AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲ್ವರು ಆರಂಭಿಕರು: ಟೀಮ್ ಇಂಡಿಯಾದ ಓಪನಿಂಗ್ ಜೋಡಿ ಯಾರು?

India vs Australia: ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಇಶಾನ್ ಕಿಶನ್ ಕೂಡ ಏಷ್ಯಾಕಪ್​ನ ಫೈನಲ್​ನಲ್ಲಿ ಆರಂಭಿಕನಾಗಿ ಆಡಿದ್ದರು. ಇದೀಗ ಹಿಟ್​ಮ್ಯಾನ್ ಅನುಪಸ್ಥಿತಿಯಲ್ಲಿ ಎಡಗೈ ದಾಂಡಿಗ ಗಿಲ್ ಜೊತೆ ಮತ್ತೆ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ. ಮತ್ತೊಂದೆಡೆ ಇನ್ನಿಬ್ಬರು ಆಟಗಾರರು ಕೂಡ ಆರಂಭಿಕನ ಸ್ಥಾನದ ರೇಸ್​ನಲ್ಲಿದ್ದಾರೆ.

ನಾಲ್ವರು ಆರಂಭಿಕರು: ಟೀಮ್ ಇಂಡಿಯಾದ ಓಪನಿಂಗ್ ಜೋಡಿ ಯಾರು?
Team India
TV9 Web
| Edited By: |

Updated on:Sep 21, 2023 | 6:37 PM

Share

ಭಾರತ-ಆಸ್ಟ್ರೇಲಿಯಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿ ಶುಕ್ರವಾರದಿಂದ (ಸೆ.22) ಶುರುವಾಗಲಿದೆ. ಮೊಹಾಲಿಯಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಪರ ಆರಂಭಿಕರಾಗಿ ಕಾಣಿಸಿಕೊಳ್ಳುವುದು ಯಾರು ಎಂಬ ಕುತೂಹಲ ಏರ್ಪಟ್ಟಿದೆ. ಏಕೆಂದರೆ ತಂಡದಲ್ಲಿ ಒಟ್ಟು ನಾಲ್ವರು ಆರಂಭಿಕ ಆಟಗಾರರಿದ್ದಾರೆ.

ಅತ್ತ ರೋಹಿತ್ ಶರ್ಮಾ ಈ ಪಂದ್ಯದಿಂದ ಹೊರಗುಳಿದಿರುವ ಕಾರಣ ಆರಂಭಿಕನ ಸ್ಥಾನದಲ್ಲಿ ಬದಲಾವಣೆ ಕಂಡು ಬರುವುದು ಖಚಿತ. ಇಲ್ಲಿ ಓಪನರ್ ಸ್ಥಾನಕ್ಕಾಗಿ ನಾಲ್ವರು ಆಟಗಾರರ ನಡುವೆ ಪೈಪೋಟಿ ಇರುವುದರಿಂದ ಯಾರು ಇನಿಂಗ್ಸ್​ ಆರಂಭಿಸಲಿದ್ದಾರೆ ಎಂಬ ಪ್ರಶ್ನೆ ಮೂಡುವುದು ಸಹಜ.

ಒಂದು ಕಡೆ ಭಾರತದ ತಂಡದ ಖಾಯಂ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ಕಣಕ್ಕಿಳಿಯುವುದು ಖಚಿತ ಎನ್ನಬಹುದು. ಇನ್ನೊಂದು ಬದಿಯಲ್ಲಿ ಕಣಕ್ಕಿಳಿಯಲು ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್ ಹಾಗೂ ಕೆಎಲ್ ರಾಹುಲ್ ನಡುವೆ ಪೈಪೋಟಿ ಇದೆ.

ಸಾಮಾನ್ಯವಾಗಿ ರೋಹಿತ್ ಶರ್ಮಾ ತಂಡದಲ್ಲಿದ್ದರೆ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯುತ್ತಾರೆ. ಆದರೆ ಅನುಭವಿ ಆಟಗಾರರ ಅನುಪಸ್ಥಿತಿಯಲ್ಲಿ ರಾಹುಲ್ ಅಗ್ರ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಮತ್ತೊಂದೆಡೆ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಇಶಾನ್ ಕಿಶನ್ ಕೂಡ ಏಷ್ಯಾಕಪ್​ನ ಫೈನಲ್​ನಲ್ಲಿ ಆರಂಭಿಕನಾಗಿ ಆಡಿದ್ದರು. ಇದೀಗ ಹಿಟ್​ಮ್ಯಾನ್ ಅನುಪಸ್ಥಿತಿಯಲ್ಲಿ ಎಡಗೈ ದಾಂಡಿಗ ಗಿಲ್ ಜೊತೆ ಮತ್ತೆ ಇನಿಂಗ್ಸ್ ಆರಂಭಿಸುವ ವಿಶ್ವಾಸದಲ್ಲಿದ್ದಾರೆ.

ಆದರೆ ಅತ್ತ ಏಷ್ಯನ್ ಗೇಮ್ಸ್​ಗಾಗಿ ತೆರಳಬೇಕಿರುವ ಭಾರತ ತಂಡದ ನಾಯಕರಾಗಿರುವ ರುತುರಾಜ್ ಗಾಯಕ್ವಾಡ್ ಕೂಡ ಆರಂಭಿಕ ಅಟಗಾರ. ಆಸ್ಟ್ರೇಲಿಯಾ ವಿರುದ್ಧದ ಪಂದ್ಯಗಳಲ್ಲಿ ಕಣಕ್ಕಿಳಿದು ಏಷ್ಯನ್ ಗೇಮ್ಸ್​ಗಾಗಿ ಸಿದ್ಧತೆಗಳನ್ನು ಆರಂಭಿಸುವ ಇರಾದೆಯಲ್ಲಿದ್ದಾರೆ ರುತುರಾಜ್. ಹೀಗಾಗಿ ಗಾಯಕ್ವಾಡ್ ಕೂಡ ಆರಂಭಿಕನಾಗಿ ಕಣಕ್ಕಿಳಿಯುವ ಆಕಾಂಕ್ಷಿಯಾಗಿದ್ದಾರೆ.

ಒಟ್ಟಿನಲ್ಲಿ ಒಂದು ಸ್ಥಾನಕ್ಕಾಗಿ ಇದೀಗ ಮೂವರು ಆಟಗಾರರ ಹೆಸರು ಮುಂಚೂಣಿಯಲ್ಲಿದೆ. ಇವರಲ್ಲಿ ನಾಯಕ ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿಯಲು ನಿರ್ಧರಿಸಿದರೆ, ಇಶಾನ್ ಕಿಶನ್ ಹಾಗೂ ರುತುರಾಜ್ ಗಾಯಕ್ವಾಡ್ ನಡುವೆ ಆರಂಭಿಕನ ಸ್ಥಾನಕ್ಕಾಗಿ ನೇರ ಪೈಪೋಟಿ ಕಂಡು ಬರಲಿದೆ. ಹೀಗಾಗಿ ಇವರಲ್ಲಿ ಯಾರಿಗೆ ಅವಕಾಶ ಸಿಗಲಿದೆ ಕಾದು ನೋಡಬೇಕಿದೆ.

ಇದನ್ನೂ ಓದಿ: ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್

ಮೊದಲ 2 ಪಂದ್ಯಗಳಿಗೆ ಭಾರತ ತಂಡ: ಕೆಎಲ್ ರಾಹುಲ್ (ನಾಯಕ), ಶುಭ್​ಮನ್ ಗಿಲ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್ ಮತ್ತು ವಾಷಿಂಗ್ಟನ್ ಸುಂದರ್.

Published On - 6:36 pm, Thu, 21 September 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ