Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: 3 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿದ ಯುವ ವೇಗಿಗೆ ಅವಕಾಶ ನೀಡಿದ ಗುಜರಾತ್ ಟೈಟನ್ಸ್

Who is Yash Dayal: 140ರ ಅಸುಪಾಸಿನ ವೇಗದಲ್ಲಿ ಬೌಲಿಂಗ್ ಮಾಡುವ ಯಶ್ ದಯಾಳ್ 2018 ರಲ್ಲಿ ಉತ್ತರ ಪ್ರದೇಶದ U-23 ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದುವರೆಗೆ 14 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಅವರು 50 ವಿಕೆಟ್ ಪಡೆದಿದ್ದಾರೆ.

IPL 2022: 3 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿದ ಯುವ ವೇಗಿಗೆ ಅವಕಾಶ ನೀಡಿದ ಗುಜರಾತ್ ಟೈಟನ್ಸ್
Yash Dayal
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 14, 2022 | 10:23 PM

ಐಪಿಎಲ್​ ಅಂಗಳಕ್ಕೆ ಮತ್ತೋರ್ವ ಯುವ ಆಟಗಾರ ಎಂಟ್ರಿ ಕೊಟ್ಟಿದ್ದಾರೆ. ಹೆಸರು ಯಶ್ ದಯಾಳ್ (Yash Dayal). ರಾಜಸ್ಥಾನ್ ರಾಯಲ್ಸ್ ವಿರುದ್ದದ ಪಂದ್ಯದಲ್ಲಿ ಯಶ್ ದಯಾಳ್ ಗುಜರಾತ್ ಟೈಟನ್ಸ್ ಪರ ಪಾದರ್ಪಣೆ ಮಾಡಲಿದ್ದಾರೆ. 24 ವರ್ಷದ ಯಶ್ ದಯಾಳ್ ಉತ್ತರ ಪ್ರದೇಶದ ಕ್ರಿಕೆಟಿಗ. ಇದೀಗ ಗುಜರಾತ್ ತಂಡದ ಮೂಲಕ ಐಪಿಎಲ್​ಗೆ ಎಂಟ್ರಿ ಕೊಟ್ಟಿದ್ದಾರೆ. ವಿಶೇಷ ಎಂದರೆ ಗುಜರಾತ್ ಟೈಟನ್ಸ್ ತಂಡಕ್ಕೆ ಆಯ್ಕೆಯಾದ ವೇಳೆ ನೀಡಿದ ಸಂದರ್ಶನದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ವಿಕೆಟ್ ಪಡೆಯುವುದು ನನ್ನ ಗುರಿ ಎಂದಿದ್ದರು. ಇದೀಗ ಐಪಿಎಲ್​ ಮೂಲಕ ಆ ಕನಸನ್ನು ನನಸು ಮಾಡಿಕೊಳ್ಳುವ ವಿಶ್ವಾಸದಲ್ಲಿದ್ದಾರೆ ಯುವ ವೇಗಿ.

140ರ ಅಸುಪಾಸಿನ ವೇಗದಲ್ಲಿ ಬೌಲಿಂಗ್ ಮಾಡುವ ಯಶ್ ದಯಾಳ್ 2018 ರಲ್ಲಿ ಉತ್ತರ ಪ್ರದೇಶದ U-23 ತಂಡದಲ್ಲಿ ಕಾಣಿಸಿಕೊಂಡಿದ್ದರು. ಇದುವರೆಗೆ 14 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿರುವ ಅವರು 50 ವಿಕೆಟ್ ಪಡೆದಿದ್ದಾರೆ. 48 ರನ್‌ಗಳಿಗೆ 5 ವಿಕೆಟ್‌ ಕಬಳಿಸಿರುವುದು ಯಶ್ ದಯಾಳ್ ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಅಲ್ಲದೆ ಈ ಬಾರಿಯ ವಿಜಯ್ ಹಜಾರೆ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಪರಿಣಾಮ ಮೆಗಾ ಹರಾಜಿನಲ್ಲಿ ಗುಜರಾತ್ ಟೈಟನ್ಸ್ ತಂಡವು ಯುವ ವೇಗಿಯನ್ನು 3 ಕೋಟಿ 20 ಲಕ್ಷಕ್ಕೆ ಖರೀದಿಸಿತ್ತು.

ಇನ್ನು ಯಶ್ ದಯಾಳ್ ಲಿಸ್ಟ್-ಎ ಕ್ರಿಕೆಟ್​ನಲ್ಲಿ 14 ಪಂದ್ಯಗಳಲ್ಲಿ 23 ವಿಕೆಟ್ ಪಡೆದಿದ್ದಾರೆ. 31 ರನ್‌ಗಳಿಗೆ 5 ವಿಕೆಟ್‌ ಕಬಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. 15 ಟಿ20 ಪಂದ್ಯಗಳಲ್ಲಿ 15 ವಿಕೆಟ್ ಪಡೆದಿದ್ದಾರೆ. 3 ಕೋಟಿಗೂ ಅಧಿಕ ಮೊತ್ತಕ್ಕೆ ಖರೀದಿಸಿರುವ ಯುವ ವೇಗಿ ಇಂದು ರಾಜಸ್ಥಾನ್ ರಾಯಲ್ಸ್ ವಿರುದ್ದ ಐಪಿಎಲ್​ನಲ್ಲಿ ಮೊದಲ ಓವರ್​ ಎಸೆಯಲಿದ್ದಾರೆ. ಚೊಚ್ಚಲ ಪಂದ್ಯದಲ್ಲೇ ಯಶ್ ದಯಾಳ್ ಕಮಾಲ್ ಮಾಡಲಿದ್ದಾರಾ ಕಾದು ನೋಡಬೇಕಿದೆ.

ರಾಜಸ್ಥಾನ್ ರಾಯಲ್ಸ್​ ಪ್ಲೇಯಿಂಗ್ 11: ಜೋಸ್ ಬಟ್ಲರ್ , ದೇವದತ್ ಪಡಿಕ್ಕಲ್ , ಸಂಜು ಸ್ಯಾಮ್ಸನ್ (ನಾಯಕ) , ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್ , ಶಿಮ್ರಾನ್ ಹೆಟ್ಮೆಯರ್ , ರವಿಚಂದ್ರನ್ ಅಶ್ವಿನ್ , ರಿಯಾನ್ ಪರಾಗ್ , ಜೇಮ್ಸ್ ನೀಶಮ್ , ಕುಲದೀಪ್ ಸೇನ್ , ಪ್ರಸಿದ್ಧ್ ಕೃಷ್ಣ , ಯುಜ್ವೇಂದ್ರ ಚಾಹಲ್

ಗುಜರಾತ್ ಟೈಟನ್ಸ್ ಪ್ಲೇಯಿಂಗ್ 11: ಮ್ಯಾಥ್ಯೂ ವೇಡ್ , ಶುಭಮನ್ ಗಿಲ್ , ವಿಜಯ್ ಶಂಕರ್ , ಹಾರ್ದಿಕ್ ಪಾಂಡ್ಯ (ನಾಯಕ) , ಡೇವಿಡ್ ಮಿಲ್ಲರ್ , ಅಭಿನವ್ ಮನೋಹರ್ , ರಾಹುಲ್ ತೆವಾಟಿಯಾ , ರಶೀದ್ ಖಾನ್ , ಲಾಕಿ ಫರ್ಗುಸನ್ , ಮೊಹಮ್ಮದ್ ಶಮಿ , ಯಶ್ ದಯಾಳ್

ಇದನ್ನೂ ಓದಿ: Hardik Pandya: ಪಾಂಡ್ಯ ಪವರ್: ಸಿಕ್ಸ್ ಸಿಡಿಸಿ ದಾಖಲೆ ಬರೆದ ಹಾರ್ದಿಕ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ