AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕ ಅಭಿಮನ್ಯು ಈಶ್ವರನ್ ಹೊರಕ್ಕೆ: ರಿಯಾನ್ ಪರಾಗ್​ಗೆ ಕ್ಯಾಪ್ಟನ್ ಪಟ್ಟ

Duleep trophy 2025: ದುಲೀಪ್ ಟ್ರೋಫಿ ಟೂರ್ನಿಯು ಆಗಸ್ಟ್ 28 ರಿಂದ ಸೆಪ್ಟೆಂಬರ್ 11 ರವರೆಗೆ ನಡೆಯಲಿದೆ. 6 ತಂಡಗಳು ಕಣಕ್ಕಿಳಿಯಲಿರುವ ಈ ಟೂರ್ನಿಯು ನಾಕೌಟ್ ಮಾದರಿಯಲ್ಲಿ ಜರುಗಲಿದೆ. ಅದರಂತೆ ಮೊದಲ ಸುತ್ತಿನಲ್ಲಿ ಕ್ವಾರ್ಟರ್ ಫೈನಲ್ ಪಂದ್ಯಗಳು ಜರುಗಲಿದ್ದು, ಇದಾದ ಬಳಿಕ ಸೆಮಿಫೈನಲ್ ಆಡಲಿದ್ದಾರೆ.

ನಾಯಕ ಅಭಿಮನ್ಯು ಈಶ್ವರನ್ ಹೊರಕ್ಕೆ: ರಿಯಾನ್ ಪರಾಗ್​ಗೆ ಕ್ಯಾಪ್ಟನ್ ಪಟ್ಟ
Abhimanyu - Riyan Parag
ಝಾಹಿರ್ ಯೂಸುಫ್
|

Updated on:Aug 28, 2025 | 12:53 PM

Share

ದುಲೀಪ್ ಟ್ರೋಫಿ ಟೆಸ್ಟ್ ಟೂರ್ನಿಯು ಇಂದಿನಿಂದ ಶುರುವಾಗಿದೆ. ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಉತ್ತರ ವಲಯ ಹಾಗೂ ಪೂರ್ವ ವಲಯ ತಂಡಗಳು ಮುಖಾಮುಖಿಯಾಗಿದೆ. ಆದರೆ ಈ ಪಂದ್ಯದಿಂದ ಪೂರ್ವ ವಲಯ ತಂಡದ ನಾಯಕ ಅಭಿಮನ್ಯು ಈಶ್ವರನ್ ಹೊರಗುಳಿದಿದ್ದಾರೆ.

ಇದಕ್ಕೂ ಮುನ್ನ ಪೂರ್ವ ವಲಯ ತಂಡದ ನಾಯಕರಾಗಿ ಇಶಾನ್ ಕಿಶನ್ ಆಯ್ಕೆಯಾಗಿದ್ದರು. ಆದರೆ ಗಾಯದ ಸಮಸ್ಯೆಯ ಕಾರಣ ಕಿಶನ್ ಟೂರ್ನಿಯಿಂದ ಹೊರಗುಳಿದಿದ್ದರು. ಹೀಗಾಗಿ ಅಭಿಮನ್ಯು ಈಶ್ವರನ್ ಅವರಿಗೆ ಕ್ಯಾಪ್ಟನ್ ನೀಡಲಾಗಿತ್ತು. ಆದರೆ ಗುರುವಾರ ಬೆಳಿಗ್ಗೆ ಟಾಸ್ ವೇಳೆ ರಿಯಾನ್ ಪರಾಗ್ ನಾಯಕರಾಗಿ ಕಾಣಿಸಿಕೊಂಡಿದ್ದಾರೆ.

ಅಭಿಮನ್ಯು ಈಶ್ವರನ್ ಹೊರಗುಳಿದಿದ್ದೇಕೆ?

ಅಭಿಮನ್ಯು ಈಶ್ವರನ್ ಅವರು ಜ್ವರದಿಂದ ಬಳಲುತ್ತಿದ್ದು, ಹೀಗಾಗಿ ಮೊದಲ ಪಂದ್ಯದಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಈ ಪಂದ್ಯದಲ್ಲಿ ಪೂರ್ವ ವಲಯ ತಂಡದ ನಾಯಕನಾಗಿ ರಿಯಾನ್ ಪರಾಗ್ ಕಾಣಿಸಿಕೊಂಡಿದ್ದಾರೆ.

ಇನ್ನು ರಿಯಾನ್ ಪರಾಗ್ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಆಟಗಾರರಾದ ಮೊಹಮ್ಮದ್ ಶಮಿ, ಮುಖೇಶ್ ಕುಮಾರ್ ಕಣಕ್ಕಿಳಿದಿದ್ದಾರೆ.

ಶುಭ್​ಮನ್ ಗಿಲ್ ಅಲಭ್ಯ:

ಈ ಬಾರಿಯ ದುಲೀಪ್ ಟ್ರೋಫಿಯಲ್ಲಿ ಭಾರತ ಟೆಸ್ಟ್ ತಂಡದ ನಾಯಕ ಶುಭ್​ಮನ್ ಗಿಲ್ ಉತ್ತರ ವಲಯ ಟೀಮ್​ನ ಕ್ಯಾಪ್ಟನ್ ಆಗಿ ಕಣಕ್ಕಿಳಿಯಬೇಕಿತ್ತು. ಆದರೆ ಅನಾರೋಗ್ಯದ ಕಾರಣ ಅವರು ಸಹ ಟೂರ್ನಿಯಿಂದ ಹೊರಗುಳಿದಿದ್ದಾರೆ. ಹೀಗಾಗಿ ಉತ್ತರ ವಲಯ ತಂಡವನ್ನು ಅಂಕಿತ್ ಕುಮಾರ್ ಮುನ್ನಡೆಸುತ್ತಿದ್ದಾರೆ.

ಮ್ಯಾಚ್ ವಿವರ:

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪೂರ್ವ ವಲಯ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಉತ್ತರ ವಲಯ ತಂಡವು ಮೊದಲು ಬ್ಯಾಟಿಂಗ್ ಆರಂಭಿಸಿದೆ. ಅಲ್ಲದೆ 35 ಓವರ್​ಗಳ ಮುಕ್ತಾಯದ ವೇಳೆಗೆ ಉತ್ತರ ವಲಯ ತಂಡವು 3 ವಿಕೆಟ್ ಕಳೆದುಕೊಂಡು 140 ರನ್ ಕಲೆಹಾಕಿದೆ.

ಉತ್ತರ ವಲಯ ಪ್ಲೇಯಿಂಗ್ ಇಲೆವೆನ್: ಶುಭಂ ಖಜುರಿಯಾ , ಅಂಕಿತ್ ಕುಮಾರ್ (ನಾಯಕ) , ಯಶ್ ಧುಲ್ , ಆಯುಷ್ ಬದೋನಿ , ಕನ್ಹಯ್ಯಾ ವಾಧವನ್ (ವಿಕೆಟ್ ಕೀಪರ್ ) , ಸಾಹಿಲ್ ಲೋತ್ರಾ , ನಿಶಾಂತ್ ಸಿಂಧು , ಹರ್ಷಿತ್ ರಾಣಾ , ಔಕಿಬ್ ನಬಿ ದಾರ್ , ಮಯಾಂಕ್ ದಾಗರ್ , ಅರ್ಷದೀಪ್ ಸಿಂಗ್.

ಇದನ್ನೂ ಓದಿ: IPL 2026: ಐಪಿಎಲ್ ನಿಯಮ… RCB ಈ ಇಬ್ಬರನ್ನು ಬಿಡುಗಡೆ ಮಾಡಲೇಬೇಕು!

ಪೂರ್ವ ವಲಯ ಪ್ಲೇಯಿಂಗ್ ಇಲೆವೆನ್:  ಉತ್ಕರ್ಷ್ ಸಿಂಗ್ , ಶರಣದೀಪ್ ಸಿಂಗ್ , ವಿರಾಟ್ ಸಿಂಗ್ , ರಿಯಾನ್ ಪರಾಗ್ (ನಾಯಕ) , ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್) , ಶ್ರೀದಾಮ್ ಪಾಲ್ , ಸೂರಜ್ ಸಿಂಧು ಜೈಸ್ವಾಲ್ , ಮುಖ್ತಾರ್ ಹುಸೇನ್ , ಮೊಹಮ್ಮದ್ ಶಮಿ , ಮನಿಷಿ , ಮುಖೇಶ್ ಕುಮಾರ್.

Published On - 12:53 pm, Thu, 28 August 25

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ