂಬುದಕ್ಕೆ ಈ ಕೆಳಗಿನ ಅಂಕಿ ಅಂಶಗಳೇ ಸಾಕ್ಷಿ.

  • ಪ್ರಥಮ ದರ್ಜೆ ಪಂದ್ಯಗಳು: 54
  • ಗಳಿಸಿದ ರನ್ ಸಂಖ್ಯೆ: 2,223
  • ಬ್ಯಾಟಿಂಗ್ ಸರಾಸರಿ: 31.76
  • ಶತಕ / ಅರ್ಧಶತಕ: 2 / 14
  • ಪಡೆದ ವಿಕೆಟ್‌ಗಳು: 188
  • ಬೌಲಿಂಗ್ ಸರಾಸರಿ: 27.31
  • ಅತ್ಯುತ್ತಮ ಬೌಲಿಂಗ್ ಪ್ರದರ್ಶನ: 6/75 (ಒಂದು ಇನ್ನಿಂಗ್ಸ್‌ನಲ್ಲಿ)

ಅಪ್ರತಿಮ ಬೌಲಿಂಗ್ ಪ್ರದರ್ಶನ:

ಕಳೆದ 12 ತಿಂಗಳ ದೇಶಿ ಕ್ರಿಕೆಟ್​ನಲ್ಲಿ ಸರಂಶ್ ಜೈನ್ ಅದ್ಭುತ ಪ್ರದರ್ಶನ ನೀಡಿದ್ದರು. ಈ ಅವಧಿಯಲ್ಲಿ 311 ರನ್ ಗಳಿಸುವುದರ ಜೊತೆಗೆ ಬರೋಬ್ಬರಿ 44 ಪ್ರಥಮ ದರ್ಜೆ ವಿಕೆಟ್‌ಗಳನ್ನು ಕಬಳಿಸಿ, ಭಾರತದ ಅತ್ಯಂತ ಯಶಸ್ವಿ ರೆಡ್-ಬಾಲ್ ಆಫ್-ಸ್ಪಿನ್ನರ್ ಆಗಿ ಹೊರಹೊಮ್ಮಿದರು.

ದುಲೀಪ್ ಮತ್ತು ಇರಾನಿ ಟ್ರೋಫಿ ಸಾಧನೆ:

ದುಲೀಪ್ ಟ್ರೋಫಿಯಲ್ಲಿ ಸೆಂಟ್ರಲ್ ಝೋನ್ ತಂಡ ಚಾಂಪಿಯನ್ ಆಗುವಲ್ಲಿ ಇವರು ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ, ಮುಂಬೈ ವಿರುದ್ಧದ ಇರಾನಿ ಟ್ರೋಫಿ ಪಂದ್ಯದಲ್ಲಿ ರೆಸ್ಟ್ ಆಫ್ ಇಂಡಿಯಾ ತಂಡದ ಪರವಾಗಿ 121 ರನ್‌ಗಳಿಗೆ 6 ವಿಕೆಟ್ ಪಡೆದು ಗಮನ ಸೆಳೆದಿದ್ದರು.

ಇಂಡಿಯಾ ‘ಎ’ ತಂಡದಲ್ಲಿ ಮಿಂಚು:

ಭಾರತದ ಹಿರಿಯ ತಂಡಕ್ಕೆ ಆಯ್ಕೆಯಾಗಲು ಇತ್ತೀಚಿನ ಇಂಡಿಯಾ ‘ಎ’ ತಂಡದ ಶ್ರೀಲಂಕಾ ಪ್ರವಾಸವೇ ಪ್ರಮುಖ ಕಾರಣ. ಗಾಲೆಯಲ್ಲಿ ನಡೆದ ಶ್ರೀಲಂಕಾ ‘ಎ’ ವಿರುದ್ಧದ ಎರಡನೇ ನಾಲ್ಕು ದಿನಗಳ ಪಂದ್ಯದಲ್ಲಿ ಜವಾಬ್ದಾರಿಯುತ 70* ರನ್ ಬಾರಿಸಿದ್ದಲ್ಲದೆ, ಪಂದ್ಯದಲ್ಲಿ ಒಟ್ಟು 6 ವಿಕೆಟ್ ಉರುಳಿಸಿ ಮ್ಯಾಚ್ ವಿನ್ನರ್ ಎನಿಸಿಕೊಂಡರು. ಈ ಆಲ್‌ರೌಂಡ್ ಪ್ರದರ್ಶನವೇ ಅವರಿಗೆ ಇಂದು ರಾಷ್ಟ್ರೀಯ ಟೆಸ್ಟ್ ತಂಡದ ಬಾಗಿಲು ತೆರೆಯುವಂತೆ ಮಾಡಿದೆ.

ಇದನ್ನೂ ಓದಿ: ಭಾರತ ಟೆಸ್ಟ್ ತಂಡ ಪ್ರಕಟ: ಕನ್ನಡಿಗ ಉಪನಾಯಕ

ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಅಪಾರ ಅನುಭವ ಹೊಂದಿರುವ ಸರಂಶ್ ಜೈನ್ ಅವರಿಗೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಚತುರತೆಯನ್ನು ಪ್ರದರ್ಶಿಸಲು ಸೂಕ್ತ ವೇದಿಕೆ ಸಿಕ್ಕಿದೆ. ಶ್ರೀಲಂಕಾ ಪ್ರವಾಸದಲ್ಲಿ ಅವರು ಭಾರತ ತಂಡಕ್ಕೆ ದೊಡ್ಡ ಬಲ ತುಂಬುವ ಎಲ್ಲ ನಿರೀಕ್ಷೆಗಳಿದ್ದು, ದೇಶಿ ಕ್ರಿಕೆಟ್‌ನ ಯಶಸ್ಸನ್ನು ಅಂತರರಾಷ್ಟ್ರೀಯ ರಂಗದಲ್ಲೂ ಮುಂದುವರಿಸಿ ಹೆಮ್ಮೆಯ ಮ್ಯಾಚ್-ವಿನ್ನರ್ ಆಗಿ ಹೊರಹೊಮ್ಮಲಿ ಎಂಬುದೇ ಅಭಿಮಾನಿಗಳ ಆಶಯ.

Follow Us
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ