AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರಾ, ಇವರಾ? ಟೀಮ್ ಇಂಡಿಯಾಗೆ ಆಡುವ ಬಳಗದ್ದೇ ಚಿಂತೆ..!

India vs Australia: ಚಾಂಪಿಯನ್ಸ್ ಟ್ರೋಫಿಯ ಮೊದಲ ಸುತ್ತಿನಲ್ಲಿ ಟೀಮ್ ಇಂಡಿಯಾ ಆಡಿದ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದೆ. ಈ ಗೆಲುವಿನಲ್ಲಿ ಭಾರತೀಯ ಬೌಲರ್​ಗಳು ನಿರ್ಣಾಯಕ ಪಾತ್ರವಹಿಸಿದ್ದರು. ಇದೀಗ ಸೆಮಿಫೈನಲ್​ಗೂ ಮುನ್ನ ಟೀಮ್ ಇಂಡಿಯಾ ಯಾವ ಬೌಲರ್​ಗಳನ್ನು ಕಣಕ್ಕಿಳಿಸಬೇಕೆಂದು ಚಿಂತೆ ಶುರುವಾಗಿದೆ. ಏಕೆಂದರೆ ಈ ಬಾರಿ ಆಡಿದ ಎಲ್ಲಾ ಬೌಲರ್​ಗಳು ಉತ್ತಮ ಪ್ರದರ್ಶನವನ್ನೇ ನೀಡಿದ್ದಾರೆ.

ಅವರಾ, ಇವರಾ? ಟೀಮ್ ಇಂಡಿಯಾಗೆ ಆಡುವ ಬಳಗದ್ದೇ ಚಿಂತೆ..!
Team India
ಝಾಹಿರ್ ಯೂಸುಫ್
|

Updated on: Mar 04, 2025 | 8:20 AM

Share

ಚಾಂಪಿಯನ್ಸ್ ಟ್ರೋಫಿಯ ನಿರ್ಣಾಯಕ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಹೊಸ ಚಿಂತೆ ಶುರುವಾಗಿದೆ. ಅದೇನೆಂದರೆ ಆಡುವ ಬಳಗದಲ್ಲಿ ಯಾರನ್ನು ಕಣಕ್ಕಿಳಿಸಬೇಕೆಂಬುದು. ಏಕೆಂದರೆ ಭಾರತ ತಂಡವು ಮೊದಲೆರಡು ಪಂದ್ಯಗಳಲ್ಲಿ ಇಬ್ಬರು ಪರಿಪೂರ್ಣ ವೇಗಿಗಳನ್ನು ಕಣಕ್ಕಿಳಿಸಿತ್ತು. ಆದರೆ ಮೂರನೇ ಪಂದ್ಯದಲ್ಲಿ ಇಬ್ಬರು ಪರಿಪೂರ್ಣ ಸ್ಪಿನ್ನರ್​ಗಳೊಂದಿಗೆ ಆಡಿದೆ. ಇದೀಗ ಸೆಮಿಫೈನಲ್​ನಲ್ಲಿ ಸ್ಪಿನ್ನರ್​ಗೆ ಒತ್ತು ನೀಡುವುದಾ ಅಥವಾ ವೇಗಿಗಳಿಗೆ ಮಣೆ ಹಾಕುವುದಾ ಎಂಬ ಚಿಂತೆಯೊಂದು ಟೀಮ್ ಇಂಡಿಯಾಗೆ ಶುರುವಾಗಿದೆ.

ಏಕೆಂದರೆ ಟೀಮ್ ಇಂಡಿಯಾ ಆಡಿದ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದೆ. ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ವೇಗಿ ಹರ್ಷಿತ್ ರಾಣಾ ಬದಲಿಗೆ ವರುಣ್ ಚಕ್ರವರ್ತಿ ಅವರನ್ನು ಕಣಕ್ಕಿಳಿಸಲಾಗಿತ್ತು. ಹೀಗೆ ಸಿಕ್ಕ ಅವಕಾಶದಲ್ಲಿ ವರುಣ್ ಅತ್ಯದ್ಭುತ ಪ್ರದರ್ಶನ ನೀಡಿದ್ದಾರೆ. ಅಲ್ಲದೆ 5 ವಿಕೆಟ್ ಕಬಳಿಸಿಯೂ ಮಿಂಚಿದ್ದಾರೆ.

ಇದೀಗ ಸೆಮಿಫೈನಲ್​ನಲ್ಲಿ ವರುಣ್ ಚಕ್ರವರ್ತಿಯನ್ನು ಕಣಕ್ಕಿಳಿಸಲು ಬಯಸಿದರೆ, ಹರ್ಷಿತ್ ರಾಣಾ ಅವರನ್ನು ಕೈ ಬಿಡಬೇಕಾಗುತ್ತದೆ. ಇದರಿಂದ ಮೊಹಮ್ಮದ್ ಶಮಿ ರೂಪದಲ್ಲಿ ಏಕೈಕ ಪರಿಪೂರ್ಣ ವೇಗಿಯನ್ನು ಮಾತ್ರ ಆಡಿಸಲು ಸಾಧ್ಯವಾಗುತ್ತದೆ.

ಇನ್ನು ಹರ್ಷಿತ್ ರಾಣಾ ಹಾಗೂ ವರುಣ್ ಚಕ್ರವರ್ತಿಯನ್ನು ಕಣಕ್ಕಿಳಿಸಲು ಬಯಸಿದರೆ, ಕುಲ್ದೀಪ್ ಯಾದವ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಬೇಕಾಗುತ್ತದೆ. ಆದರೆ ಅನುಭವಿ ಸ್ಪಿನ್ನರ್ ಕುಲ್ದೀಪ್ ಅವರನ್ನು ನಿರ್ಣಾಯಕ ಪಂದ್ಯಕ್ಕೂ ಮುನ್ನ ಕೈ ಬಿಡುವ ದುಸ್ಸಾಹಸಕ್ಕೆ ಟೀಮ್ ಇಂಡಿಯಾ ಕೈ ಹಾಕಲಿದೆಯಾ ಎಂಬುದೇ ಪ್ರಶ್ನೆ.

ಒಂದು ವೇಳೆ ಆಸ್ಟ್ರೇಲಿಯಾ ವಿರುದ್ಧ ಸ್ಪಿನ್ ಅಸ್ತ್ರಗಳನ್ನು ಪ್ರಯೋಗಿಸಲು ಮುಂದಾದರೆ, ವರುಣ್ ಚಕ್ರವರ್ತಿ ಹಾಗೂ ಕುಲ್ದೀಪ್ ಯಾದವ್ ಕಣಕ್ಕಿಳಿಯಲಿದ್ದಾರೆ. ಅತ್ತ ಹರ್ಷಿತ್ ರಾಣಾ ನಿರ್ಣಾಯಕ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಇನ್ನು ಮೊಹಮ್ಮದ್ ಶಮಿಗೆ ಜೊತೆ ಹಾರ್ದಿಕ್ ಪಾಂಡ್ಯ ವೇಗದ ಬೌಲಿಂಗ್ ಜವಾಬ್ದಾರಿಯನ್ನು ಹೊತ್ತುಕೊಳ್ಳಲಿದ್ದಾರೆ.

ಈ ಮೂಲಕ ಟೀಮ್ ಇಂಡಿಯಾ 8+3 ಸಂಯೋಜನೆಯಲ್ಲಿ ಪ್ಲೇಯಿಂಗ್ ಇಲೆವೆನ್ ರೂಪಿಸಬಹುದು.  ಅದರಂತೆ ಇಲ್ಲಿ ಆರಂಭಿಕರಾಗಿ ರೋಹಿತ್ ಶರ್ಮಾ, ಶುಭ್​ಮನ್ ಗಿಲ್ ಕಣಕ್ಕಿಳಿದರೆ, ಮೂರನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಬ್ಯಾಟ್ ಬೀಸಲಿದ್ದಾರೆ.

ಇನ್ನು ನಾಲ್ಕನೇ ಮತ್ತು ಐದನೇ ಕ್ರಮಾಂಕಗಳಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಅಕ್ಷರ್ ಪಟೇಲ್ ಕಾಣಿಸಿಕೊಳ್ಳಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಆಗಿ ಕೆಎಲ್ ರಾಹುಲ್ ಕಣಕ್ಕಿಳಿಯಲಿದ್ದು, ಆಲ್​ರೌಂಡರ್​ಗಳಾಗಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಆಡುವ ಬಳಗದಲ್ಲಿ ಸ್ಥಾನ ಪಡೆಯಲಿದ್ದಾರೆ.

ಇದನ್ನೂ ಓದಿ: IPL 2025: RCB ತಂಡದ ಹೊಸ ಜೆರ್ಸಿ ಫೋಟೋ ಲೀಕ್?

ಬೌಲರ್​ಗಳ ವಿಭಾಗದಲ್ಲಿ ಸ್ಪಿನ್ನರ್​ಗಳಾಗಿ ವರುಣ್ ಚಕ್ರವರ್ತಿ ಹಾಗೂ ಕುಲ್ದೀಪ್ ಯಾದವ್ ಕಾಣಿಸಿಕೊಂಡರೆ, ವೇಗಿಯಾಗಿ ಮೊಹಮ್ಮದ್ ಶಮಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…

  1. ರೋಹಿತ್ ಶರ್ಮಾ (ನಾಯಕ)
  2. ಶುಭ್​ಮನ್ ಗಿಲ್
  3. ವಿರಾಟ್ ಕೊಹ್ಲಿ
  4. ಶ್ರೇಯಸ್ ಅಯ್ಯರ್
  5. ಕೆಎಲ್ ರಾಹುಲ್ (ವಿಕೆಟ್ ಕೀಪರ್)
  6. ಅಕ್ಷರ್ ಪಟೇಲ್
  7. ಹಾರ್ದಿಕ್ ಪಾಂಡ್ಯ
  8. ರವೀಂದ್ರ ಜಡೇಜಾ
  9. ಕುಲ್ದೀಪ್ ಯಾದವ್
  10. ವರುಣ್ ಚಕ್ರವರ್ತಿ
  11. ಮೊಹಮ್ಮದ್ ಶಮಿ.
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್